ನಟ ಅಕ್ಷಯ್ ಕುಮಾರ್ 
ಬಾಲಿವುಡ್

'ಟಾಯ್ಲೆಟ್: ಏಕ್ ಪ್ರೇಮ್ ಕಥಾ' ಚಿತ್ರದ ಮೂರು ದೃಶ್ಯಗಳಿಗೆ ಕತ್ತರಿ, ಎಂಟು ಅಲ್ಲ: ಅಕ್ಷಯ್ ಕುಮಾರ್

ತಮ್ಮ ಮುಂಬರುವ ಚಿತ್ರ 'ಟಾಯ್ಲೆಟ್: ಏಕ್ ಪ್ರೇಮ್ ಕಥಾ'' ಸೆನ್ಸಾರ್ ಮಂಡಳಿಯಿಂದ...

ನವದೆಹಲಿ: ತಮ್ಮ ಮುಂಬರುವ ಚಿತ್ರ 'ಟಾಯ್ಲೆಟ್: ಏಕ್ ಪ್ರೇಮ್ ಕಥಾ'' ಸೆನ್ಸಾರ್ ಮಂಡಳಿಯಿಂದ ಮೂರು ಕಡೆಗಳಲ್ಲಿ ದೃಶ್ಯಗಳನ್ನು ತೆಗೆದು ಹಾಕಿ ಒಪ್ಪಿಗೆ ನೀಡಿದೆ ಎಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹೇಳಿದ್ದಾರೆ.
ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆನ್ಸಾರ್ ಬೋರ್ಡ್ 8 ಅಥವಾ 9 ಕಡೆಗಳಲ್ಲಿ ದೃಶ್ಯಗಳನ್ನು ತೆಗೆಯುವಂತೆ ಸೂಚಿಸಿದೆ ಎಂದು ವರದಿಗಳನ್ನು ಓದಿದೆನು. ಆದರೆ ಅದು ಸುಳ್ಳು ವರದಿ. ಚಿತ್ರಕ್ಕೆ ಮೂರು ಕಡೆಗಳಲ್ಲಿ ಸಂಭಾಷಣೆಗಳನ್ನು ತೆಗೆದುಹಾಕುವಂತೆ ಸೂಚಿಸಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಚಿತ್ರವನ್ನು ತೋರಿಸಲು ವಿಶೇಷ ಪ್ರದರ್ಶನ ಏರ್ಪಡಿಸಲಾಗುತ್ತದೆಯೇ ಎಂದು ಕೇಳಿದ್ದಕ್ಕೆ ನನಗೆ ಪ್ರಧಾನಿಯವರಿಗೆ ತೋರಿಸಬೇಕೆಂದು ಆಸೆಯಿದೆ. ಆದರೆ ಈ ಚಿತ್ರವನ್ನು ನೋಡುವುದಕ್ಕಿಂತ ಹೆಚ್ಚು ಅವರಿಗೆ ದೇಶಕ್ಕೆ ಮಾಡುವ ಕೆಲಸ ತುಂಬಾ ಇವೆ. ಆದರೂ ನಮಗೆ ಸಿನಿಮಾ ತೋರಿಸಲು ಆಸಕ್ತಿಯಿದೆ ಎಂದರು. ಟಾಯ್ಲೆಟ್: ಏಕ್ ಪ್ರೇಮ್ ಕಥಾ ಚಿತ್ರದಲ್ಲಿ ಕಥೆ ಕೇಂದ್ರ ಸರ್ಕಾರದ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿದೆ.
ಶ್ರೀ ನಾರಾಯಣ್ ಸಿಂಗ್ ನಿರ್ದೇಶಿಸಿರುವ ಚಿತ್ರದಲ್ಲಿ ಭೂಮಿ ಪಡ್ನೇಕರ್, ಅನುಪಮ್ ಖೇರ್ ನಟಿಸಿದ್ದು ನಾಳೆ ದೇಶಾದ್ಯಂತ ತೆರೆಗೆ ಬರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT