ಜಿಯಾಖಾನ್ 
ಬಾಲಿವುಡ್

ಜಿಯಾಖಾನ್ ಸಾವು ಆತ್ಮಹತ್ಯೆ, ತನಿಖೆಯ ಅಗತ್ಯವಿಲ್ಲ: ಸಿಬಿಐ

ನಟಿ ಜಿಯಾ ಖಾನ್ ಅವರ ಸಾವು ಆತ್ಮಹತ್ಯೆಯಾಗಿದ್ದು, ಈ ಸಂಬಂಧ ತನಿಖೆಯ ಅಶ್ಯಕತೆಯಿಲ್ಲ ಎಂದು ಕೇಂದ್ರೀಯ ತನಿಖಾ ದಳ ಬಾಂಬೆ ಹೈಕೊರ್ಟ್​ಗೆ ಹೇಳಿಕೆ..

ನವದೆಹಲಿ: ನಟಿ ಜಿಯಾ ಖಾನ್ ಅವರ ಸಾವು ಆತ್ಮಹತ್ಯೆಯಾಗಿದ್ದು, ಈ ಸಂಬಂಧ ಮತ್ತೆ ತನಿಖೆಯ ಅಶ್ಯಕತೆಯಿಲ್ಲ ಎಂದು ಕೇಂದ್ರೀಯ ತನಿಖಾ ದಳ ಬಾಂಬೆ ಹೈಕೊರ್ಟ್​ಗೆ ಹೇಳಿಕೆ ನೀಡಿದೆ.

ಸಾಕ್ಷ್ಯಾಧಾರಗಳ ಪ್ರಕಾರ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ನೇಮಿಸಬೇಕು ಹಾಗೂ ಸಿಬಿಐ ತಂಡ ತನಿಖೆಯಲ್ಲಿ ಎಫ್​ಬಿಐ ಸಹಾಯ ಪಡೆಯಬೇಕು ಎಂದು ಜಿಯಾ ಖಾನ್ ಅವರ ತಾಯಿ ಸಲ್ಲಿಸಿದ್ದ ಅರ್ಜಿಗೆ ಕೇಂದ್ರೀಯ ತನಿಖಾ ದಳ ಈ ಹೇಳಿಕೆ ನೀಡಿದೆ.

ಜಿಯಾ ಖಾನ್ ಅವರು 2013ರಲ್ಲಿ ಸಂಶಯಾಸ್ಪದವಾಗಿ ನೇಣುಬಿಗಿದ ಸ್ಥಿತಿಯಲ್ಲಿ ತಮ್ಮದೇ ಅಪಾರ್ಟ್​ಮೆಂಟ್​ನಲ್ಲಿ ಪತ್ತೆಯಾಗಿದ್ದರು. ಪ್ರಕರಣದ ಪ್ರಾಥಮಿಕ ತನಿಖೆ ನಡೆದ ನಂತರ ಮರು ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲಾಗಿತ್ತು.

ಆತ್ಮಹತ್ಯೆಗೆ ಮುಂಚೆ ಜಿಯಾ ಖಾನ್ ಅವರ ಗೆಳೆಯ ಸೂರಜ್ ಪಾಂಚೋಲಿ ಕಳುಹಿಸಿದ್ದ ಸಂದೇಶವನ್ನು ಅಳಿಸಿಹಾಕಿದ್ದಾನೆ ಎಂದು ಸಿಬಿಐ ಹೇಳಿದೆ. ಈ ಹಿಂದೆ ಡಿಸೆಂಬರ್​ನಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ ಸಂದೇಶಗಳನ್ನು ಅಳಿಸಿ ಹಾಕುವಂತೆ ಸೂರಜ್​ಗೆ ಆತನ ತಂದೆ ಒತ್ತಾಯಿಸಿದ್ದರು ಎಂದು ಹೇಳಲಾಗಿತ್ತು.

ಜಿಯಾಖಾನ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 35 ನಿಮಿಷಗಳ ಕಾಲ ಅಪಾರ್ಟ್ ಮೆಂಟ್ ನಲ್ಲಿದ್ದಳು, ಹೀಗಾಗಿ ಆಕೆಗೆ ಡೆತ್ ನೋಟ್ ಬರೆಯುವಷ್ಟು ಸಮಯ ಸಿಕ್ಕಿತ್ತು, ಫ್ಲ್ಯಾಟ್ ನಲ್ಲಿ ಸಿಕ್ಕ ಡೆತ್ ನೋಟ್ ಜಿಯಾ ಖಾನ್ ಬರೆದಿರುವುದು ಎಂದು ಸಿಬಿಐ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT