ರಜತ್ ಕಪೂರ್ 
ಬಾಲಿವುಡ್

#MeToo: ಪತ್ರಕರ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕ್ಷಮೆ ಕೇಳಿದ ರಜತ್ ಕಪೂರ್

ಬಾಲಿವುಡ್ ನಟಿ ತನುಶ್ರೀ ದತ್ತ ಲೈಂಗಿಕ ಕಿರುಕುಳ ಆರೋಪದ ನಂತರ ದೇಶದಲ್ಲಿ #ಮಿ ಟೂ ಅಭಿಯಾನ...

ಮುಂಬೈ: ಬಾಲಿವುಡ್ ನಟಿ ತನುಶ್ರೀ ದತ್ತ ಲೈಂಗಿಕ ಕಿರುಕುಳ ಆರೋಪದ ನಂತರ ದೇಶದಲ್ಲಿ #ಮಿ ಟೂ ಅಭಿಯಾನ ಚುರುಕು ಪಡೆಯುತ್ತಿದ್ದು, ಹಲವು ತಮ್ಮ ತಪ್ಪನ್ನು ಒಪ್ಪಿಕೊಂಡು ಬಹಿರಂಗವಾಗಿ ಕ್ಷಮೆ ಕೇಳುತ್ತಿದ್ದಾರೆ.
ನಿನ್ನೆಯಷ್ಟೇ ಖ್ಯಾತ ಕಾದಂಬರಿಕಾರ ಚೇತನ್ ಭಗತ್ ಅವರು ಮಹಿಳೆಯೊಬ್ಬರಿಗೆ ಮೋಹಿಸುವೆ ಎಂದು ವಾಟ್ಸ್ ಆಪ್ ಸಂದೇಶ ಕಳುಹಿಸಿದ್ದಕ್ಕೆ ಕ್ಷಮೆಯಾಚಿಸಿದ್ದರು. ಇದರ ಬೆನ್ನಲ್ಲೇ ಬಾಲಿವುಡ್ ನಿರ್ದೇಶಕ ಹಾಗೂ ನಟ ರಜತ್ ಕಪೂರ್ ಅವರು, ಸಂದರ್ಶನದ ವೇಳೆ ಮಹಿಳಾ ಪತ್ರಕರ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಮತ್ತು ಸುಳ್ಳು ಹೇಳಿದ್ದಕ್ಕೆ ಕ್ಷಮೆ ಯಾಚಿಸಿದ್ದಾರೆ.
ನಾನು ಒಳ್ಳೆಯ ಮನುಷ್ಯನಾಗಲು ಯತ್ನಿಸುತ್ತಿದ್ದೇನೆ. ಪತ್ರಕರ್ತೆಯೊಂದಿಗಿನ ನನ್ನ ವೃತ್ತಿಪರವಲ್ಲದ ನಡುವಳಿಕೆಗಾಗಿ ಮನಸ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ ಎಂದು ರಜತ್ ಕಪೂರ್ ಅವರು ಟ್ಲೀಟ್ ಮಾಡಿದ್ದಾರೆ.
2007ರಲ್ಲಿ ನಾನು ರಜತ್ ಕಪೂರ್ ಅವರನ್ನು ಸಂದರ್ಶನ ಮಾಡಲು ಹೋದಾಗ ಅವರು ನನ್ನೊಂದಿಗೆ ನಡೆದುಕೊಂಡ ರೀತಿಯಿಂದಾಗಿ ನಾನು ತುಂಬಾ ಮುಜುಗರಕ್ಕಿಡಾಗಿದ್ದೇ ಎಂದು ಮಹಿಳಾ ಪತ್ರಕರ್ತೆ ಮಿ ಟೂ ಅಭಿಯಾನದಲ್ಲಿ ಹೇಳಿಕೊಂಡಿದ್ದರು.
ಬಳಿಕ ಟ್ವೀಟ್ ಮಾಡಿದ ರಜತ್ ಕಪೂರ್ ಅವರು, ನಾನು ಒಬ್ಬ ಯೋಗ್ಯ ಮನುಷ್ಯನಾಗಲು ಪ್ರಯತ್ನಿಸುತ್ತಿದ್ದೇನೆ. ಆದಾಗ್ಯೂ ನಾನು ಎಲ್ಲಾದರೂ ಎಡವಿದ್ದರೆ ಮತ್ತು ನನ್ನ ಕ್ರಿಯೆಗಳಿಂದ ಅಥವಾ ಪದಗಳಿಂದ ಯಾರಿಗಾದರೂ ನೋವು ಉಂಟು ಮಾಡಿದ್ದರೆ ಅಥವಾ ಆಘಾತವಾಗಿದ್ದರೆ "ನಾನು ನನ್ನ ಹೃದಯದಿಂದ  ವಿಷಾದಿಸುತ್ತಿದ್ದೇನೆ - ಮತ್ತು ನಾನು ಇನ್ನೊಬ್ಬ ಮನುಷ್ಯನಿಗೆ ನೋವು ಉಂಟು ಮಾಡಿದೆ ಎಂಬ ದುಃಖ ನನ್ನನ್ನು ಕಾಡುತ್ತದೆ ಎಂದು ಬಾಲಿವುಡ್ ನಿರ್ದೇಶಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT