ನಟಿ ವಿದ್ಯಾ ಬಾಲನ್ 
ಬಾಲಿವುಡ್

ಪತಿಯ ಸಿನೆಮಾಗಳಲ್ಲಿ ನಟಿಸುವುದಿಲ್ಲವೇಕೆ ಎಂಬುದಕ್ಕೆ ಕಾರಣ ನೀಡಿದ ವಿದ್ಯಾ ಬಾಲನ್

ಬಾಲಿವುಡ್ ನಿರ್ಮಾಪಕ ಸಿದ್ಧಾರ್ಥ್ ರಾಯ್ ಕಪೂರ್ ಅವರನ್ನು ಮದುವೆಯಾದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ವಿದ್ಯಾ ಬಾಲನ್, ಆರೋಗ್ಯಕರ ಮದುವೆ ಸಂಬಂಧ ಉಳಿಸಿಕೊಳ್ಳುವುದಕ್ಕೆ

ಮುಂಬೈ: ಬಾಲಿವುಡ್ ನಿರ್ಮಾಪಕ ಸಿದ್ಧಾರ್ಥ್ ರಾಯ್ ಕಪೂರ್ ಅವರನ್ನು ಮದುವೆಯಾದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ವಿದ್ಯಾ ಬಾಲನ್, ಆರೋಗ್ಯಕರ ಮದುವೆ ಸಂಬಂಧ ಉಳಿಸಿಕೊಳ್ಳುವುದಕ್ಕೆ ಪತಿಯ ಸಿನೆಮಾಗಳಲ್ಲಿ ಕೆಲಸ ಮಾಡದೇ ಇರುವುದು ಒಳ್ಳೆಯದು ಎಂದಿದ್ದಾರೆ

ತಮ್ಮ ಪತಿಯ ಹೊತೆಗೆ ಕೆಲಸ ಮಾಡುವುದಿಲ್ಲವೇಕೆ ಎಂಬ ಪ್ರಶ್ನೆಗೆ "ನಮ್ಮ ಮದುವೆಯ ಆರೋಗ್ಯಕರ ಸಂಬಂಧಕ್ಕಾಗಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡದಿರಲು ಪ್ರಯತ್ನಿಸುತ್ತಿದ್ದೇವೆ" ಎಂದಿದ್ದಾರೆ.

"ಈ ಕಾರಣದಿಂದ ಕೆಲವೊಮ್ಮೆ ಒಳ್ಳೆಯ ಸಿನೆಮಾಗಳು ಕೈತಪ್ಪಿ ಹೋಗುತ್ತವೆ ಆದರೆ ಇದು ಅವಶ್ಯಕ ತ್ಯಾಗ. ನಮ್ಮ ವೈಯಕ್ತಿಕ ಜೀವನ ಮತ್ತು ವೃತ್ತಿಜೀವನವನ್ನು ಬೆರೆಸಲು ನನಗೆ ಇಷ್ಟವಿಲ್ಲ" ಎಂದು ಕೂಡ ಅವರು ಹೇಳಿದ್ದಾರೆ.

"ಯಾರಾದರು ಜೋಡಿಗಳು ಒಟ್ಟಿಗೆ ಕೆಲಸ ಮಾಡಿದಾಗ ನನಗೆ ಅದ್ಭುತ ಎನಿಸುತ್ತದೆ. ನಾವಿಬ್ಬರೂ ಕೆಲಸದ ಬಗೆಗೆ ಒಟ್ಟಿಗೆ ಚರ್ಚಿಸುತ್ತೇವೆ ಆದರೆ ಒಟ್ಟಿಗೇ ಕೆಲಸ ಮಾಡದೆ ಇರುವುದು ನಮ್ಮ ಮದುವೆ ಸಂಬಂಧಕ್ಕೆ ಒಳ್ಳೆಯದು" ಎಂದಿದ್ದಾರೆ ವಿದ್ಯಾ.

ವಿದ್ಯಾ ತಮ್ಮ ಮುಂದಿನ ಚಿತ್ರ '' ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ರಿಭು ದಾಸಗುಪ್ತ ನಿರ್ದೇಶನದ ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ನವಾಜುದ್ದೀನ್ ಸಿದ್ಧಿಕಿ ಮ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT