ಜಾವೇದ್ ಅಖ್ತರ್ 
ಬಾಲಿವುಡ್

ಪದ್ಮಾವತಿ ವಿವಾದ: ಜಾವೇದ್ ಅಖ್ತರ್ ವಿರುದ್ಧ ದೂರು ದಾಖಲು

ರಜಪೂತರನ್ನು ಅವಹೇಳನ ಮಾಡಿರುವ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಕಾರ್ಣಿ ಸೇನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ...

ರಜಪೂತರನ್ನು ಅವಹೇಳನ ಮಾಡಿರುವ ಕವಿ ಮತ್ತು ಗೀತರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಕಾರ್ಣಿ ಸೇನೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. 
ವಿವಾದದ ಕೇಂದ್ರ ಬಿಂದುವಾಗಿರುವ ಪದ್ಮಾವತಿ ಚಿತ್ರವನ್ನು ರಾಜಸ್ಥಾನದಲ್ಲಿ ನಿಷೇಧಿಸಬೇಕು ಎಂದು ಕಾರ್ಣಿ ಸೇನೆ ಆಗ್ರಹಿಸಿದ್ದು ಇದೇ ವೇಳೆ ರಜಪೂತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಜಾವೇದ್ ಅಖ್ತರ್ ವಿರುದ್ಧ ಕೇಸ್ ದಾಖಲಿಸುವಂತೆ ಸೇನೆ ಪೊಲೀಸರಿಗೆ ದೂರು ನೀಡಿದೆ. 
ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ್ದ ಜಾವೇದ್ ಅಖ್ತರ್ ಈ ವೇಳೆ ಪದ್ಮಾವತಿ ಚಿತ್ರವನ್ನು ಸಮರ್ಥಿಸಿಕೊಂಡಿದ್ದರು. ಜತೆಗೆ ರಜಪೂತ ಆಡಳಿತಗಾರರು ಬ್ರಿಟೀಷರ ಅಧಿಕಾರದಲ್ಲಿ 200 ವರ್ಷ ಕಾಲ ಸೇವೆ ಸಲ್ಲಿಸಿದ್ದರೇ ಹೊರತು ಅವರ ವಿರುದ್ಧ ಹೋರಾಡಲಿಲ್ಲವೆಂದು ಪ್ರಶ್ನಿಸಿದ್ದರು. 
ಜಾವೇದ್ ಅಖ್ತರ್ ಅಭಿಪ್ರಾಯ ರಜಪೂತರ ಇತಿಹಾಸವನ್ನು ಅಪಹಾಸ್ಯ ಮಾಡಿದೆ ಎಂದು ಕಾರ್ಣಿ ಸೇನೆ ಹೇಳಿದೆ. ಒಂದು ನಿರ್ದಿಷ್ಟ ಸಮುದಾಯವನ್ನು ಅವಮಾನಿಸಲು ಅಖ್ತರ್ ಉದ್ದೇಶಪೂರ್ವಕವಾಗಿ ಪ್ರಯತ್ನಿಸಿದ್ದಾರೆ ಎಂದು ಅವರ ವಿರುದ್ಧ ದೂರು ಸಲ್ಲಿಸಿದ್ದು ಕಠಿಣ ಶಿಕ್ಷೆಗೆ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!