ನಟಿ ಪ್ರತ್ಯೂಷ ಬ್ಯಾನರ್ಜಿ (ಸಂಗ್ರಹ ಚಿತ್ರ) 
ಬಾಲಿವುಡ್

"ಬಾಲಿಕಾ ವಧು" ನಟಿ ಪ್ರತ್ಯೂಷ ಆತ್ಮಹತ್ಯೆಗೆ ಶರಣು

ಬಾಲಿಕಾ ವಧು ಖ್ಯಾತಿಯ ಜನಪ್ರಿಯ ಕಿರುತೆರೆ ನಟಿ ಪ್ರತ್ಯೂಷ ಬ್ಯಾನರ್ಜಿ (24) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...

ನವದೆಹಲಿ: ಬಾಲಿಕಾ ವಧು ಖ್ಯಾತಿಯ ಜನಪ್ರಿಯ ಕಿರುತೆರೆ ನಟಿ ಪ್ರತ್ಯೂಷ ಬ್ಯಾನರ್ಜಿ (24) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ನಟಿ ಪ್ರತ್ಯೂಷ ಅವರು ಅಂಧೇರಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಅವರ ತಾಯಿ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದರು ವೈದ್ಯರು ತಿಳಿಸಿದ್ದಾರೆ. ಮೂಲಗಳ ಪ್ರಕಾರ ಪ್ರತ್ಯೂಷ ಅವರು ಕೆಲವು ದಿನಗಳಿಂದ ವೈಯಕ್ತಿಕ ಸಮಸ್ಯೆಯಿಂದ ನೊಂದಿದ್ದು, ಇದರಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಪ್ರತ್ಯೂಷ ಸಾಯುವುದಕ್ಕೂ ಮುನ್ನ ಯಾವುದೇ ಡೆತ್ ನೋಟ್ ಬರೆದಿಲ್ಲ ಎಂದು ತಿಳಿದುಬಂದಿದ್ದು, ಪ್ರಸ್ತುತ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರತ್ಯೂಷ ತಮ್ಮ ಸ್ನೇಹಿತರೊಂದಿಗೆ ಅಂಧೇರಿಯಲ್ಲಿರುವ ಮನೆಯೊಂದರಲ್ಲಿ ನೆಲೆಸಿದ್ದರು.

ಕೆಲವು ವರ್ಷಗಳಿಂದಲೂ ನಟಿ ಪ್ರತ್ಯೂಷ ಮತ್ತು ನಟ ರಾಹುಲ್ ರಾಜ್ ಸಿಂಗ್ ಎಂಬುವವರನ್ನು ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಲ್ಲದೆ ಈ ಇಬ್ಬರೂ ಇನ್ನು ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದಾರೆಂಬ ವರದಿಗಳು ಕೂಡ ಕೇಳಿಬಂದಿತ್ತು. ಆದರೆ, ಕೆಲ ವೈಯುಕ್ತಿಕ ಕಾರಣಗಳಿಂದಾಗಿ ಕೆಲವು ದಿನಗಳಿಂದ ಇಬ್ಬರ ಸಂಬಂಧದಲ್ಲಿ ಬಿರುಕು ಬಿಟ್ಟಿತ್ತು. ಇದಾದ ಬಳಿಕ ಸಾಕಷ್ಟು ನೊಂದಿದ್ದ ಪ್ರತ್ಯೂಷ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಈಗ್ಗೆ ಕೆಲ ದಿನಗಳ ಹಿಂದಷ್ಟೇ ನಟಿ ಪ್ರತ್ಯೂಷ, ಮುಂಬೈ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ವಾಹಿನಿಗಳಲ್ಲಿ ಸುದ್ದಿಗೆ ಗ್ರಾಸವಾಗಿದ್ದರು. ಮುಂಬೈನಲ್ಲಿರುವ ತಮ್ಮ ಮನೆಗೆ ನುಗ್ಗಿದ ಗುಂಪೊಂದು ತಮಗೆ ಕಿರುಕುಳ ನೀಡಿದೆ ಎಂದು ಆರೋಪಿಸಿ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದರು. ಇದೀಗ ಪ್ರತ್ಯೂಷ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿದ್ದ ಬಾಲಿಕಾ ವಧು ಧಾರಾವಾಹಿಯಲ್ಲಿ ಆನಂದಿ ಎಂಬ ಪಾತ್ರದಲ್ಲಿ ಜನಪ್ರಿಯತೆಯನ್ನು ಗಳಿಸಿದ್ದ ಪ್ರತ್ಯೂಷ, ನಂತರ ಬಿಗ್ ಬಾಸ್ ಸೀಸನ್ 7 ರಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಬಿಗ್ ಬಾಸ್ ನಿಂದ ಹೊರಬಂದ ನಂತರ ಸಸುರಾಲ್ ಸಿಮರ್ ಕಾ ಎಂಬ ಧಾರಾವಾಹಿಯಲ್ಲಿ ನಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT