ಬಾಲಿವುಡ್

ತೀವ್ರ ಆರ್ಥಿಕ ಮುಗ್ಗಟ್ಟು : ಬಾಲಿವುಡ್ ಸಿನಿಮಾಗಳ ನಿಷೇಧ ತೆರವಿಗೆ ಪಾಕ್ ಸರ್ಕಾರಕ್ಕೆ ಸಮಿತಿ ಶಿಫಾರಸು

ಬಾಲಿವುಡ್ ಸಿನಿಮಾಗಳನ್ನು ನಿಷೇಧಿಸಿದ್ದ ಚಿತ್ರಮಂದಿರಗಳ ಮಾಲಿಕರು ಕಳೆದ ನಾಲ್ಕು ತಿಂಗಳಿನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ಇಸ್ಲಾಮಾಬಾದ್: ಬಾಲಿವುಡ್ ನಲ್ಲಿ ಪಾಕಿಸ್ತಾನದ ಕಲಾವಿದರನ್ನು ಬಹಿಷ್ಕರಿಸಿದ್ದಕ್ಕೆ ಪ್ರತಿಯಾಗಿ ಬಾಲಿವುಡ್ ಸಿನಿಮಾಗಳನ್ನು ನಿಷೇಧಿಸಿದ್ದ ಪಾಕಿಸ್ತಾನದ ಚಿತ್ರಮಂದಿರಗಳ ಮಾಲಿಕರು ಈಗ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಬಾಲಿವುಡ್ ಸಿನಿಮಾಗಳಿಗೆ ವಿಧಿಸಿದ್ದ ನಿಷೇಧವನ್ನು ತೆರವು ಮಾಡುವ ಸಾಧ್ಯತೆಗಳು ದಟ್ಟವಾಗಿದೆ. 
ಬಾಲಿವುಡ್ ಸಿನಿಮಾಗಳನ್ನು ನಿಷೇಧಿಸಿದ್ದ ಚಿತ್ರಮಂದಿರಗಳ ಮಾಲಿಕರು ಕಳೆದ ನಾಲ್ಕು ತಿಂಗಳಿನಿಂದ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನವಾಜ್ ಷರೀಫ್ ಸಮಿತಿಯೊಂದನ್ನು ರಚಿಸಿ ಚಿತ್ರಮಂದಿರಗಳ ಮಾಲಿಕರ ಬೇಡಿಕೆಗಳನ್ನು ಪರಿಶೀಲಿಸುವಂತೆ ಸೂಚಿಸಿದ್ದರು. 
ರಾಷ್ಟ್ರೀಯ ಇತಿಹಾಸ ಹಾಗೂ ಸಾಹಿತ್ಯ ಪರಂಪರೆಯ ವಿಷಯಗಳಲ್ಲಿ ಪ್ರಧಾನಿ ಸಲಹೆಗಾರ ಇರ್ಫಾನ್ ಸಿದ್ದಿಕಿ ಅವರನ್ನೊಳಗೊಂಡ ಮಾಹಿತಿ ಸಚಿವ ಮರ್ಯುಮ್ ಔರಂಗಜೇಬ್ ನೇತೃತ್ವದ ಸಮಿತಿ ಬೇಡಿಕೆಗಳನ್ನು ಪರಿಶೀಲಿಸಿ ಪ್ರಧಾನಿ ಹೊರದೇಶಗಳ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡಬಹುದೆಂದು ಅಭಿಪ್ರಾಯಪಟ್ಟಿದೆ. 
ಆಮದು ನೀತಿ ಆದೇಶದಲ್ಲಿ ಪಾಕಿಸ್ತಾನ ಭಾರತೀಯ ಸಿನಿಮಾಗಳನ್ನೂ ಸೇರಿಸಿದ್ದು, ವಾಣೀಜ್ಯ ಸಚಿವಾಲಯ ಸಹ ಭಾರತೀಯ ಸಿನಿಮಾಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ನಿರಾಕ್ಷೇಪಣಾ ಪತ್ರ ನೀಡಿದೆ. " ನಮಗೆ  ಶೇ.70 ರಷ್ಟು ಆದಾಯ ಬರುವುದೇ ಬಾಲಿವುಡ್, ಹಾಲಿವುಡ್ ಸಿನಿಮಾಗಳಿಂದ, ಬಾಲಿವುಡ್ ಸಿನಿಮಾಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿದರೆ ಸಮಸ್ಯೆಯಾಗುವುದಿಲ್ಲ. ಆದರೆ ಅದೇ ಮುಂದುವರೆದರೆ ನಮ್ಮ ಆದಾಯಕ್ಕೆ ಬಲವಾದ ಪೆಟ್ಟು ಬೀಳುತ್ತದೆ ಎಂದು ಕರಾಚಿಯ ಚಿತ್ರಮಂದಿರದ ಮಾಲಿಕರೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT