ಬಾಲಿವುಡ್ ನಟ ರಣವೀರ್ ಸಿಂಗ್ 
ಬಾಲಿವುಡ್

ರಣವೀರ್ ಸಿಂಗ್ ಗೆ `ವರ್ಷದ ಮಹಾರಾಷ್ಟ್ರಿಗ' ಪ್ರಶಸ್ತಿ

ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ಬಾಜಿರಾವ್ ಮಸ್ತಾನಿ ಚಿತ್ರದಲ್ಲಿ ಮರಾಠಾ ಯೋಧ ಪೇಶ್ವ ಬಾಜಿರಾವ್ 1 ಪಾತ್ರವನ್ನು...

ಮುಂಬೈ: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯವರ ಬಾಜಿರಾವ್ ಮಸ್ತಾನಿ ಚಿತ್ರದಲ್ಲಿ ಮರಾಠಾ ಯೋಧ ಪೇಶ್ವ ಬಾಜಿರಾವ್ 1 ಪಾತ್ರವನ್ನು ಮನೋಜ್ಞವಾಗಿ ಅಭಿನಯಿಸಿದ್ದ ನಟ ರಣವೀರ್ ಸಿಂಗ್ ಗೆ ಶುಕ್ರವಾರ ವರ್ಷದ ಮಹಾರಾಷ್ಟ್ರಿಗ ಬಿರುದು ನೀಡಿ ಸನ್ಮಾನಿಸಲಾಗುತ್ತಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಸಂಜೆ ನಡೆಯಲಿರುವ ಸಮಾರಂಭದಲ್ಲಿ ಈ ಪ್ರತಿಭಾನ್ವಿತ ನಟನಿಗೆ ಪ್ರಶಸ್ತಿ ನೀಡಿ ಗೌರವಿಸುವರು.
ತಮ್ಮ ಉತ್ತಮ ನಟನಾ ಪ್ರಾವಿಣ್ಯತೆ, ಅತೀವ ಉತ್ಸಾಹದಿಂದ 2015ರಲ್ಲ ಯಶಸ್ಸು ಕಂಡಿದ್ದಾರೆ. ಅವರ ಮೊದಲ ಚಿತ್ರ ಬಾಂಡ್ ಬಜಾ ಭಾರತ್ ಕೂಡ ಅತ್ಯಂತ ಯಶಸ್ಸನ್ನು ಕಂಡಿತ್ತು,

'ಲೋಕಮಾನ್ಯ ವರ್ಷದ ಮಹಾರಾಷ್ಟ್ರಿಗ' ಪ್ರಶಸ್ತಿಯನ್ನು ರಾಜ್ಯದ ಜನತೆ ಮೇಲೆ ಧನಾತ್ಮಕ ಅಂಶ ಬೀರಿದ ಮತ್ತು ಮಹಾರಾಷ್ಟ್ರವನ್ನು ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಿದವರಿಗೆ ಪ್ರತಿ ವರ್ಷ ನೀಡಲಾಗುತ್ತದೆ.ಬಾಲಿವುಡ್ ನ ದಂತಕಥೆಗಳಾದ ಅಮಿತಾಬ್ ಬಚ್ಚನ್, ದಿಲೀಪ್ ಕುಮಾರ್ ಅಂತವರಿಗೆ ಈ ಹಿಂದೆ ಈ ಪ್ರಶಸ್ತಿ ಲಭಿಸಿತ್ತು. ರಣವೀರ್ ಗೆ ಈಗ ಸಿಕ್ಕಿರುವುದು ಅವರ ಸಾಧನೆಗೆ ಇನ್ನಷ್ಟು ಗರಿ ಮೂಡಿಸಿದೆ.

ಮಹಾರಾಷ್ಟ್ರದ ಹೆಮ್ಮೆಯ ಪೇಶ್ವ ಬಾಜಿರಾವ್ ನ ಕಥೆಯಾದರಿಸಿದ ಐತಿಹಾಸಿಕ ಚಿತ್ರ ಬಾಜಿರಾವ್ ಮಸ್ತಾನಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT