ಸಂಜಯ್ ದತ್ 
ಬಾಲಿವುಡ್

ಬಿಜೆಪಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟ ಸಂಜಯ್ ದತ್

ಬಾಲಿವುಡ್ ನಟ ಸಂಜಯ್ ದತ್ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ, ಅದೂ ತನ್ನ ಬಿಡುಗಡೆಯನ್ನೇ ವಿರೋಧಿಸುತ್ತಿದ್ದ...

ಮುಂಬೈ: ಬಾಲಿವುಡ್ ನಟ ಸಂಜಯ್ ದತ್ ಅವರು ಜೈಲಿನಿಂದ ಬಿಡುಗಡೆಯಾದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ, ಅದೂ ತನ್ನ ಬಿಡುಗಡೆಯನ್ನೇ ವಿರೋಧಿಸುತ್ತಿದ್ದ ಬಿಜೆಪಿ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ ಬಿಜೆಪಿಯನ್ನು ಹಾಡಿ ಹೊಗಳಿದ್ದಾರೆ.
ಸಂಜಯ್ ದತ್ ಅವರು ಕಳೆದ ಫೆಬ್ರವರಿಯಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು ಇದೇ ಮೊದಲು. ಹೀಗಾಗಿ ಎಲ್ಲರ ಕಣ್ಣು ನಟನ ಮೇಲೆ ನೆಟ್ಟಿತ್ತು. 
ಸಂಜಯ್ ದತ್ ಅವರು ಹಿಂದೆ ಪದೇಪದೆ ಪೆರೋಲ್ ಮೇಲೆ ಬಿಡುಗಡೆಯಾದಗಲ್ಲೆಲ್ಲ ಬಿಜೆಪಿ ನಾಯಕರಿಂದಲೇ ಟೀಕೆಗೆ ಗುರಿಯಾಗಿದ್ದರು. ಅವರ ಪೆರೋಲ್ ಅನ್ನು ವಿರೋಧಿಸಿದ್ದ ನಗರ ಬಿಜೆಪಿ ಅಧ್ಯಕ್ಷ ಆಶೀಶ್ ಶೆಲಾರ್ ಹಾಗೂ ಮೋಹಿತ್ ಖಾಂಬೋಜ್ ಆಯೋಜಿಸಿದ್ದ ಮಹಾರಾಷ್ಟ್ರ ದಿವಸ ಕಾರ್ಯಕ್ರಮದಲ್ಲಿ ಸಂಜಯ್ ದತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಬಾಲಿವುಡ್ ನಟ ಸಂಜಯ್ ದತ್, ಮಹಾರಾಷ್ಟ್ರದಲ್ಲಿ ಬಿಜೆಪಿ ಇನ್ನಷ್ಟು ಬಲಿಷ್ಠವಾಗಿ ಬೆಳೆಯಲಿ. ಮುಂಬರುವ ಚುನಾವಣೆಯಲ್ಲಿ ಇನ್ನಷ್ಟು ಸೀಟು ಗೆಲ್ಲುವಂತಾಗಲಿ ಎಂದು ಹಾರೈಸಿದರು.
ಮುಂಬೈ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಸಂಜಯ್ ದತ್ ಅವರು ಕಳೆದ ಫೆಬ್ರವರಿಯಲ್ಲಿ ಜೈಲಿನಿಂದ ಹೊರಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT