ಸುಖ್ದೇವ್ ಸಿಂಗ್ 
ಬಾಲಿವುಡ್

ಪದ್ಮಾವತಿ ಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳನ್ನು ಧ್ವಂಸ ಮಾಡುತ್ತೇವೆ: ಕರ್ಣಿ ಸೇನೆ ಬೆದರಿಕೆ

ವಿವಾದಿತ ಪದ್ಮಾವತಿ ಚಿತ್ರಕ್ಕೆ ಕೊನೆಗೂ ಕೆಲ ಷರತ್ತುಗಳ ಮೇಲೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ...

ನವದೆಹಲಿ: ವಿವಾದಿತ ಪದ್ಮಾವತಿ ಚಿತ್ರಕ್ಕೆ ಕೊನೆಗೂ ಕೆಲ ಷರತ್ತುಗಳ ಮೇಲೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದೆ. ಆದರೆ ಚಿತ್ರವನ್ನು ಪ್ರದರ್ಶಿಸುವ ಚಿತ್ರಮಂದಿರಗಳನ್ನು ಧ್ವಂಸ ಮಾಡುತ್ತೇವೆ ಎಂದು ಕರ್ಣಿ ಸೇನೆ ಮತ್ತೆ ಬೆದರಿಕೆ ಹಾಕಿದೆ. 
ಪದ್ಮಾವತಿ ಚಿತ್ರದಲ್ಲಿ ಇತಿಹಾಸವನ್ನು ತಿರುಚಲಾಗಿದೆ ಎಂದು ರಾಜಸ್ತಾನದ ಕೆಲ ಸಂಘಟನೆಗಳು ಆರೋಪಿಸಿದ ಕಾರಣ ವಿವಾದ ಸೃಷ್ಟಿಯಾಗಿತ್ತು. ಈ ವೇಳೆ ಪದ್ಮಾವತಿ ಚಿತ್ರವನ್ನು ಬಿಡುಗಡೆ ಮಾಡುವ ಚಿತ್ರಮಂದಿರಗಳನ್ನು ಧ್ವಂಸ ಮಾಡುವುದಾಗಿ ಈ ಹಿಂದೆ ರಜಪೂತ ಕರ್ಣಿ ಸೇನೆ ಹೇಳಿತ್ತು. 
ಇದೀಗ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದ್ದು ಚಿತ್ರದ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ನಡೆಸಿದ್ದು ಈ ಮಧ್ಯೆ ಮತ್ತೆ ಕರ್ಣಿ ಸೇನೆಯ ಸದಸ್ಯ ಸುಖ್ದೇವ್ ಸಿಂಗ್ ಗೋಗಮೇದಿ ಅವರು ಭೂಗತ ಜಗತ್ತಿನ ಒತ್ತಡದಿಂದಾಗಿ ಚಿತ್ರಕ್ಕೆ ಸರ್ಟಿಫಿಕೇಟ್ ಸಿಕ್ಕಿದೆ. ಆದರೆ ಚಿತ್ರ ಪ್ರದರ್ಶನಗೊಂಡ ಪ್ರತಿ ಚಿತ್ರಮಂದಿರ ಬಳಿ ನಮ್ಮ ಕರ್ಣಿ ಸೇನೆಯ ಕಾರ್ಯಕರ್ತರು ಸೇರಿ ಅಂತಹ ಚಿತ್ರಮಂದಿರಗಳನ್ನು ಧ್ವಂಸ ಮಾಡುತ್ತಾರೆ ಎಂದು ಹೇಳಿದರು. 
ಪದ್ಮಾವತಿ ಭಾರೀ ಬಜೆಟ್ ನ ಚಿತ್ರವಾಗಿದ್ದು ಇದಕ್ಕಾಗಿ ನಿರ್ಮಾಪಕರು 190 ಕೋಟಿ ವ್ಯಯಿಸಿದ್ದಾರೆ. ಇನ್ನು ಚಿತ್ರದಲ್ಲಿ ಬಾಲಿವುಡ್ ನಟಿ ದಿಪೀಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್ ಅಭಿನಯಿಸಿದ್ದಾರೆ. ಪದ್ಮಾವತಿ ಚಿತ್ರದಲ್ಲಿ ರಜಪೂತ್ ಮನೆತನಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ರಾಜಸ್ತಾನದಲ್ಲಿ ಪ್ರತಿಭಟನೆಗಳು ನಡೆಸಿದ್ದವು. ಚಿತ್ರದ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕರ್ಣಿ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT