ಚಿತ್ರದ ಪೋಸ್ಟರ್ 
ಬಾಲಿವುಡ್

ಬಿಡುಗಡೆಗೂ ಮುನ್ನ ವಿಶೇಷ ಸಮಿತಿ ಮುಂದೆ ಪದ್ಮಾವತಿಯನ್ನು ತೋರಿಸಲು ಬನ್ಸಾಲಿ ಒಪ್ಪಿಗೆ

ಡಿಸೆಂಬರ್ 1ಕ್ಕೆ ಚಿತ್ರ ಬಿಡುಗಡೆಗೆ ಮುನ್ನ ವಿಶೇಷ ಸಮಿತಿ ಮುಂದೆ ಸಿನಿಮಾವನ್ನು .....

ನವದೆಹಲಿ: ಡಿಸೆಂಬರ್ 1ಕ್ಕೆ ಚಿತ್ರ ಬಿಡುಗಡೆಗೆ ಮುನ್ನ ವಿಶೇಷ ಸಮಿತಿ ಮುಂದೆ ಸಿನಿಮಾವನ್ನು ತೋರಿಸಲು ವಿವಾದಾತ್ಮಕ ಪದ್ಮಾವತಿ ಚಲನಚಿತ್ರ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ವಿವಾದಕ್ಕೆ ಮತ್ತೊಂದು ಮಗ್ಗುಲು ಸಿಕ್ಕಿದೆ.
ನಿನ್ನೆ ಸಂಜಯ್ ಲೀಲಾ ಬನ್ಸಾಲಿಯವರ ಮುಂಬೈಯ ಜುಹು ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಸುಮಾರು 15 ಮಂದಿ ಅಖಂಡ ರಜ್ಪೂತಾನ ಸೇವಾ ಸಂಘದವರನ್ನು ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಚಿತ್ರ ಬಿಡುಗಡೆಗೂ ಮುನ್ನ ತಮಗೆ ತೋರಿಸಬೇಕೆಂದು ಮತ್ತು ಸೆನ್ಸಾರ್ ಮಂಡಳಿಗೆ ಹೋಗುವ ಮುನ್ನ ಚಿತ್ರವನ್ನು ತಾವು ನೋಡಬೇಕೆಂದು ಒತ್ತಾಯಿಸುತ್ತಿದ್ದರು.
ಅನೇಕ ವಿವಾದಗಳು ಮತ್ತು ಪ್ರತಿಭಟನೆ ನಂತರ ಇದೀಗ ನಿರ್ದೇಶಕರು ಚಿತ್ರವನ್ನು ವಿಶೇಷ ಸಮಿತಿ ಮುಂದೆ ತೋರಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಖಂಡ ರಜಪೂತಾನ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಆರ್ ಪಿ ಸಿಂಗ್, ಬನ್ಸಾಲಿ ಮತ್ತು ರಜಪೂತ ಸಂಘಟನೆಗಳ ಮಧ್ಯವರ್ತಿಯಾಗಿರುವ ಮಹವೀರ ಜೈನ್ ಎಂಬುವವರಿಂದ ಕರೆ ಬಂದಿದ್ದು, ಚಿತ್ರ ಬಿಡುಗಡೆಗೂ ಮುನ್ನ ಇದೇ 15ರಿಂದ 18ರ ನಡುವೆ ಚಿತ್ರವನ್ನು ಸಮಿತಿ ಮುಂದೆ ತೋರಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT