ಸಂಗ್ರಹ ಚಿತ್ರ 
ಬಾಲಿವುಡ್

ಧಡಕ್ ಟ್ರೇಲರ್ ಬಿಡುಗಡೆ: ಶ್ರೀದೇವಿ ಪುತ್ರಿ ಜಾಹ್ನವಿಗೆ ಸಹೋದರ ಅರ್ಜುನ್ ಹೃದಯಸ್ಪರ್ಶಿ ಟ್ವೀಟ್!

ಬಾಲಿವುಡ್ ನ ದಿವಂಗತ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಹಿನ್ನಲೆಯಲ್ಲಿ ಸಹೋದರ ಅರ್ಜುನ್ ಕಪೂರ್ ಹೃದಯಸ್ಪರ್ಶಿ ಟ್ವೀಟ್ ಮಾಡಿದ್ದಾರೆ.

ಮುಂಬೈ: ಬಾಲಿವುಡ್ ನ ದಿವಂಗತ ನಟಿ ಶ್ರೀದೇವಿ ಅವರ ಪುತ್ರಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಹಿನ್ನಲೆಯಲ್ಲಿ ಸಹೋದರ ಅರ್ಜುನ್ ಕಪೂರ್ ಹೃದಯಸ್ಪರ್ಶಿ ಟ್ವೀಟ್ ಮಾಡಿದ್ದಾರೆ.

ಇಂದು ಮುಂಬೈನಲ್ಲಿ ಜಾಹ್ನವಿ ಅಭಿನಯದ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮವಿದ್ದು, ಈ ಹಿನ್ನಲೆಯಲ್ಲಿ ನಟ ಅರ್ಜುನ್ ಕಪೂರ್ ಟ್ವೀಟ್ ಮಾಡಿದ್ದಾರೆ. ತಮ್ಮ ಸಹೋದರಿ ಜಾಹ್ನವಿ ಕುರಿತು ಸರಣಿ ಟ್ವೀಟ್ ಮಾಡಿರುವ ಅರ್ಜುನ್ ಕಪೂರ್, ಸಿನಿಮಾರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ತಂಗಿಗೆ ಸ್ವಾಗತ ಕೋರಿದ್ದಾರೆ. ಅಂತೆಯೇ ಸಿನಿಮಾ ರಂಗದಲ್ಲಿ ಶ್ರದ್ಧೆ, ಪ್ರಾಮಾಣಿಕತೆ ಮತ್ತು ಶ್ರಮಪಟ್ಟು ಕೆಲಸ ಮಾಡು ಎಂದು ಕಿವಿ ಮಾತು ಹೇಳಿದ್ದಾರೆ. 

'ನಾಳೆಯಿಂದ ನೀನು ಅಭಿಮಾನಿಗಳೊಂದಿಗೆ ಇರುವೆ.. ನಿನ್ನ ಧಡಕ್ ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿದ್ದು, ಮೊದಲಿಗೆ ನಾನು ಕ್ಷಮೆ ಕೇಳುತ್ತೇನೆ. ನಾಳೆ ನಾನು ಮುಂಬೈನಲ್ಲಿ ಇರುವುದಿಲ್ಲ. ಆದರೆ ಚಿಂತೆ ಬೇಡ.. ಸಿನಿಮಾ ರಂಗಕ್ಕೆ ನಿನಗ ಸ್ವಾಗತ.. ನೀನು ಶ್ರದ್ಧೆ, ಪ್ರಮಾಣಿಕತೆ ಮತ್ತು ಶ್ರಮದಿಂದ ಕೆಲಸ ಮಾಡಿದರೆ ಈ ರಂಗ ನಿನಗೆ ಅದ್ಬುತವಾಗಿ ಕಾಣುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡು, ಎದುರಾಳಿಗಳನ್ನು ಗೌರವಿಸು, ಕಲಿಕೆಗಾಗಿ ನಿನ್ನನ್ನು ನೀನು ಸಂಪೂರ್ಣ ತೊಡಗಿಸಿಕೊ, ನಿನ್ನದೇ ಹೊಸ ಶೈಲಿ ಮತ್ತು ಮಾರ್ಗದಲ್ಲಿ ಚಲಿಸು. ಇದು ಸುಲಭವಲ್ಲ ಎಂದು ತಿಳಿದಿದೆ. ಆದರೆ ನೀನು ಯಾವುದೇ ಸವಾಲಿಗೆ ಸಿದ್ಧ ಎಂದು ನನಗೆ ತಿಳಿದಿದೆ ಎಂದು ಅರ್ಜುನ್ ಕಪೂರ್ ಟ್ವೀಟ್ ಮಾಡಿದ್ದಾರೆ.

ಅಂತೆಯೇ ಧಡಕ್ ಚಿತ್ರ ತಂಡಕ್ಕೆ, ಚಿತ್ರ ನಿರ್ದೇಶಕರಿಗೆ, ನಿರ್ಮಾಪಕ ಕರಣ್ ಜೋಹಾರ್ ಅವರಿಗೆ ಅರ್ಜುನ್ ಕಪೂರ್ ಶುಭ ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT