ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ 
ಬಾಲಿವುಡ್

ಭಾರತೀಯ ಸಂಗೀತ ಬೆಳವಣಿಗೆಗೆ ದೇಶದಲ್ಲಿ ಮೂಲಭೂತ ಸೌಕರ್ಯ ಕೊರತೆಯಿದೆ: ರೆಹಮಾನ್

ಸಂಗೀತ ಕ್ಷೇತ್ರದಲ್ಲಿ ತಮ್ಮ ಕೆಲಸಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ...

ಮುಂಬೈ: ಸಂಗೀತ ಕ್ಷೇತ್ರದಲ್ಲಿ ತಮ್ಮ ಕೆಲಸಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಕೀರ್ತಿ ತಂದಿರಬಹುದು. ಆದರೆ ಭಾರತದಲ್ಲಿ ಸಂಗೀತಗಾರರಿಗೆ ವೈಯಕ್ತಿಕವಾಗಿ ಬೆಳೆಯಲು ಸಾಕಷ್ಟು ಮೂಲಭೂತ ಸೌಕರ್ಯಗಳಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪಾಶ್ಚಾತ್ಯ ದೇಶಗಳಲ್ಲಿ ಸ್ವತಂತ್ರ ಕಲಾವಿದರ ಸಂಸ್ಕೃತಿ ಜನಪ್ರಿಯವಾಗಿದೆ. ಆದರೆ ಭಾರತದಲ್ಲಿ ಸಂಗೀತ ಚಲನಚಿತ್ರಗಳ ಮೇಲೆ ಅವಲಂಬಿತವಾಗಿದೆ. ಇಲ್ಲಿ ಪ್ರತಿಭಾವಂತರಿಗೆ ಕೊರತೆ ಇಲ್ಲ ಆದರೆ ಕಲಾವಿದರಿಗೆ ಪ್ರದರ್ಶನ ನೀಡಲು ಸರಿಯಾದ ವೇದಿಕೆ ಸಿಗುವುದಿಲ್ಲ ಎಂದರು.

ನಮ್ಮಲ್ಲಿ ಅನೇಕ ಪ್ರತಿಭಾವಂತರ ಪ್ರತಿಭೆ ಆಚೆ ಬರಬೇಕಿದೆ. ಆದರೆ ನಮ್ಮಲ್ಲಿ ಸರಿಯಾದ ಕಲಾ ಕೇಂದ್ರಗಳಿಲ್ಲ. ರೇಡಿಯೋ ಸಿಟಿಯಿಲ್ಲ ಎಂದು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.
ನಮ್ಮಲ್ಲಿ ಅನೇಕ ಮೆಟ್ರೋ ನಗರಿಗಳಿವೆ, ಆದರೆ ವಿಶ್ವಮಟ್ಟ ದರ್ಜೆಯ ಕಲಾ ಕೇಂದ್ರಗಳು ಎಲ್ಲಿವೆ? ನಮ್ಮಲ್ಲಿ ಗೀತನಾಟಕದ ಕೇಂದ್ರಗಳಿಲ್ಲ. ಸಾಂಸ್ಕೃತಿಕ ಬದಲಾವಣೆಯಾಗಬೇಕಿದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಲಾವಿದರು ಬಂದರೆ ಪ್ರವಾಸಿಗರು ಬರುತ್ತಾರೆ, ಭಾರತೀಯರ ಪ್ರದರ್ಶನವನ್ನು ವೀಕ್ಷಿಸುತ್ತಾರೆ ಎಂದರು.

ಬ್ರಾಡ್ ವೇಯಂತಹ ಸ್ಥಳವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸುವ ರೆಹಮಾನ್ ಆ ಮೂಲಕ ದೇಶದ ಮೂಲೆ ಮೂಲೆಗಳಿಂದ ಕಲಾವಿದರು ಆಗಮಿಸಿ ಪ್ರದರ್ಶನ ನೀಡಲು ಸಹಾಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT