ಉಡ್ತಾ ಪಂಜಾಬ್ ಚಿತ್ರದ ಸ್ಟಿಲ್ 
ಬಾಲಿವುಡ್

'ಉಡ್ತಾ ಪಂಜಾಬ್'ಗೆ 1 ಕಟ್ ನೊಂದಿಗೆ 'ಎ' ಸರ್ಟಿಫಿಕೇಟ್ ನೀಡಿ: ಬಾಂಬೆ ಹೈಕೋರ್ಟ್

ಕೇಂದ್ರೀಯ ಚಲನಚಿತ್ರ ದೃಢೀಕರಣ ಮಂಡಳಿ(ಸಿಬಿಎಫ್ ಸಿ) ಸೂಚಿಸಿದ್ದ 89ಕಟ್ ಗಳನ್ನು ಒಂದಕ್ಕಿಳಿಸಿರುವ ಬಾಂಬೆ ಹೈಕೋರ್ಟ್, 'ಉಡ್ತಾ ಪಂಜಾಬ್'ಗೆ 1 ಕಟ್ ನೊಂದಿಗೆ...

ಮುಂಬೈ: ಕೇಂದ್ರೀಯ ಚಲನಚಿತ್ರ ದೃಢೀಕರಣ ಮಂಡಳಿ(ಸಿಬಿಎಫ್ ಸಿ) ಸೂಚಿಸಿದ್ದ 89ಕಟ್ ಗಳನ್ನು ಒಂದಕ್ಕಿಳಿಸಿರುವ ಬಾಂಬೆ ಹೈಕೋರ್ಟ್, 'ಉಡ್ತಾ ಪಂಜಾಬ್'ಗೆ 1 ಕಟ್ ನೊಂದಿಗೆ 'ಎ' ಸರ್ಟಿಫಿಕೇಟ್ ನೀಡುವಂತೆ ಸೋಮವಾರ ಆದೇಶಿಸಿದೆ. ಇದರಿಂದ ಸಿಬಿಎಫ್ ಸಿ ಅಧ್ಯಕ್ಷ ಪಹ್ಲಾಜ್ ನಿಹಲಾನಿ ಅವರಿಗೆ ತೀವ್ರ ಮುಖಭಂಗವಾಗಿದೆ.
ನೈಜ ಕಥೆಯಾಧರಿಸಿ ಸಿನಿಮಾ ನಿರ್ದೇಶಿಸಿದ್ದ ಅನುರಾಗ್ ಕಶ್ಯಪ್ ಅವರಿಗೆ ಸೆನ್ಸಾರ್ ಮಂಡಳಿ ಆಘಾತ ನೀಡಿತ್ತು. ಪಂಜಾಬಿನ ಡ್ರಗ್ ಮಾಫಿಯಾ ಸತ್ಯಾಸತ್ಯತೆ ಬಿಚ್ಚಿಡುವ ಉಡ್ತಾ ಪಂಜಾಬ್ ಚಿತ್ರದ 89 ದೃಶ್ಯಗಳಿಗೆ ಕತ್ತರಿ ಹಾಕಲಾಗಿತ್ತು. ಆದರೆ ಸೆನ್ಸಾರ್ ಮಂಡಳಿಯ 89 ಕಟ್ ಗಳ ವಿರುದ್ಧ ಚಿತ್ರತಂಡ ಹೈಕೋರ್ಟ್ ಮೆಟ್ಟಿಲೇರಿತ್ತು. 
ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಇಂದು ಅಂತಿಮ ತೀರ್ಪು ಪ್ರಕಟಿಸಿದೆ. ಅಲ್ಲದೆ ಚಲನ ಚಿತ್ರಗಳಿಗೆ ಕತ್ತರಿ ಪ್ರಯೋಗ ಮಾಡುವ (ಸೆನ್ಸಾರ್) ಅಧಿಕಾರವನ್ನು ಶಾಸನಬದ್ಧವಾಗಿ ಸಿಬಿಎಫ್​ಸಿ ಹೊಂದಿಲ್ಲ. ಏಕೆಂದರೆ ಸಿನೆಮಾಟೋಗ್ರಾಫ್ ಕಾಯ್ದೆಯಲ್ಲಿ ಸೆನ್ಸಾರ್ ಎಂಬ ಪದ ಸೇರ್ಪಡೆಯಾಗಿಲ್ಲ ಎಂದು ನ್ಯಾಯಾಲಯ ಹೇಳಿದೆ.
‘ಉಡ್ತಾ ಪಂಜಾಬ್’ಚಿತ್ರವು ಸ್ಥಳ ಒಂದರಲ್ಲಿ ಮಾದಕ ದ್ರವ್ಯ ಹಾವಳಿಯನ್ನು ತೋರಿಸುವ ಚಿತ್ರ. ಅದರಲ್ಲಿ ಪಂಜಾಬನ್ನು ಕೆಟ್ಟದಾಗಿ ತೋರಿಸುವಂತಹ ಅಥವಾ ರಾಷ್ಟ್ರದ ಸಾರ್ವಭೌಮತ್ವ ಮತ್ತು ಸಮಗ್ರತೆದೆ ಧಕ್ಕೆ ಉಂಟು ಮಾಡುವಂತಹ ಯಾವುದೇ ವಿಚಾರ ನಮಗೆ ಕಾಣುತ್ತಿಲ್ಲ. ಸೃಜನಾತ್ಮಕ ಸ್ವಾತಂತ್ರ್ಯನ್ನು ಅನಗತ್ಯವಾಗಿ ಹತ್ತಿಕ್ಕಬಾರದು. ಚಿತ್ರದಲ್ಲಿ ಏನು ಇರಬೇಕು ಎಂದು ಯಾರೂ ಚಿತ್ರನಿರ್ಮಾಪಕನಿಗೆ ನಿರ್ದೇಶನ ನೀಡುವಂತಿಲ್ಲ ಎಂದು ನ್ಯಾಯಾಲಯ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!