ಸಲ್ಮಾನ್ ಖಾನ್, ಶಾರುಖ್ ಖಾನ್(ಚಿತ್ರ ಕೃಪೆ: ಕಲರ್ಸ್ ಚಾನೆಲ್) 
ಬಾಲಿವುಡ್

ಚಪ್ಪಲಿಯೊಂದಿಗೆ ದೇಗುಲ ಪ್ರವೇಶ: ಶಾರುಕ್, ಸಲ್ಮಾನ್ ತಪ್ಪೆಸಗಿಲ್ಲ- ದೆಹಲಿ ಪೊಲೀಸ್

ಬಾಲಿವುಡ್ ಸ್ಟಾರ್ ಗಳಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ರಿಯಾಲಿಟಿ ಷೋ ಚಿತ್ರೀಕರಣದ...

ನವದೆಹಲಿ: ಬಾಲಿವುಡ್ ಸ್ಟಾರ್ ಗಳಾದ ಶಾರುಖ್ ಖಾನ್ ಮತ್ತು ಸಲ್ಮಾನ್ ಖಾನ್ ಅವರು ಬಿಗ್ ಬಾಸ್ ರಿಯಾಲಿಟಿ ಷೋ ಚಿತ್ರೀಕರಣದ ವೇಳೆ ಯಾವುದೇ ತಪ್ಪು ಮಾಡಿಲ್ಲ ಎಂದು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಶಾರುಕ್ ಮತ್ತು ಸಲ್ಮಾನ್ ಖಾನ್ ಹಿಂದೂ ನಂಬಿಕೆಗಳನ್ನು ಘಾಷಿಗೊಳಿಸಿದ್ದಾರೆ ಎಂಬುದು ವಿಚಾರಣೆಗೆ ಅರ್ಹವಾದ ಪ್ರಕರಣ ಅಲ್ಲ. ಬಿಗ್ ಬಾಸ್ ಷೋ ನಡೆಸುವ ಸೆಟ್ ಆಗಿ ಕಾಳಿ ದೇಗುಲವನ್ನು ನಿರ್ಮಿಸಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ತರುವಂತಹ ಉದ್ದೇಶವನ್ನು ಶಾರುಕ್, ಸಲ್ಮಾನ್ ಹೊಂದಿರಲಿಲ್ಲ ಎಂದು ನ್ಯಾಯಾಲಯದಲ್ಲಿ ದೆಹಲಿ ಪೊಲೀಸರು ಹೇಳಿದ್ದಾರೆ. 
ಸ್ಟುಡಿಯೋವೊಂದರಲ್ಲಿ ಈ ಚಿತ್ರೀಕರಣ ನಡೆದಿದ್ದು, ಯಾವುದೇ ಕಾಳಿ ದೇವಸ್ಥಾನದಲ್ಲಿ ನಡೆದಿಲ್ಲ. ಬಿಗ್ ಬಾಸ್ ಷೋಗಾಗಿ ಕಾಳಿ ದೇಗುಲದ ಸೆಟ್ ನಿರ್ಮಿಸಲಾಗಿತ್ತು. ಅಲ್ಲಿ ಪ್ರತಿ ಷೋ ನಡೆಸಿ ಕೊಡುವ ಹಾಗೇ ನಡೆಸಿ ಕೊಟ್ಟಿದ್ದಾರೆ. ಇದರಿಂದ ಯಾವುದೇ ದುರುದ್ದೇಶವಿಲ್ಲ ಎಂದು ನ್ಯಾಯಾಲಯಕ್ಕೆ ವರದಿ ನೀಡಿದ್ದಾರೆ. 
ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಶಾರುಖ್ ಖಾನ್ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ದೆಹಲಿ ಪೊಲೀಸರಿಗೆ ಸೂಚಿಸಿತ್ತು.
ಬಿಗ್ ಬಾಸ್ ಸೀಸನ್ 9 ಚಿತ್ರೀಕರಣದ ವೇಳೆ ಶೂ ಕಳಚದೇ ಕಾಳಿ ದೇವಾಲಯದ ಸೆಟ್ ಅನ್ನು ಪ್ರವೇಶಿಸುವ ಮೂಲಕ ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತ ಟಿವಿ ತಂಡದ ಸದಸ್ಯರು ಭಕ್ತರ ಮನಸ್ಸಿಗೆ ಘಾಸಿ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಗೌರವ್ ಗುಲತಿ ಎಂಬುವವರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT