ಅಕ್ಷಯ್ ಕುಮಾರ್ 
ಬಾಲಿವುಡ್

ಸ್ಯಾನಿಟರಿ ನ್ಯಾಪ್ಕಿನ್ ಗೆ ಜಿಎಸ್ ಟಿ ವಿನಾಯಿತಿ ನೀಡಿದ್ದಕ್ಕೆ ಧನ್ಯವಾದ: ಅಕ್ಷಯ್ ಕುಮಾರ್

ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಸಾಮಾನ್ಯ ಸೇವಾ ತೆರಿಗೆ (ಜಿಎಸ್ ಟಿ) ಯಿಂದ ವಿನಾಯಿತಿ ನೀಡಿರುವುದಕ್ಕೆ ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಿವುಡ್ ನಟ ಅಕ್ಷಯ್ ಕುಮಾರ್ ...

ಮುಂಬಯಿ; ಸ್ಯಾನಿಟರಿ ಪ್ಯಾಡ್ ಗಳ ಮೇಲೆ ಸಾಮಾನ್ಯ ಸೇವಾ ತೆರಿಗೆ (ಜಿಎಸ್ ಟಿ) ಯಿಂದ ವಿನಾಯಿತಿ ನೀಡಿರುವುದಕ್ಕೆ  ರಾಷ್ಟ್ರ ಪ್ರಶಸ್ತಿ ವಿಜೇತ ಬಾಲಿವುಡ್ ನಟ ಅಕ್ಷಯ್ ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅಕ್ಷಯ್ ಕುಮಾರ್, ಕೆಲವು ದಿನಗಳ ಹಿಂದೆ ಕಣ್ಮೀರು ತರಿಸಿದ್ದ ವಿಷಯ ಮತ್ತೆ ಈಗ ಖುಷಿಗೆ  ಕಾರಣವಾಗಿದೆ, ಮುಟ್ಟಿನ ದಿನಗಳ ಸ್ವಚ್ಛತೆಯಲ್ಲಿ ಬಹುಮುಖ್ಯ ಪಾತ್ರ ವಹಿಸುವ ಸ್ಯಾನಿಟರಿ ಪ್ಯಾಡ್ ಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಸಂತೋಷದಾಯಕ ವಿಚಾರ ಎಂದು ಟ್ವೀಟ್ ಮಾಡಿದ್ದಾರೆ, ದೇಶದ ಕೋಟ್ಯಾಂಟತರ ಮಹಿಳೆಯರು ಸದ್ದಿಲ್ಲದೆ ತಮ್ಮ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಸ್ಯಾನಿಟರಿ ಪ್ಯಾಡ್ ಮೇಲೆ ಶೇ.12 ರಷ್ಟು ಜಿಎಸ್ ಟಿ ವಿಧಿಸಲಾಗದಿತ್ತು. ಅದನ್ನು ಸರ್ಕಾರ ಪೂರ್ಣ ಪ್ರಮಾಣದಲ್ಲಿ ಇಳಿಸಿದೆ.
ಪದ್ಮಶ್ರೀ ಪುರಸ್ಕೃತ ಅರುಣಾಚಲಂ ಮುರುಗನಾಥಂ ಅವರು ಗ್ರಾಮೀಣ ಭಾರತದಲ್ಲಿ ಹುಡುಗಿಯರ ಮುಟ್ಟಿನ ದಿನಗಳಲ್ಲಿ ಅಗತ್ಯವಿರುವ ಶುಚಿತ್ವದ ಕುರಿತಾಗಿ ಜಾಗೃತಿ ಮೂಡಿಸುವಲ್ಲಿ ಮತ್ತು ಪಾಕೆಟ್‌ ಫ್ರೆಂಡ್‌ಲೀ ಸ್ಯಾನಿಟರಿ ಪ್ಯಾಡ್‌ಗಳನ್ನು ಉತ್ಪಾದಿಸಿಸುವಲ್ಲಿ ಅದ್ಭುತ ಕ್ರಾಂತಿಕಾರಕ ಕೆಲಸ ಮಾಡಿ ಪ್ರಸಿದ್ಧರಾಗಿರುವರು. ಅವರ ಸಾಮಾಜಿಕ ಕಳಕಳಿಯ ಸಾಹಸಗಾಥೆಯನ್ನು "ಪ್ಯಾಡ್‌-ಮ್ಯಾನ್‌' ಚಿತ್ರದಲ್ಲಿ ಅಕ್ಷಯ್ ಕುಮಾರ್ ಅಭಿನಯಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT