ಸಂಗ್ರಹ ಚಿತ್ರ 
ಬಾಲಿವುಡ್

ಆಸ್ಕರ್ ರೇಸ್ ನಿಂದ ಹೊರಬಿದ್ದ ಭಾರತದ 'ನ್ಯೂಟನ್' ಚಿತ್ರ!

ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಪಟ್ಟಿಗೆ ಸೇರುವ ಮೂಲಕ ವಿಶ್ವಾಸ ಮೂಡಿಸಿದ್ದ ರಾಜ್ ಕುಮಾರ್ ರಾವ್ ಅಭಿನಯದ ನ್ಯೂಟನ್ ಚಿತ್ರ ಇದೀಗ ಪ್ರಶಸ್ತಿ ರೇಸ್ ನಿಂದ ಹೊರಬಿದ್ದಿದೆ.

ವಾಷಿಂಗ್ಟನ್: ಭಾರತದಿಂದ ಅಧಿಕೃತವಾಗಿ ಆಸ್ಕರ್ ಪ್ರಶಸ್ತಿ ಪಟ್ಟಿಗೆ ಸೇರುವ ಮೂಲಕ ವಿಶ್ವಾಸ ಮೂಡಿಸಿದ್ದ ರಾಜ್ ಕುಮಾರ್ ರಾವ್ ಅಭಿನಯದ ನ್ಯೂಟನ್ ಚಿತ್ರ ಇದೀಗ ಪ್ರಶಸ್ತಿ ರೇಸ್ ನಿಂದ ಹೊರಬಿದ್ದಿದೆ.
ಈ ಬಗ್ಗೆ ಸ್ವತಃ ಆಸ್ಕರ್ ಆಯ್ಕೆ ಸಮಿತಿ ಮಾಹಿತಿ ನೀಡಿದ್ದು, ಭಾರತದ ನ್ಯೂಟನ್ ಚಿತ್ರ ಆಸ್ಕರ್ ಪ್ರಶಸ್ತಿ ರೇಸ್ ನಲ್ಲಿರುವ ಒಂಭತ್ತು ಚಿತ್ರಗಳ ಪಟ್ಟಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಮೂಲಗಳ ಪ್ರಕಾರ ಆಸ್ಕರ್ ಪ್ರಶಸ್ತಿಯ ಮುಂದಿನ  ಹಂತಕ್ಕೆ ಒಟ್ಟು 9 ಚಿತ್ರಗಳನ್ನು ಮುನ್ನಡೆದಿದ್ದು, ಚಿಲಿ ಮೂಲದ ಎ ಫೆಂಟಾಸ್ಟಿಕ್ ವುಮನ್, ಜರ್ಮನಿಯ ಇನ್ ದಿ ಫೇಡ್, ಹಗೇರಿಯ  ಆನ್ ಬಾಡಿ ಅಂಡ್ ಸೋಲ್, ಇಸ್ರೇಲ್ ನ ಫಾಕ್ಸ್ ಟ್ರಾಟ್, ಲೆಬೆನಾನ್ ನ ದಿ ಇನ್ಸಲ್ಟ್, ಸ್ವೀಡನ್ ನ  ದಿ ಸ್ಕ್ವೇರ್, ಸೆನೆಗಲ್ ನ ಫೆಲಿಸಿಟ್, ರಷ್ಯಾದ ಲವ್ ಲೆಸ್ ಮತ್ತು ದಕ್ಷಿಣ ಆಫ್ರಿಕಾದ ದಿ ವೌಂಡ್ ಚಿತ್ರಗಳು ಮುಂದಿನ ಹಂತಕ್ಕೆ ಆಯ್ಕೆಯಾಗಿವೆ ಎಂದು ತಿಳಿದುಬಂದಿದೆ.
ಈವರೆಗೂ ಯಾವುದೇ ಭಾರತೀಯ ಚಿತ್ರ ಆಸ್ಕರ್ ಪ್ರಶಸ್ತಿ ಜಯಿಸಿಲ್ಲ. 2001ರಲ್ಲಿ ಅಮೀರ್ ಖಾನ್ ಅಭಿನಯದ ಲಗಾನ್ ಚಿತ್ರ ಪ್ರಶಸ್ತಿಯ ಅಂತಿಮ ಸುತ್ತು ಪ್ರವೇಶಿಸಿತ್ತಾದರೂ ಪ್ರಶಸ್ತಿಗೆ ಭಾಜನವಾಗಿರಲಿಲ್ಲ. ಇದಕ್ಕೂ ಮೊದಲು  ಮಿಸ್ಟರ್ ಇಂಡಿಯಾ (1958), ಸಲಾಂ ಬಾಂಬೇ (1989) ಚಿತ್ರಗಳು ಆಸ್ಕರ್ ಪ್ರಶಸ್ತಿಯ ಅಂತಿಮ ಸುತ್ತಿ ಪ್ರವೇಶಿಸಿದ್ದವು. ಕಳೆದ ವರ್ಷ ಖ್ಯಾತ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ವಿಸಾರಣೈ ಚಿತ್ರ ಆಸ್ಕರ್ ಪ್ರಶಸ್ತಿಗೆ  ಆಯ್ಕೆಯಾಗಿತ್ತು.
ಇನ್ನು ಮುಂಬರುವ ಜನವರಿ 23ರಂದು 90ನೇ ವಾರ್ಷಿಕ ಆಸ್ಕರ್ ಪ್ರಶಸ್ತಿ ಘೋಷಣೆಯಾಗಲಿದ್ದು, ಮಾರ್ಚ್ 4ರಂದು ಲಾಸ್ ಎಂಜಲೀಸ್ ನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT