ಕೇಂದ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಷಿ 
ಬಾಲಿವುಡ್

ಪದ್ಮಾವತ್ ವಿವಾದ: ಕರ್ಣಿ ಸೇನಾ ಒತ್ತಡಕ್ಕೆ ಮಣಿದ ಸೆನ್ಸಾರ್ ಬೋರ್ಡ್ ಮುಖ್ಯಸ್ಥ

ಜ್ಹೀ ಜೈಪುರ ಸಾಹಿತ್ಯ ಉತ್ಸವದಲ್ಲಿ ನಾಳೆ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ಅಧ್ಯಕ್ಷ ...

ಜೈಪುರ: ಜೈಪುರ ಸಾಹಿತ್ಯ ಉತ್ಸವದಲ್ಲಿ ನಾಳೆ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಶಿ ಅವರು ಭಾಗವಹಿಸುತ್ತಿಲ್ಲ. ಅವರು ಸಾಹಿತ್ಯ ಉತ್ಸವದಲ್ಲಿ ನಾಳೆ ನಡೆಯಲಿರುವ ಚರ್ಚೆಯೊಂದರಲ್ಲಿ ಭಾಗವಹಿಸಬೇಕಾಗಿತ್ತು. ಸೆನ್ಸಾರ್ ಮಂಡಳಿ ಪದ್ಮಾವತ್ ಚಿತ್ರ ಬಿಡುಗಡೆಗೆ ಅನುಮತಿ ನೀಡಿರುವುದಕ್ಕೆ ರಜಪೂತ ಕರ್ಣಿ ಸೇನಾದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆದರಿಕೆಗಳು ಬರುತ್ತಿರುವುದರಿಂದ ಪ್ರಸೂನ್ ಜೋಷಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಈ ವರ್ಷ ಜೈಪುರ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುತ್ತಿಲ್ಲ. ಸಾಹಿತ್ಯ ಮತ್ತು ಕಾವ್ಯಪ್ರೇಮಿಗಳ ಜೊತೆ ಈ ಅದ್ಭುತ ಕ್ಷಣವನ್ನು ಕಳೆಯುವುದನ್ನು ತಪ್ಪಿಸಿಕೊಳ್ಳುತ್ತಿದ್ದೇನೆ ಎನ್ನುವ ಬೇಸರವುಂಟಾಗುತ್ತಿದೆ. ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗಬಾರದು ಎಂದು ಮತ್ತು ಕಾರ್ಯಕ್ರಮ ಆಯೋಜಕರಿಗೆ ಮತ್ತು ಭಾಗವಹಿಸುತ್ತಿರುವವರಿಗೆ ಯಾವುದೇ ಸಮಸ್ಯೆಯುಂಟಾಗಬಾರದು. ಸಾಹಿತ್ಯ ಪ್ರೇಮಿಗಳು ತಮ್ಮ ಬರವಣಿಗೆ ಮತ್ತು ಸ್ವಂತಿಗೆ ಬಗ್ಗೆ ಗಮನಹರಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಸೂನ್ ಜೋಷಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೈನ್ ಔರ್ ವೊಹ್: ಕನ್ವರ್ಸೇಷನ್ ವಿತ್ ಮೈಸೆಲ್ಫ್' ಎಂಬ ಚರ್ಚಾಕ್ರಮವೊಂದರಲ್ಲಿ ಜೋಷಿಯವರು ಭಾಗವಹಿಸಬೇಕಾಗಿತ್ತು.
ಜೈಪುರ ಸಾಹಿತ್ಯ ಉತ್ಸವದಲ್ಲಿ ಜೋಷಿಯವರನ್ನು ಭಾಗವಹಿಸಲು ಬಿಡುವುದಿಲ್ಲ ಎಂದು ಶ್ರೀ ರಜಪೂತ್ ಕರ್ನಿ ಸೇನಾ ಬೆದರಿಕೆಯೊಡ್ಡಿತ್ತು.
ಪದ್ಮಾವತ್ ಚಿತ್ರ ಬಿಡುಗಡೆಗೆ ಸಂಬಂಧಪಟ್ಟಂತೆ ನಾನು ನನ್ನ ಕೆಲಸ ಮಾಡಿದ್ದೇನೆ. ಈ ವಿಷಯವನ್ನು ಅತ್ಯಂತ ಸೂಕ್ಷ್ಮವಾಗಿ ಮತ್ತು ಸಮತೋಲನವಾಗಿ ತೆಗೆದುಕೊಂಡಿದ್ದೇನೆ. ಸಮಾಜದ ಬಗ್ಗೆ ಕಾಳಜಿಯಿಟ್ಟುಕೊಂಡು ಸಿನಿಮಾದವರ ಕ್ಯಾನ್ವಾಸ್ ನೋಡಿಕೊಂಡು ನಾವು ಚಿತ್ರಕ್ಕೆ ಪ್ರಮಾಣಪತ್ರ ನೀಡಿ ಬಿಡುಗಡೆಗೆ ಒಪ್ಪಿಗೆ ನೀಡಿದ್ದೇವೆ. ಪ್ರತಿಯೊಬ್ಬರಲ್ಲಿಯೂ ಪರಸ್ಪರ ನಂಬಿಕೆಯನ್ನು ಉಳಿಸಿಕೊಳ್ಳುವುದು ಮುಖ್ಯವಾಗಿರುತ್ತದೆ ಎಂದು ಪ್ರಸೂನ್ ಜೋಷಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT