ರಣವೀರ್ ಸಿಂಗ್ 
ಬಾಲಿವುಡ್

ನಾನು ಶೇ.200ರಷ್ಟು 'ಪದ್ಮಾವತಿ' ಪರ ಇದ್ದೇನೆ: ರಣವೀರ್ ಸಿಂಗ್

ಪದ್ಮಾವತಿ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇದೇ....

ಮುಂಬೈ: ಪದ್ಮಾವತಿ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ತಾವು ಶೇ.200ರಷ್ಟು 'ಪದ್ಮಾವತಿ'ಯೊಂದಿಗೆ ಮತ್ತು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರೊಂದಿಗೆ ಇರುವುದಾಗಿ ಮಂಗಳವಾರ ಹೇಳಿದ್ದಾರೆ.
ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಚಿತ್ರದ ನಿರ್ಮಾಪಕರು ಅಧಿಕೃತವಾಗಿ ತಮ್ಮ ನಿಲುವು ಸ್ಪಷ್ಟಪಡಿಸುವವರೆಗೆ ಯಾವುದೇ ಹೇಳಿಕೆ ನೀಡದಂತೆ ನನಗೆ ಸೂಚಿಸಲಾಗಿತ್ತು ಎಂದು ರಣವೀರ್ ಸಿಂಗ್ ಅವರು ಎಎನ್ಐ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರ ಭಾವನೆಗೆ ಧಕ್ಕೆ ತಂದರೆ ಮೂಗು ಕತ್ತರಿಸುವುದಾಗಿ ಶ್ರೀ ರಜಪೂತ್ ಕರ್ಣಿ ಸೇನಾ ಪದ್ಮಾವತಿ ಚಿತ್ರದ ನಟಿ ದೀಪಿಕಾ ಪಡುಕೋಣೆಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ನಟಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಶೂರ್ಪನಖಿಗೆ ಲಕ್ಷ್ಮಣ ಮಾಡಿದ್ದನ್ನೇ ನಾವು ದೀಪಿಕಾಗೂ ಮಾಡಲು ಹೇಸುವುದಿಲ್ಲ’ ಎಂದು ಕರ್ಣಿ ಸೇನಾ ನಾಯಕ ಮಹಿಪಾಲ್ ಸಿಂಗ್ ಮಕ್ರಾನ ಅವರು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT