ರಾಖಿ ಸಾವಂತ್ 
ಬಾಲಿವುಡ್

ಲೂಧಿಯಾನ ಕೋರ್ಟ್ ನಿಂದ ರಾಖಿ ಸಾವಂತ್'ಗೆ ಮತ್ತೆ ಬಂಧನ ವಾರಂಟ್

ಕೋರ್ಟ್ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ವಿವಾದಾತ್ಮಕ ನಟಿ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ....

ಚಂಡೀಗಢ: ಕೋರ್ಟ್ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ವಿವಾದಾತ್ಮಕ ನಟಿ ಬಾಲಿವುಡ್ ನಟಿ ರಾಖಿ ಸಾವಂತ್ ಅವರಿಗೆ ಲೂಧಿಯಾನ ಕೋರ್ಟ್ ಮಂಗಳವಾರ  ಹೊಸದಾಗಿ ಬಂಧನ ವಾರಂಟ್ ಜಾರಿ ಮಾಡಿದೆ. 
ರಾಮಾಯಣ ರಚನಕಾರ ವಾಲ್ಮೀಕಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಖಿ ಸಾವಂತ್ ಅವರು ಆಗಸ್ಟ್ 7ರಂದು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ವಿಚಾರಣೆಗೆ ಬಾರದೆ ತಮ್ಮ ವಕೀಲರ ಮೂಲಕ ತಾವು ಅಮೆರಿಕ ಪ್ರವಾಸಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದಾರೆ.
ಈ ಮಧ್ಯೆ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ರಾಖಿ ಸಾವಂತ್ ಸಲ್ಲಿಸಿದ್ದ ಅರ್ಜಿಯನ್ನು ಕೆಳ ನ್ಯಾಯಾಲಯ ವಜಾಗೊಳಿಸಿದ್ದು, ಇಂದು ಅವರ ವಕೀಲರು ಜಿಲ್ಲಾ ಮತ್ತು ಸೆಸೆನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ವಾಲ್ಮೀಕಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ರಾಖಿ ಮೇಲೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಮೇಲೆ ಲುಧಿಯಾನಾ ನ್ಯಾಯಾಲಯದ ಬಂಧನಾದೇಶ ಹೊರಡಿಸಿತ್ತು. ಅದರಂತೆ ನಟಿ ರಾಖಿ ಸಾವಂತ್ ಅವರು ವಿಚಾರಣೆಗೆ ಖುದ್ದು ಹಾಜರಾಗಿದ್ದರು. 
ಪ್ರಕರಣ ಸಂಬಂಧ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ, ರು.1 ಲಕ್ಷದ ಎರಡು ಬಾಂಡ್ ಗಳನ್ನು ಪಡೆದುಕೊಂಡು ರಾಖಿ ಸಾವಂತ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಆ ಜಾಮೀನು ಅವಧಿ ವಿಸ್ತರಿಸಲು ಕೋರ್ಟ್ ನಿರಾಕರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT