ಮಲ್ಲಿಕಾ ಶೆರಾವತ್ 
ಬಾಲಿವುಡ್

ಮಹಾತ್ಮ ಗಾಂಧಿಯ ಪುಣ್ಯಭೂಮಿ ಈಗ ಅತ್ಯಾಚಾರಿಗಳ ನಾಡಾಗುತ್ತಿದೆ: ಮಲ್ಲಿಕಾ ಶೆರಾವತ್

ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ...

ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ರಾಷ್ಟ್ರಪಿತ ಮಹಾತ್ಮಾ ಗಾಂಧಿಜೀ ಅವರ ಪುಣ್ಯಭೂಮಿ ಇಂದು ಅತ್ಯಾಚಾರಿಗಳ ಭೂಮಿಯಾಗುತ್ತಿದೆ ಎಂದು ಹೇಳಿದ್ದಾರೆ. 
ದಾಸ್ ದೇವ್ ಚಿತ್ರದ ವಿಶೇಷ ಪ್ರದರ್ಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಮಲ್ಲಿಕಾ ಶೆರಾವತ್ ದೇಶದಲ್ಲಿ ಹೆಚ್ಚುತ್ತಿರುವ ಅತ್ಯಾಚಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. 
ದೇಶದಲ್ಲಿ ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯಗಳು ನಾಚಿಕೆಗೇಡಿನ ಸಂಗತಿ. ಗಾಂಧಿಜೀ ಅವರ ಪುಣ್ಯಭೂಮಿ, ಇಂದು ಅತ್ಯಾಚಾರಿಗಳ ನಾಡಾಗುತ್ತಿದೆ. ದೇಶದಲ್ಲಿ ಮಾಧ್ಯಮಗಳು ಇಂದು ಪ್ರಬಲ ಶಕ್ತಿಯಾಗಿದ್ದು ಮಾಧ್ಯಮಗಳು ನಿರ್ಭೀತವಾಗಿ ಕೆಲಸ ಮಾಡುತ್ತಿವೆ. ಹೀಗಾಗಿ ಅತ್ಯಾಚಾರ ಪ್ರಕರಣಗಳು ಬಯಲಿಗೆ ಬರುತ್ತಿದ್ದು ಮಾಧ್ಯಮಗಳ ಮೇಲೆ ಭರವಸೆ ಇಡಬಹುದು ಎಂದು ನಾನು ಭಾವಿಸುತ್ತೇನೆ ಎಂದರು. 
ಮಾಧ್ಯಮಗಳ ನಿರ್ಭಿತ ವರದಿ ಹಾಗೂ ಒತ್ತಡದಿಂದಾಗಿ ದೇಶದಲ್ಲಿ ಅತ್ಯಾಚಾರ ಕುರಿತಾದ ಕಾನೂನು ಪ್ರಬಲವಾಗಿದೆ. ಹೀಗಾಗಿ ನಾನು ಮಾಧ್ಯಮಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. 
ಏಪ್ರಿಲ್ 22ರಂದು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂಕಿತ ಹಾಕಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT