ಆಲಿಯಾ ಭಟ್. 
ಬಾಲಿವುಡ್

ಸೌರ ಶಕ್ತಿಯಿಂದ ಮಂಡ್ಯದ 40 ಮನೆಗಳನ್ನು ಬೆಳಗಿದ ಆಲಿಯಾ ಭಟ್

ಸ್ಯಾಂಡಲ್ ವುಡ್, ಬಾಲಿವುಡ್ ಕೆಲವು ನಟ ನಟಿಯರು ಬಡ ಜನರಿಗೆ ತಮ್ಮ ಕೈ;ಲಾದಷ್ಟು ಸಹಾಯ ನೀಡುವ ಮೂಲಕ ಬೇರೆಯವರಿಗೆ ಮಾದರಿಯಾಗುತ್ತಾರೆ.

ಮುಂಬೈ: ಸ್ಯಾಂಡಲ್ ವುಡ್, ಬಾಲಿವುಡ್ ಕೆಲವು ನಟ ನಟಿಯರು ಬಡ ಜನರಿಗೆ ತಮ್ಮ ಕೈ;ಲಾದಷ್ಟು ಸಹಾಯ ನೀಡುವ ಮೂಲಕ ಬೇರೆಯವರಿಗೆ ಮಾದರಿಯಾಗುತ್ತಾರೆ. ಇದೇ ಸಾಲಿನಲ್ಲಿ ಸೇರ್ಪಡೆಯಾಗಿರುವ ಹೊಸ ಹೆಸರು ಆಲಿಯಾ ಭಟ್.
ಬಾಲಿವುಡ್ ನಟಿ ಆಲಿಯಾ ಭಟ್ ಕರ್ನಾಟಕದ ಮಂಡ್ಯ ಜಿಲ್ಲೆಯ ಗ್ರಾಮವೊಂದಕ್ಕೆ ವಿದ್ಯುತ್ ಒದಗಿಸುವ ಮೂಲಕ ಗಮನ ಸೆಳೆದಿದ್ದಾರೆ.
ಮಂಡ್ಯದ ಕಿಕ್ಕೇರಿ ಗ್ರಾಮದ 40 ಕುಟುಂಬಗಳಿಗೆ ಆಲಿಯಾ ಭಟ್ ಸೋಲಾರ್ ದೀಪಗಳನ್ನು ಒದಗಿಸುವ ಕೆಲಸ ಮಾಡಿದ್ದಾರೆ. ಈ ವರ್ಷ ಪ್ರಾರಂಭಗೊಂಡ `ಮಿ ವಾರ್ಡ್ ರೋಬ್ ಈಸ್ ಸು ವಾರ್ಡ್ ರೋಬ್’ ಸ್ಟೈಲ್ಕ್ರಾಕರ್ ನೈಟ್ ಮಾರ್ಕೆಟ್ ಅಭಿಯಾನದಲ್ಲಿ ಆಲಿಯಾ ಭಟ್ ತಮ್ಮ ವಿಶೇಷ ಉಡುಪೊಂದನ್ನು ಮಾರಾಟಕ್ಕೆ ಇಟ್ಟಿದ್ದರು. ಈ ಉಡುಪಿನ ಮಾರಾಟದಿಂದ ಬಂದ ಹಣವನ್ನು ಅವರು ಬೆಂಗಳೂರು ಮೂಲದ ಎಆರ್ ಓಎಚ್‍ಎ ಸಂಸ್ಥೆಯೊಂದು ಆಯೋಜಿಸಿದ್ದ `ಲಿಟರ್ ದ ಲೈಟರ್’ ಕಾರ್ಯಕ್ರಮದಲ್ಲಿ ತೊಡಗಿಸಿದ್ದಾರೆ. 
ಎಆರ್ ಓಎಚ್‍ಎ ಸಂಸ್ಥೆ  ಪ್ಲಾಸ್ಟಿಕ್ ಬಾಟಲ್‍ಗಳನ್ನ ಮರುಬಳಕೆ ಮಾಡಿ ವಿದ್ಯುತ್ ಇಲ್ಲದ ಹಳ್ಳಿಗಳಿಗೆ ಸೋಲಾರ್ ದೀಪವನ್ನು ಒದಗಿಸುವ ಕಾರ್ಯ ಮಾಡುತ್ತಿದ್ದು ಸಂಸ್ಥೆಯು ತಾನು ನಡೆಸುವ `ಲಿಟರ್ ದ ಲೈಟರ್’ ಕಾರ್ಯಕ್ರಮಕ್ಕೆ ಚಾರಿಟಿಯಾಗುವಂತೆ ಆಲಿಯಾ ಅವರಿಗೆ ಆಹ್ವಾನ ನಿಡಿದೆ. ಇದಕ್ಕೆ ಸಮ್ಮತಿಸಿದ ನಟಿ ಮಂಡ್ಯದ 40 ಕುಟುಂಬಗಳಿಗೆ ಈ ಸಂಸ್ಥೆ ಸೋಲಾರ್ ದೀಪಗಳನ್ನು ಒದಗಿಸಿದ್ದಾರೆ.
"ಭಾರತದಲ್ಲಿ ಇಂದಿಗೂ ಅನೇಕ ಕುಟುಂಬಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಇಂತಹಾ ಜನರ ಮನೆ ಬೆಳಗಲು ಇದು ಸಮರ್ಪಯ ಯೋಜನೆಯಾಗಿದೆ. ಇದು ಪರಿಸರ ಸ್ನೇಹಿ ಯೋಜನೆ, ಕಿಕ್ಕೇರಿ ಗ್ರಾಮದ 200 ಜನರಿಗೆ ಈ ಯೋಜನೆ ಫಲ ಲಭಿಸಲ್ದೆ" ಆಲಿಯಾ ಭಟ್ ಹೇಳಿದ್ದಾರೆ.
ಮೇಘನಾ ಗುಲ್ಜಾರ್ ಅವರ `ರಾಜಿ’, ರಣವೀರ್ ಸಿಂಗ್ ಅಭಿನಯದ `ಜೊಯಾ ಅಖ್ತರ್ ಗಲ್ಲಿ ಬಾಯ್’ ಚಿತ್ರಗಳಲ್ಲಿ ನಟಿಸುತ್ತಿಉವ ನಟಿ ಆಲಿಯಾ ಅಯನ್ ಮುಖರ್ಜಿಯವರ `ಬ್ರಹ್ಮಸ್ತರ’ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT