ಬಾಲಿವುಡ್ ನಟ ಸಲ್ಮಾನ್ ಖಾನ್ 
ಬಾಲಿವುಡ್

ಸಮಸ್ಯೆ ನಿವಾರಣೆಗೆ ಕಡಿಮೆ ಮಾತನಾಡುವುದು ಉತ್ತಮ: ಸಲ್ಮಾ ನ್ ಖಾನ್

ಸಮಸ್ಯೆ, ವಿವಾದಗಳಿಂದ ದೂರವಿರಲು ಕಡಿಮೆ ಮಾತನಾಡುವುದು ಉತ್ತಮ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಗುರುವಾರ...

ಮದ್ರಿದ್, ಸ್ಪೈನ್: ಸಮಸ್ಯೆ, ವಿವಾದಗಳಿಂದ ದೂರವಿರಲು ಕಡಿಮೆ ಮಾತನಾಡುವುದು ಉತ್ತಮ ಎಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಗುರುವಾರ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೈನ್ ರಾಜಧಾನಿ ಮದ್ರಿದ್ ನಲ್ಲಿ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿಯ ಪ್ರಚಾರ ವೇಳೆ ಇತರ ಪ್ರಮುಖ ಬಾಲಿವುಡ್ ನಟರೊಂದಿಗೆ ವೇದಿಕೆಯಲ್ಲಿ ಮಾತನಾಡಿದ ಸನ್ಮಾನ್ ಖಾನ್, ಇದೊಂದು ಸುದೀರ್ಘ ಸಂಜೆ ಕಾರ್ಯಕ್ರಮ. ನಾನು ಚಿಕ್ಕದಾಗಿ ಮಾತನಾಡುತ್ತೇನೆ. ಇನ್ನು ಮುಂದೆ ನನ್ನ ಒಳ್ಳೆಯದಕ್ಕೆ ಕಡಿಮೆ ಮಾತನಾಡಬೇಕಾಗಿದೆ ಎಂದು ಹೇಳಿ ಮಾತು ಮುಗಿಸಿದರು. ಸಭಿಕರ ಕಡೆಯಿಂದ ಅದರಲ್ಲೂ ಮಹಿಳಾ ವೃಂದದಿಂದ ಹೆಚ್ಚು ಮಾತನಾಡುವಂತೆ ಒತ್ತಾಯ, ಕರತಾಡನ ಕೇಳಿಬಂತು.

ತಮ್ಮ ಮುಂದಿನ ಚಿತ್ರ ಸುಲ್ತಾನ್ ಪ್ರಚಾರದ ವೇಳೆ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಸಂದರ್ಭದಲ್ಲಿ, ಚಿತ್ರದಲ್ಲಿ ಕುಸ್ತಿ ಮಾಡಿ ಹೊರಬಂದಾಗ ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗಿತ್ತು ತಮ್ಮ ಸ್ಥಿತಿ ಎಂದು ಹೇಳುವ ಮೂಲಕ ವ್ಯಾಪಕ ಟೀಕೆ, ಆಕ್ರೋಶಕ್ಕೆ ಸಲ್ಮಾನ್ ಖಾನ್ ತುತ್ತಾಗಿದ್ದಾರೆ.

'' ಚಿತ್ರದ ಕುಸ್ತಿ ಶೂಟಿಂಗ್ ಮುಗಿಸಿ ಹೊರಬಂದ ನಂತರ ಅತ್ಯಾಚಾರಕ್ಕೊಳಗಾದ ಮಹಿಳೆಯಂತಾಗಿತ್ತು ನನ್ನ ಪರಿಸ್ಥಿತಿ. ನನಗೆ ಸರಿಯಾಗಿ ನಡೆಯಲು ಕೂಡ ಸಾಧ್ಯವಾಗುತ್ತಿರಲಿಲ್ಲ'' ಎಂದು 50 ವರ್ಷದ ನಟ ಸ್ಪಾಯ್ ಬಾಯ್ ಎಂಬ ಮನರಂಜನಾ ವೆಬ್ ಸೈಟ್ ವೊಂದಕ್ಕೆ ನೀಡಿದ್ದ ಸಂದರ್ಶನದ ವೇಳೆ ಹೇಳಿದ್ದರು.

ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿರುವ ನಟನೊಬ್ಬ ಈ ರೀತಿ ಹೇಳಿಕೆ ನೀಡಬಾರದಿತ್ತು ಎಂದು ಮಹಿಳೆಯರು ಸೇರಿದಂತೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.
ಸಾಮಾಜಿಕ ತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ, ಸಲ್ಮಾನ್ ಖಾನ್ ಗೆ ಛೀಮಾರಿ ಹಾಕಿದ್ದು, ಬಹಿರಂಗವಾಗಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT