ಅಜಯ್ ದೇವಗನ್ ಮತ್ತು ಕರಣ್ ಜೋಹರ್ 
ಬಾಲಿವುಡ್

ಕರಣ್ ಜೋಹರ್ ಮತ್ತು ಕೆಆರ್ ಕೆ ವಿರುದ್ಧ ತನಿಖೆ ನಡೆಸಲು ಅಜಯ್ ದೇವಗನ್ ಆಗ್ರಹ

ಖ್ಯಾತ ನಿರ್ದೇಶಕ ಕಮ್ ನಟ ಕರಣ್ ಜೋಹರ್ ಮತ್ತು ಅಜಯ್ ದೇವಗನ್ ಅವರ ಮುಸುಕಿನ ಗುದ್ದಾಟ ಬಹಿರಂಗವಾಗಿದೆ....

ಮುಂಬಯಿ: ಖ್ಯಾತ ನಿರ್ದೇಶಕ ಕಮ್ ನಟ ಕರಣ್ ಜೋಹರ್ ಮತ್ತು ಅಜಯ್ ದೇವಗನ್ ಅವರ ಮುಸುಕಿನ ಗುದ್ದಾಟ ಬಹಿರಂಗವಾಗಿದೆ.

ನಿರ್ಮಾಪಕ ಕರಣ್ ಜೋಹರ್ ಮತ್ತು ಚಿತ್ರ ವಿಮರ್ಶಕ ಕಮಲ್ ಆರ್ ಖಾನ್ ಅವರ ವಿರುದ್ಧ ತನಿಖೆ ನಡೆಯುವಂತೆ ನಿರ್ಮಾಪಕರೂ ಆಗಿರುವ ಅಜಯ್ ದೇವಗನ್ ಒತ್ತಾಯಿಸಿದ್ದಾರೆ.

ಅಜಯ್ ದೇವಗನ್ ಅಭಿನಯದ 'ಶಿವಾಯ್' ಸಿನಿಮಾ ಮತ್ತು ಕರಣ್ ಜೋಹರ್ ನಿರ್ದೇಶನದ 'ಏ ದಿಲ್ ಹೈ ಮುಷ್ಕಿಲ್' ಚಿತ್ರಗಳು ಬಿಡುಗಡೆಗೆ ತಯಾರಾಗಿವೆ. ಈ ಹಿನ್ನೆಲೆಯಲ್ಲಿ  ಶಿವಾಯ್ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ಮಾಡಿ, ಏ ದಿಲ್ ಹೈ ಮುಷ್ಕಿಲ್' ಸಿನಿಮಾವನ್ನು ಹೊಗಳಿ ಟ್ವಿಟ್ಟರ್ ನಲ್ಲಿ ಬರೆಯುವಂತೆ ಕರಣ್ ಜೋಹರ್ ಕಮಲ್ ಆರ್ ಖಾನ್ ಅವರಿಗೆ 25 ಲಕ್ಷ ರೂ ಹಣ ನೀಡಿದ್ದಾರೆ ಎಂದು ಅಜಯ್ ದೇವಗನ್ ಆರೋಪಿಸಿದ್ದಾರೆ.

ಈ ಎರಡೂ ಸಿನಿಮಾಗಳು ಒಟ್ಟೊಟ್ಟಿಗೆ (ಅಕ್ಟೋಬರ್ 28ಕ್ಕೆ) ಒಂದೇ ದಿನ ತೆರೆ ಕಾಣುತ್ತಿದೆ. ಆದ್ದರಿಂದ ಈ ಎರಡೂ ಸಿನಿಮಾಗಳು ಬಾಕ್ಸಾಫೀಸ್ ನಲ್ಲಿ ಕ್ಲ್ಯಾಷ್ ಆಗೋದು ಪಕ್ಕಾ. ಆದರೆ ಕ್ಲ್ಯಾಷ್ ಆಗೋ ಮುನ್ನವೇ ಕರಣ್ ಜೋಹರ್ ಅವರು ಅಜಯ್ ದೇವಗನ್ ಅವರ ಸಿನಿಮಾದ ಮೇಲೆ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಅಜಯ್ ದೇವಗನ್ ಅವರು ದೂರಿದ್ದಾರೆ.

ಕಮಲ್ ಆರ್ ಖಾನ್ ಅವರು ಕರಣ್ ಜೋಹರ್ ಅವರ ಬಳಿಯಿಂದ ಬರೋಬ್ಬರಿ 25 ಲಕ್ಷ ಸ್ವೀಕರಿಸಿದ ವಿಚಾರವನ್ನು ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರ ಬಳಿ ಬಾಯಿ ಬಿಟ್ಟಿದ್ದಾರೆ. ಇದೀಗ ಇವರಿಬ್ಬರ ಫೋನ್ ಸಂಭಾಷಣೆ ಬಗ್ಗೆ ತನಿಖೆ ನಡೆಸಬೇಕು ಎಂದು ತೀವ್ರವಾಗಿ ಅಸಮಾಧಾನಗೊಂಡಿರುವ ಅಜಯ್ ದೇವಗನ್ ಆಗ್ರಹಿಸಿದ್ದಾರೆ.

ಕಳೆದ 25 ವರ್ಷಗಳಿಂದ ನಾನು ಸಿನಿಮಾ ಇಂಡಸ್ಟ್ರಿಯಲ್ಲಿದ್ದೇನೆ. ಸುಮಾರು 100 ಕ್ಕೂ ಹೆಚ್ಚು ಚಿತ್ರಗಳಲ್ಲಿ ಕೆಲಸ ಮಾಡಿದ್ದೇನೆ. ನನ್ನ ತಂದೆ ಸಾಹಸ ಚಿತ್ರ ನಿರ್ದೇಶಕರಾಗಿದ್ದರು. ನನಗೆ ಸಿನಿಮಾ ಉದ್ಯಮದ ಜೊತೆ ಭಾವನಾತ್ಮಕ ಸಂಬಂಧವಿದೆ. ಕಮಲ್ ಆರ್ ಖಾನ್ ಅಂತರು ಸಿನಿಮ ಇಂಡಸ್ಟ್ರಿಯನ್ನು ತಮ್ಮ ಮುಷ್ಠಿಯಲ್ಲಿ ಹಿಡಿದು ಇಟ್ಟುಕೊಂಡಿರುವುದರ ಬಗ್ಗೆ ನೋವುಂಟಾಗುತ್ತದೆ. ಹಣದ ಆಸೆಗಾಗಿ ಒಳ್ಳೆಯ ಸಿನಿಮಾಗಳ ಬಗ್ಗೆ ಕೆಟ್ಟದಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಅಜಯ್ ದೇವಗನ್ ನೋವು ತೋಡಿಕೊಂಡಿದ್ದಾರೆ.

ನಮ್ಮ ಸಿನಿಮಾದವರೇ ಇಂಥವರಿಗೆ ಬೆಂಬಲ ನೀಡುತ್ತಿರುವುದು ದುಃಖದ ವಿಷಯವಾಗಿದೆ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kerala: ಕಾಂಗ್ರೆಸ್ ಸಂಸದ Shashi Tharoor ಬೆಂಗಾವಲು ಪಡೆ ತಡೆದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

SCROLL FOR NEXT