ಪದ್ಮಾವತಿ ಚಿತ್ರದ ಸ್ಟಿಲ್ 
ಬಾಲಿವುಡ್

'ಪದ್ಮಾವತಿ' ಬೆಂಬಲಕ್ಕೆ ನಿಂತ ಚಿತ್ರೋದ್ಯಮ: ನಾಳೆ 15 ನಿಮಿಷ ದೇಶಾದ್ಯಂತ ಚಿತ್ರೀಕರಣ ಬಂದ್

ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ಪದ್ಮಾವತಿ ಚಿತ್ರದ ಬೆಂಬಲಕ್ಕೆ ನಿಂತಿರುವ ಭಾರತೀಯ ಚಿತ್ರೋದ್ಯಮದ ನೂರಾರು....

ಮುಂಬೈ: ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರ ಪದ್ಮಾವತಿ ಚಿತ್ರದ ಬೆಂಬಲಕ್ಕೆ ನಿಂತಿರುವ ಭಾರತೀಯ ಚಿತ್ರೋದ್ಯಮದ ನೂರಾರು ಚಿತ್ರ ನಿರ್ಮಾಪಕರು ಹಾಗೂ ಕಾರ್ಮಿಕರು ಭಾನುವಾರ 15 ನಿಮಿಷಗಳ ಕಾಲ ಚಿತ್ರೀಕರಣ ಸ್ಥಗಿತಗೊಳಿಸುವ ಮೂಲಕ ಒಗ್ಗಟ್ಟು ಪ್ರದರ್ಶಿಸಲು ಮುಂದಾಗಿದ್ದಾರೆ.
ಭಾರತೀಯ ಚಿತ್ರ ಮತ್ತು ಟಿವಿ ನಿರ್ದೇಶಕರ ಸಂಘ(ಐಎಪ್ ಟಿಡಿಎ) ಸೇರಿದಂತೆ ದೇಶಾದ್ಯಂತ ಒಟ್ಟು 19 ಚಿತ್ರೋದ್ಯಮ ಸಂಘಟನೆಗಳು, ಕ್ರಿಯಾತ್ಮಕ ವಲಯದಲ್ಲಿರುವ ನಿರ್ದೇಶಕರ ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆಗಾಗಿ 15 ನಿಮಿಷಗಳ ಕಾಲ ಚಿತ್ರೀಕರಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಮುಂಬೈನ ಫಿಲ್ಮ್ ಸಿಟಿಯಲ್ಲಿ ನನಗೆ ಸ್ವಾತಂತ್ರ್ಯ ಇದೆಯೇ? ಎಂಬ ಘೋಷಣೆಯಡಿ ಭಾರತೀಯ ಚಿತ್ರೋದ್ಯಮ ಪ್ರತಿಭಟನೆ ನಡೆಸುತ್ತಿದ್ದು, ಇದರಲ್ಲಿ ಸುಮಾರು 600-700 ಚಿತ್ರ ನಿರ್ಮಾಪಕರು, ಬರಹಗಾರರು, ಕಾರ್ಮಿಕರು ಭಾಗವಹಿಸುವ ಮೂಲಕ 'ಪದ್ಮಾವತಿ'ಯನ್ನು ಬೆಂಬಲಿಸಲಿದ್ದಾರೆ.
ನಾಳೆ ಸಂಜೆ 4.15ರಿಂದ 4.30ರ ವರೆಗೆ ದೇಶಾದ್ಯಂತ ಚಿತ್ರೀಕರಣವನ್ನು ಬಂದ್ ಮಾಡಲಾಗುತ್ತಿದೆ. ಈ ಪ್ರತಿಭಟನೆ ಮೂಲಕ ನಾವು ಸ್ವತಂತ್ರರೇ? ನಾವು ಪ್ರಜಾಪ್ರಭುತ್ವ ದೇಶದಲ್ಲಿ ಬದುಕುತ್ತಿದ್ದೇವೆಯೇ? ಎಂದು ಪ್ರಶ್ಮಿಸಲಾಗುವುದು ಎಂದು ಐಎಫ್ ಟಿಡಿಎ ಸಂಚಾಲಕ ಅಶೋಕ್ ಪಂಡಿತ್ ಅವರು ಹೇಳಿದ್ದಾರೆ.
ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ ಮತ್ತು ರಾಣಿ ಪದ್ಮಾವತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ರಜಪೂತ್ ಸಂಘಟನೆಗಳು ಹಾಗೂ ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಚಿತ್ರ ಬಿಡುಗಡೆಗೂ ಮುನ್ನ ಹಲವು ರಾಜ್ಯಗಳಲ್ಲಿ ನಿಷೇಧ ಹೇರಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT