ಅನುಪಮ್ ಖೇರ್ 
ಬಾಲಿವುಡ್

'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್'ನಿಂದ ಹಿಂದೆ ಸರಿಯಲ್ಲ: ಅನುಪಮ್ ಖೇರ್

'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ನನ್ನ ಜೀವನದ ಅತ್ಯುತ್ತಮ ಅಭಿನಯದ ಚಿತ್ರ. ಅದರಿಂದ ಹಿಂದೆ ಸರಿಯುವ ಮಾತೇ....

ಮುಂಬೈ: 'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ನನ್ನ ಜೀವನದ ಅತ್ಯುತ್ತಮ ಅಭಿನಯದ ಚಿತ್ರ. ಅದರಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಬಾಲಿವುಡ್ ಅನುಪಮ್‌ ಖೇರ್‌ ಅವರು ಶುಕ್ರವಾರ ಹೇಳಿದ್ದಾರೆ.
'ದಿ ಆ್ಯಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಚಿತ್ರದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾತ್ರದಲ್ಲಿ ಅನುಪಮ್ ಖೇರ್‌ ಅವರು ಅಭಿನಯಿಸಿದ್ದು, ಚಿತ್ರ ಬಿಡುಗಡೆಗೆ ಮಹಾರಾಷ್ಟ್ರದ ಯುವ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಆದರೆ ತಮ್ಮ ನಾಯಕನ ಬಗ್ಗೆ ಚಿತ್ರ ಮಾಡಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಖುಷಿಪಡಬೇಕು ಎಂದು ಅನುಪಮ್ ಖೇರ್ ಹೇಳಿದ್ದಾರೆ.
'ನಾನು ಈ ಚಿತ್ರದಿಂದ ಹಿಂದೆ ಸರಿಯುವುದಿಲ್ಲ. ಇದು ನನ್ನ ಜೀವನದ ಅತ್ಯುತ್ತಮ ಅಭಿನಯದ ಚಿತ್ರ. ಈ ಚಿತ್ರ ನೋಡಿದರೆ ಸ್ವತಃ ಮನಮೋಹನ್ ಸಿಂಗ್ ಅವರು ಅದನ್ನು ಒಪ್ಪಿಕೊಳ್ಳುತ್ತಾರೆ. ಈ ಚಿತ್ರ ಶೇ.100ರಷ್ಟು ನಿಖರವಾಗಿದೆ ಎಂದು ಅನುಪಮ್ ಖೇರ್ ಅವರು ಟ್ವೀಟ್ ಮಾಡಿದ್ದಾರೆ.
ಅಂದಿನ ಪ್ರಧಾನಮಂತ್ರಿಗಳಿಗೆ ಆಪ್ತರಾಗಿದ್ದ ವ್ಯಕ್ತಿಯೇ ಬರೆದಿದ್ದ ಪುಸ್ತಕವನ್ನು ಆಧರಿಸಿ ನಾವು ಚಿತ್ರವನ್ನು ಮಾಡಿದ್ದೇವೆ. ಈ ಪುಸ್ತಕವನ್ನು ತಿರಸ್ಕರಿಸುವಂತಿಲ್ಲ. ಚಿತ್ರ ಬಿಡುಗಡೆಯಾದ ಬಳಿಕ ಜನರೇ ಈ ಬಗ್ಗೆ ನಿರ್ಧರಿಸುತ್ತಾರೆ. ಈಗೇಕೆ ಚಿತ್ರಕ್ಕೆ ಇಷ್ಟೊಂದು ಬಣ್ಣವನ್ನು ನೀಡುತ್ತಿದ್ದೀರಿ ಎಂದು ಖೇರ್ ಪ್ರಶ್ನಿಸಿದ್ದಾರೆ.
ಗುರುವಾರ 'ದಿ ಆ್ಯಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌' ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯನ್ನು ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದೂ ಕಾಂಗ್ರೆಸ್‌ ಸಾಕಷ್ಟು ವಿರೋಧ ವ್ಯಕ್ತಪಡಿಸುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

ಪೆಟ್ರೋಲ್ ದರ ಏರಿಕೆ, ದೇಶಾದ್ಯಂತ ವ್ಯಾಪಕ ಪ್ರತಿಭಟನೆ; ಬೆಚ್ಚಿಬಿದ್ದ Pak ಸರ್ಕಾರ, ಲೀಟರ್ ಗೆ 80 ರೂ ಗಳಷ್ಟು ಬೆಲೆ ಕಡಿತ!

Hubli Love jihad case: ವಿಡಿಯೋ ಇರೋದು ನಿಜ, ಆದ್ರೆ… ಪ್ರಜ್ಞೆ ತಪ್ಪಿದ್ದರೆ ವಿಡಿಯೋದಲ್ಲಿ ಹೇಗೆ ಆ್ಯಕ್ಟಿವ್ ಆಗಿರುತ್ತಾಳೆ?: Sameer Mulla ಸ್ಫೋಟಕ ಹೇಳಿಕೆ!

IPL 2026: Shreyas Iyer ಗೆ ಮತ್ತೆ ದಂಡ.. ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

SCROLL FOR NEXT