ಸಂಗ್ರಹ ಚಿತ್ರ 
ಬಾಲಿವುಡ್

ಹೊರ ಜಗತ್ತಿಗೆ ಶ್ರೀದೇವಿ ಚಾಂದಿನಿ, ನನಗೆ.. ನನ್ನ ಪ್ರೀತಿ, ಸ್ನೇಹಿತೆ, ನನ್ನ ಮಕ್ಕಳ ಶ್ರೇಷ್ಠ ತಾಯಿ: ಬೋನಿ ಕಪೂರ್

ನಟಿ ಶ್ರೀದೇವಿ ಸಾವಿನ ಬಳಿಕ ಪತಿ ಬೋನಿ ಕಪೂರ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಶ್ರೀದೇವಿ ಅವರನ್ನು ನೆನೆದು ಭಾವುಕರಾಗಿ ಪತ್ರವೊಂದನ್ನು ಬರೆದಿದ್ದಾರೆ.

ನವದೆಹಲಿ: ನಟಿ ಶ್ರೀದೇವಿ ಸಾವಿನ ಬಳಿಕ ಪತಿ ಬೋನಿ ಕಪೂರ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಶ್ರೀದೇವಿ ಅವರನ್ನು ನೆನೆದು ಭಾವುಕರಾಗಿ ಪತ್ರವೊಂದನ್ನು ಬರೆದಿದ್ದಾರೆ.
ಶ್ರೀದೇವಿ ಬೋನಿ ಕಪೂರ್ ಎಂಬ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬೋನಿ ಕಪೂರ್ ಈ ಪತ್ರವನ್ನು ಬರೆದಿದ್ದು, ಪತ್ರದ ಮೂಲಕ ಪತ್ನಿ ಶ್ರೀದೇವಿ ಸಾವಿನ ನೋವನ್ನು ಹೊರಹಾಕಿದ್ದಾರೆ. ಈ ವೇಳೆ ಶ್ರೀದೇವಿ ಸಾವಿನ ಸಮಯದಲ್ಲಿ ಸಹಕಾರ ನೀಡಿದ ಕುಟುಂಬಸ್ಥರು, ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಕೃತಜ್ಞತೆ ಹೇಳಿದ್ದಾರೆ. 
ಬೋನಿ ಪತ್ರದ ಸಾರಾಂಶ ಹೀಗಿದೆ….
'ನಾನು ನನ್ನ ಗೆಳತಿಯನ್ನು ಕಳೆದುಕೊಂಡಿದ್ದೇನೆ. ಅದಕ್ಕಿಂತಲೂ ಹೆಚ್ಚಾಗಿ ಎರಡು ಹೆಣ್ಣು ಮಕ್ಕಳ ತಾಯಿಯನ್ನು ಕಳೆದುಕೊಂಡಿದ್ದೇನೆ. ಅವಳಿಲ್ಲ ಎಂಬ ನೋವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗುತ್ತಿಲ್ಲ.
ಶ್ರೀದೇವಿ ಸಾವಿನ ಸಮಯದಲ್ಲಿ ಮಾನಸಿಕ ಬೆಂಬಲ, ಸಹಕಾರ ನೀಡಿದ ಸ್ನೇಹಿತರು, ಕುಟುಂಬಸ್ಥರು, ಅಭಿಮಾನಿಗಳಿಗೆ ಸದಾ ಕೃತಜ್ಞನಾಗಿರುತ್ತೇನೆ. ಅರ್ಜುನ್​ ಮತ್ತು ಅಂಶುಲಾ ನನ್ನ ಹಾಗೂ ಜಾಹ್ನವಿ, ಖುಷಿಗೆ ಬೆನ್ನೆಲುಬಾಗಿ ನಿಂತರು. ಒಂದು ಕುಟುಂಬವಾಗಿ ನಾವು ಈ ಅನಿರೀಕ್ಷಿತ ಮತ್ತು ಅಸಹನೀಯ ನಷ್ಟವನ್ನು ಸಹಿಸಲೇಬೇಕಿದೆ. ಎಲ್ಲರೂ ಒಟ್ಟಾಗಿ ದುಃಖದ ಸಂದರ್ಭವನ್ನು ಎದುರಿಸಲೇ ಬೇಕಾಗಿದೆ. 
ಹೊರಜಗತ್ತಿಗೆ ಶ್ರೀದೇವಿಯೆಂದರೆ ಚಾಂದನಿ, ಅದ್ಭುತ ನಟಿ. ಆದರೆ ನನಗೆ ನನ್ನ ಪ್ರೀತಿ, ಸ್ನೇಹಿತೆ, ನನ್ನ ಮಕ್ಕಳ ಶ್ರೇಷ್ಠ ತಾಯಿ, ಅಷ್ಟೇ ಅಲ್ಲ ನಮ್ಮ ಕುಟುಂಬದ ಆಧಾರ ಸ್ತಂಭವಾಗಿದ್ದಳು. ಪತ್ನಿಯಾಗಿ ನನ್ನನ್ನು, ತಾಯಿಯಾಗಿ ಜಾಹ್ನವಿ ಹಾಗೂ ಖುಷಿಯನ್ನು ಶ್ರೀದೇವಿ ಬಿಟ್ಟು ಹೋಗಿದ್ದಾಳೆ. ಈ ಸಮಯದಲ್ಲಿ ನನ್ನ ಮನವಿ ಒಂದೇ. ನಮ್ಮ ವೈಯಕ್ತಿಕ ಬದುಕನ್ನು ಗೌರವಿಸಿ. ಶ್ರೀದೇವಿ ಬಗ್ಗೆ ಮಾತನಾಡಬೇಕು ಎಂದೆನೆಸಿದರೆ ಆಕೆ ಎಲ್ಲರ ಮನಗೆದ್ದ ವಿಚಾರದ ಬಗ್ಗೆ ಮಾತನಾಡಿ. ಆಕೆಗೆ ಆಕೆ ಮಾತ್ರ ಸರಿಸಾಟಿ. ಅವಳನ್ನು ಪ್ರೀತಿಸಿ, ಗೌರವಿಸಿ. ಯಾವ ವಿಚಾರದಲ್ಲೂ ಆಕೆಯನ್ನು ತೆರೆಮರೆಗೆ ಸರಿಸಲು ಆಗುವುದಿಲ್ಲ. ಬೆಳ್ಳಿ ಪರದೆ ಮೇಲೆ ಶ್ರೀದೇವಿ ಚಿರಸ್ಥಾಯಿ.
ಸದ್ಯ ಬದುಕಿನಲ್ಲಿ ನನ್ನ ಕಾಳಜಿ ಒಂದೇ.. ಶ್ರೀದೇವಿ ಇಲ್ಲದೆ ನನ್ನ ಮಕ್ಕಳು ಹಾಗೂ ಕುಟುಂಬವನ್ನ ಮುನ್ನಡೆಸುವುದು. ಆಕೆ ನನ್ನ ಉಸಿರು.. ಬದುಕಿನ ಶಕ್ತಿ.. ನನ್ನ ಪ್ರತಿಕ್ಷಣದ ನಗುವಿನ ಕಾರಣ.
ನನ್ನ ಪ್ರೀತಿಯೇ.. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ.. ನಮ್ಮ ಜೀವನ ಈ ಹಿಂದಿನಂತೆ ಇರಲ್ಲ..’ ಎಂದು ಬೋನಿ ಕಪೂರ್ ಭಾವುಕರಾಗಿ ಪತ್ರ ಬರೆದು ಟ್ವೀಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT