ವಿವೇಕ್ ಓಬೇರಾಯ್ 
ಬಾಲಿವುಡ್

ಕಪಿಲ್ ಶರ್ಮ ಉತ್ತಮ ಮನುಷ್ಯ, ಅಪರಾಧಿಯಲ್ಲ: ವಿವೇಕ್ ಓಬೇರಾಯ್

ಕಾಮಿಡಿ ನಟ ಕಪಿಲ್ ಶರ್ಮಾ ಅಪರಾಧಿಯಲ್ಲ, ಒಬ್ಬ ಉತ್ತಮ ಮನುಷ್ಯ, ಹೀಗಾಗಿ ಅವರು ವಿವಾದದಿಂದ ಹೊರಬರಲು ಸಹಾಯ ಮಾಡುವುದರಲ್ಲಿ ತಪ್ಪಿಲ್ಲ ಎಂದು ನಟ ...

ನವದೆಹಲಿ; ಕಾಮಿಡಿ ನಟ ಕಪಿಲ್ ಶರ್ಮಾ ಅಪರಾಧಿಯಲ್ಲ, ಒಬ್ಬ ಉತ್ತಮ ಮನುಷ್ಯ, ಹೀಗಾಗಿ ಅವರು ವಿವಾದದಿಂದ ಹೊರಬರಲು ಸಹಾಯ ಮಾಡುವುದರಲ್ಲಿ ತಪ್ಪಿಲ್ಲ ಎಂದು ನಟ ವಿವೇಕ್ ಓಬೇರಾಯ್ ಅಭಿಪ್ರಾಯ ಪಟ್ಟಿದ್ದಾರೆ.

ಮುಂಬಯಿ ಮಹಾನಗರ ಪಾಲಿಕೆಯಲ್ಲಿ ಲಂಚದ ಬೇಡಿಕೆ ಇಟ್ಟ ಪ್ರಕರಣದ ಸಂಬಂಧ ಟ್ವೀಟ್ ಮಾಡಿ ಕಪಿಲ್ ಶರ್ಮಾ ಸಂಕಷ್ಟದಲ್ಲಿ ಸಿಲುಕಿದ್ದಾರೆ, ಇದರಿಂದ ಹೊರಬರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಲು ಕಪಿಲ್ ಶರ್ಮಾ ವಿವೇಕ್ ಓಬೇರಾಯ್ ಅವರ ಸಹಾಯ ಕೇಳಿದ್ದಾರೆ ಎಂದು ಹೇಳಲಾಗಿದೆ.

ನಾನು ಪ್ರತಿ ವರ್ಷ 15 ಕೋಟಿ ಆದಾಯ ತೆರಿಗೆ ಕಟ್ಟುತ್ತಿದ್ದೇನೆ, ಆದರೂ ಮುಂಬಯಿ ಮಹಾನಗರ ಪಾಲಿಕೆ ನನ್ನಿಂದ 5 ಲಕ್ಷ ಲಂಚ ಕೇಳಿದೆ ಎಂದು ಟ್ವೀಟ್ ಮಾಡಿದ್ದರು. ವಿವೇಕ್ ಓಬೇರಾಯ್ ಗಿರುವ ರಾಜಕೀಯ ಸಂಪರ್ಕ ಉಪಯೋಗಿಸಿಕೊಂಡು ಪ್ರಕರಣದಿಂದ ಹೊರಬರಲು ಕಪಿಲ್ ಶರ್ಮಾ ಓಬೇರಾಯ್ ಸಹಾಯ ಕೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸರುವ ಓಬೇರಾಯ್, ಆತ ಉತ್ತಮ ಮನುಷ್ಯ ಎಂದು ನನಗೆ ನಂಬಿಕೆಯಿದೆ. ಜೊತೆಗೆ ನಾವು ಉತ್ತಮ ಸ್ಥಿತಿಯಲ್ಲಿದ್ದಾಗ ಸಮಸ್ಯೆಯಲ್ಲಿ ಸಿಲುಕಿರುವವರಿಗೆ ಸಹಾಯ ಮಾಡಬೇಕು ಎಂಬುದರಲ್ಲಿಯೂ ನನಗೆ ನಂಬಿಕೆಯಿದೆ, ಹೀಗಾಗಿ ನಾನು ಕಪಿಲ್ ಶರ್ಮಾ ಅವರಿಗೆ ಸಹಾಯ ಮಾಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!