ಮೆಗಾಸ್ಟಾರ್ ಅಮಿತಾಬ್ ಬಚ್ಚನ್ 
ಬಾಲಿವುಡ್

ದೆಹಲಿ ಶಿಕ್ಷಕಿಗೆ ಇರಿತ: ಸಮಾಜ ಬದಲಾಗಬೇಕಿದೆ ಎಂದ ಬಿಗ್ ಬಿ

21 ವರ್ಷದ ನವದೆಹಲಿಯ ಶಿಕ್ಷಕಿಯನ್ನು ಇರಿದು ಕೊಂದ ಪ್ರಕರಣವನ್ನು 'ಭಯಾನಕ' ಎಂದಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಸಮಾಜ ಒಳ್ಳೆಯ ರೀತಿಯಲ್ಲಿ ಬದಲಾಗಬೇಕು ಎಂದು ಬುಧವಾರ

ಕೋಲ್ಕತ್ತಾ: 21 ವರ್ಷದ ನವದೆಹಲಿಯ ಶಿಕ್ಷಕಿಯನ್ನು ಇರಿದು ಕೊಂದ ಪ್ರಕರಣವನ್ನು 'ಭಯಾನಕ' ಎಂದಿರುವ ಮೆಗಾಸ್ಟಾರ್ ಅಮಿತಾಬ್ ಬಚ್ಚನ್, ಸಮಾಜ ಒಳ್ಳೆಯ ರೀತಿಯಲ್ಲಿ ಬದಲಾಗಬೇಕು ಎಂದು ಬುಧವಾರ ಹೇಳಿದ್ದಾರೆ. 
"ನಾನು ಆ ವಿಡಿಯೋ ನೋಡಿದ್ದೇನೆ... ಇದು ಕೆಟ್ಟ ಘಟನೆ. ಸಮಾಜ ಬದಲಾಗಬೇಕಿದೆ. ನಾವು ಪ್ರಯತ್ನ ಮುಂದುವರೆಸಬೇಕು. ಎಲ್ಲರು 'ಇದು ನನ್ನ ಕೆಲಸವಲ್ಲ ಮತ್ತು ನನಗೆ ಇದರಲ್ಲಿ ಆಸಕ್ತಿಯಿಲ್ಲ' ಎಂದು ಕೈಚೆಲ್ಲುತ್ತಾರೆ" ಎಂದು ಬಿಗ್ ಬಿ ಗಮನಿಸಿದ್ದಾರೆ.
"ಸಾಕಷ್ಟು ಜನ ಮತ್ತೊಬ್ಬರಿಗೆ ಸಹಾಯ ಮಾಡಲು ಹೆದರುತ್ತಾರೆ ಏಕೆಂದರೆ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತನಾಗುವ ಭಯಕ್ಕೆ. ಆದುದರಿಂದ ಅವರು ತೊಡಗಿಸಿಕೊಳ್ಳುವುದಿಲ್ಲ" ಎಂದು ಬಚ್ಚನ್ ತಮ್ಮ ಸಿನೆಮಾ 'ಪಿಂಕ್' ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ. 
ಉತ್ತರ ದೆಹಲಿಯ ಬುರಾರಿ ಪ್ರದೇಶದಲ್ಲಿ ಕರುಣಾ ಎಂಬ ನಾವೆಲ್ ರೀಚಸ್ ಶಾಲೆಯ ಶಿಕ್ಷಕಿಯನ್ನು 22 ಬಾರಿ ಇರಿದು ಅವನ ಭಗ್ನ ಪ್ರೇಮಿ ಕೊಲೆ ಮಾಡಿದ್ದ. 
ಸಮಾಜ ನಿಧಾನವಾಗಿ ಬದಲಾಗುತ್ತಿದ್ದು, ಕಾನೂನು ಕೂಡ ಒಳ್ಳೆಯ ರೀತಿಯಲ್ಲಿ ಬದಲಾಗುತ್ತಿದೆ ಎಂದು ಅಮಿತಾಬ್ ಗುರುತಿಸಿದ್ದಾರೆ. 
"ಆದರೆ ಇವೆಲ್ಲವೂ ಬದಲಾಗುತ್ತಿವೆ. ಕಾನೂನು ಕೂಡ ಬದಲಾಗುತ್ತಿದೆ" ಎಂದು ಅಮಿತಾಬ್ ಹೇಳಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT