ಕೇಸರಿ ಅವತಾರದಲ್ಲಿ ಅಕ್ಷಯ್ ಕುಮಾರ್ 
ಬಾಲಿವುಡ್

ಮಹಾರಾಷ್ಟ್ರ: ಅಕ್ಷಯ್ ಕುಮಾರ್ ಅಭಿನಯದ ’ಕೇಸರಿ' ಚಿತ್ರೀಕರಣ ಸೆಟ್ ನಲ್ಲಿ ಬೆಂಕಿ ಅನಾಹುತ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ’ಕೇಸರಿ’ ಚಿತ್ರೀಕರಣ ಸೆಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.

ಸತಾರಾ(ಮಹಾರಾಷ್ಟ್ರ): ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ’ಕೇಸರಿ’ ಚಿತ್ರೀಕರಣ ಸೆಟ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಮಹಾರಾಷ್ಟ್ರದ ಸತಾರಾ ಜಿಲ್ಲೆ  ವೈ ತೆಹಸಿಲ್‍ನ ಪಿಂಪೋಡೆ ಬುದ್ರಕ್ ಗ್ರಾಮದಲ್ಲಿ ನಡೆಯುತ್ತಿದ್ದ ಚಿತ್ರೀಕರಣದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಸತಾರಾ ಪೊಲೀಸ್ ನಿಯಂತ್ರಣ ಕೊಠಡಿ ಅಧಿಕಾರಿಗಳು ಹೇಳಿದ್ದಾರೆ.
ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣದ ವೇಳೆ ಬಾಂಬ್ ಗಳನ್ನು ಬಳಸಲಾಗಿತ್ತು. ಬಾಂಬ್ ಸ್ಫೋಟದ ವೇಳೆ ಬೆಂಕಿಯ ಕಿಡಿಯೊಂಡು ಸೆಟ್ ನಲ್ಲಿದ್ದ ವಸ್ತುವಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.
ನಾಯಕ ನಟ ಅಕ್ಷಯ್ ಕುಮಾರ್ ತಮ್ಮ ಪಾಲಿನ ಚಿತ್ರೀಕರಣ ಮುಗಿಸಿ ತೆರಳಿದ್ದ ನಂತರದಲ್ಲಿ ಈ ಘಟನೆ ನಡೆದಿದೆ. ಅವಘಡದ ಬಗೆಗೆ ಅಕ್ಷಯ್ ಕುಮಾರ್ ಅಥವಾ ’ಕೇಸರಿ’ ಚಿತ್ರತಂಡ ಯಾವ ಪ್ರತಿಕ್ರಿಯೆ ನೀಡಿಲ್ಲ.
1897ನಲ್ಲಿ ನಡೆದ ಯುದ್ಧದಲ್ಲಿ 21 ಸಿಖ್ ಧರ್ಮದವರು 10 ಸಾವಿರ ಅಫ್ಘಾನ್ ಮಂದಿಯ ಜೊತೆ ಹೋರಾಡಿದ ಘಟನೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಈ ಚಿತ್ರ ತಯಾರಾಗುತ್ತಿದೆ. ಅನುರಾಗ್ ಸಿಂಗ್ ನಿರ್ದೇಶನದ ಈ ಚಿತ್ರಕ್ಕೆ ಪರಿಣೀತಿ ಚೋಪ್ರಾ ನಾಯಕಿಯಾಗಿದ್ದಾರೆ. ಧರ್ಮ ಪ್ರೊಡಕ್ಷನ್, ಕೇಪ್ ಆಫ್ ಗುಡ್ ಫಿಲ್ಮ್ಸ್ ಹಾಗೂ ಅಝೂರ್ ಎಂಟರ್ ಟೈನ್‍ಮೆಂಟ್ ಸಂಸ್ಥೆ ಈ ಚಿತ್ರಕ್ಕೆ ಬಂಡವಾಳ ತೊಡಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT