ಐಶ್ವರ್ಯ ರೈ ಬಚ್ಚನ್-ಅಭಿಷೇಕ್ ಬಚ್ಚನ್ 
ಬಾಲಿವುಡ್

ಐಶ್ವರ್ಯ ಜೊತೆಗೆ ಸಿನೆಮಾ; ಇನ್ನು ಮಾತುಕತೆಯಲ್ಲಿದೆ ಎಂದ ಅಭಿಷೇಕ್

ನಿಜ ಜೀವನದ ಸಂಗಾತಿಗಳು ಸಿನೆಮಾವೊಂದರಲ್ಲಿ ಬೆಳ್ಳಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಮಾತುಕತೆ ಜಾರಿಯಲ್ಲಿದೆ ಎಂದು ಈ

ಮುಂಬೈ: ನಿಜ ಜೀವನದ ಸಂಗಾತಿಗಳು ಸಿನೆಮಾವೊಂದರಲ್ಲಿ ಬೆಳ್ಳಿ ತೆರೆಯ ಮೇಲೆ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಇನ್ನು ಮಾತುಕತೆ ಜಾರಿಯಲ್ಲಿದೆ ಎಂದು ಈ ವದಂತಿಯೂ ಬಗ್ಗೆ ಪ್ರತಿಕ್ರಿಯಿಸಿರುವ ನಟ ಅಭಿಷೇಕ್ ಬಚ್ಚನ್, ನಿರ್ಮಾಪಕರ ಘೋಷಣೆಗೆ ಕಾಯುವುದು ಸೂಕ್ತ ಎನ್ನುತ್ತಾರೆ. 
ಅನುರಾಗ್ ಕಶ್ಯಪ್ ನಿರ್ಮಾಣ ಸಂಸ್ಥೆಯ 'ಗುಲಾಬ್ ಜಾಮೂನ್'ನಲ್ಲಿ ಅಭಿಷೇಕ್ ಮತ್ತು ಐಶ್ವರ್ಯ ರೈ ಬಚ್ಚನ್ ಒಟ್ಟಿಗೆ ನಟಿಸಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿದ್ದವು.
ಇದರ ಬಗ್ಗೆ ಅಭಿಷೇಕ್ ಅವರನ್ನು ಪ್ರಶ್ನಿಸಿದಾಗ "ಆ ಸಿನೆಮಾವನ್ನು ಅನುರಾಗ್ ಕಶ್ಯಪ್ ನಿರ್ದೇಶಿಸುತ್ತಿಲ್ಲ. ಹೊಸ ನಿರ್ದೇಶಕರೊಬ್ಬರು ಅದನ್ನು ನಿರ್ದೇಶಿಸಲಿದ್ದಾರೆ. ಅನುರಾಗ್ ಕಶ್ಯಪ್ ನಿರ್ಮಾಪಕ. ಇದಕ್ಕಾಗಿ ನಿರ್ಮಾಪಕರ ಜೊತೆ ಮಾತುಕತೆ ಇನ್ನು ಜಾರಿಯಲ್ಲಿದ್ದು ಸದ್ಯಕ್ಕೆ ನಾನು ಏನನ್ನು ಧೃಢೀಕರಿಸುವ ಸ್ಥಿತಿಯಲ್ಲಿಲ್ಲ. ಇದರ ಬಗ್ಗೆ ಘೋಷಣೆ ಮಾಡಲು ನಿರ್ಮಾಪಕರೇ ಸೂಕ್ತ" ಎನ್ನುತ್ತಾರೆ. 
ತಮ್ಮ ಸಿನೆಮಾ 'ಬಾರ್ಡರ್'ಗೆ ೨೦ ವರ್ಷ ತುಂಬಿದ ಸಂಭ್ರಮಾಚರಣೆಯಲ್ಲಿ ಅಭಿಷೇಕ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. 
'ಬಾರ್ಡರ್' ಸಿನೆಮಾವನ್ನು ಜೆ ಪಿ ದತ್ತ ನಿರ್ದೇಶಿಸಿದ್ದರು. ಅಭಿಷೇಕ್ ಬಚ್ಚನ್ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ 'ರಿಫ್ಯುಜಿ' ಸಿನೆಮಾವನ್ನು ಕೂಡ ದತ್ತ ಅವರೇ ನಿರ್ದೇಶಿಸಿದ್ದರು. 'ಬಾರ್ಡರ್' ಸಿನೆಮಾದ ಎರಡನೇ ಬಾಗ ಬರಲಿದೆಯೆ ಎಂಬ ಪ್ರಶ್ನೆಗೆ "ಜೆಪಿ ದತ್ತ ಅವರಿಗೆ ಮಾತ್ರ ಅದು ಸಾಧ್ಯ ಆದರೆ ಅದನ್ನು ಮಾಡಲು ಅವರು ಸಿದ್ಧರಿಲ್ಲ" ಎಂದು ಕೂಡ ಅಭಿಷೇಕ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT