ನಟ ಶಾಹಿದ್ ಕಪೂರ್ (ಸಂಗ್ರಹ ಚಿತ್ರ) 
ಬಾಲಿವುಡ್

ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಶಾಹಿದ್ ಕಪೂರ್ ಮನವಿ

ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಪದ್ಮಾವತಿ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ನಟ ಶಾಹಿದ್ ಕಪೂರ್ ಹೇಳಿಕೆ ನೀಡಿದ್ದು, ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರೇಕ್ಷಕರರಲ್ಲಿ ಮನವಿ ಮಾಡಿದ್ದಾರೆ.

ಮುಂಬೈ: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಪದ್ಮಾವತಿ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ನಟ ಶಾಹಿದ್ ಕಪೂರ್ ಹೇಳಿಕೆ ನೀಡಿದ್ದು, ಮೊದಲು ಚಿತ್ರ ನೋಡಿ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು  ಪ್ರೇಕ್ಷಕರರಲ್ಲಿ ಮನವಿ ಮಾಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ಚಿತ್ರಕ್ಕೆ ಬಿಜೆಪಿ, ಹಿಂದೂಪರ ಸಂಘಟನೆಗಳೂ ಸೇರಿದಂತೆ ರಾಜಸ್ಥಾನದ ರಜಪೂತ ರಾಜವಂಶಸ್ಥರಿಂದಲೂ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಅಲ್ಲದೆ ಚಿತ್ರದ ಬಿಡುಗಡೆಗೆ ಅನುವು  ಮಾಡಿಕೊಡಬಾರದು ಎಂದು ರಾಜವಂಶಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಚಿತ್ರದ ನಟ ಶಾಹಿದ್ ಕಪೂರ್ ಹೇಳಿಕೆ ನೀಡಿದ್ದು, ಚಿತ್ರದಲ್ಲಿ ರಾಣಿ ಪದ್ಮಾವತಿ ಅವರನ್ನು ಅವಹೇಳನ  ಮಾಡುವ ಯಾವುದೇ ರೀತಿಯ ಸನ್ನಿವೇಶವಿಲ್ಲ. ಪ್ರತಿಭಟನಾಕಾರರು ಮೊದಲು ಚಿತ್ರ ನೋಡಲಿ ಆ ಮೇಲೆ ನಿರ್ಧಾರ ಕೈಗೊಳ್ಳಲಿ. ಅಲ್ಲಿಯವರೆಗೂ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ನಮಗೂ ಒಂದು ಅವಕಾಶ ಕೊಡಿ..ಚಿತ್ರ ಬಿಡುಗಡೆಗೂ ಮೊದಲೇ ಯಾವುದೇ ಪೂರ್ವಾಗ್ರಹ ಯೋಚನೆಗಳು ಬೇಡ. ಎಲ್ಲರ ಭಾವನೆಗಳನ್ನೂ ಅರ್ಥೈಸಿಕೊಂಡು ನಾವು ಚಿತ್ರ ನಿರ್ಮಾಣ ಮಾಡಿದ್ದೇವೆ. ಜನ ಏನೇ ಮಾತನಾಡಲಿ.  ಆದರೆ ಮೊದಲು ನೀವು ಚಿತ್ರ ನೋಡಿ ಬಳಿಕ ಒಂದು ನಿರ್ಧಾರಕ್ಕೆ ಬನ್ನಿ ಎಂದು ಶಾಹಿದ್ ಕಪೂರ್ ಮನವಿ ಮಾಡಿದ್ದಾರೆ.
ಇನ್ನು ಚಿತ್ರದಲ್ಲಿ ನಟ ಶಾಹಿದ್ ಕಪೂರ್ ರಾಜಾ ಮಹಾರಾವಾಲ್ ರತನ್ ಸಿಂಗ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ನಟಿ ದೀಪಿಕಾ ರತನ್ ಸಿಂಗ್ ರ ರಾಣಿ ಪದ್ಮಾವತಿಯಾಗಿ ಅಭಿನಯಿಸಿದ್ದಾರೆ. ಇನ್ನು ನಟ ರಣ್ವೀರ್ ಸಿಂಗ್  ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT