ದೀಪಿಕಾ ಪಡುಕೋಣೆ 
ಬಾಲಿವುಡ್

ಮದುವೆ ಬಗ್ಗೆ ಕೇಳಿದ ಪತ್ರಕರ್ತನಿಗೆ ದೀಪಿಕಾ ಪಡುಕೋಣೆ ಕೊಟ್ಟ ತಪರಾಕಿ ಏನು?

ಬಾಲಿವುಡ್ ನ ಹಾಟ್ ಫೆವರಿಟ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆ ಆಗುವುದು ಯಾವಾಗ ಎನ್ನುವ ಕುರಿತಂತೆ ಇತ್ತೀಚಿನ ದಿನಗಳಲ್ಲಿ ವದಂತಿಗಳು ಹರಿದಾಡುತ್ತಿರುವುದು ಸಾಮಾನ್ಯವಾಗಿದೆ.

ಮುಂಬೈ: ಬಾಲಿವುಡ್ ನ ಹಾಟ್ ಫೆವರಿಟ್ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮದುವೆ ಆಗುವುದು ಯಾವಾಗ ಎನ್ನುವ ಕುರಿತಂತೆ ಇತ್ತೀಚಿನ ದಿನಗಳಲ್ಲಿ ವದಂತಿಗಳು ಹರಿದಾಡುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮಹಿಳೆಯ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದ ನಟಿಯನ್ನು ಪತ್ರಕರ್ತನೊಬ್ಬ ಆಕೆಯ ಮದುವೆ ಬಗೆಗೆ ಕೇಳಿದಾಗ ದೀಪಿಕಾ ಇದ್ದಕ್ಕಿದ್ದಂತೆ ಆತನ ಮೇಲೆ ಹರಿಹಾಯ್ದಿದ್ದಾರೆ.
"ನನ್ನ ಮದುವೆ ಕುರಿತು ನೀವು ಕೇಳುವ ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ, ಅದು ನನ್ನ ವೈಯುಕ್ತಿಕ ವಿಚಾರ. ಇಂತಹಾ ಕಾರ್ಯಕ್ರಮದಲ್ಲಿ ಏನು ಪ್ರಶ್ನೆ ಕೇಳಬೇಕಿತ್ತೋ ಅದನ್ನು ಕೇಳಿ" ದೀಪಿಕಾ ಗಟ್ಟಿಯಾಗಿ ಉತ್ತರಿಸಿದ್ದಾರೆ. 
ವರದಿಗಳ ಪ್ರಕಾರ, ಈ ವರ್ಷ ನವೆಂಬರ್ 10 ರಂದು ಇಟಲಿಯ ಲೇಕ್ ಕೊಮೊದಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ನಡೆಯಲಿದೆ ಎನ್ನಲಾಗಿದ್ದು ಕೇವಲ 30 ಗಣ್ಯ ಅತಿಥಿಗಳಿಗೆ ಆಹ್ವಾನ ನೀಡಲಾಗಿದೆ.
ವಿಶೇಷ ಕಾರ್ಯಕ್ರಮದಲ್ಲಿ ಬಾಗವಹಿಸಿದ್ದ ದೀಪಿಕಾ ಮಹಿಳೆಯರ ಖಿನ್ನತೆ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ. ಮಹಿಳೆಯರಿಗೆ ಸಾಕಷ್ಟು ಖಿನ್ನತೆ ಕಾಡುತ್ತದೆ, ಅವರು ಎಂದೂ ಇನ್ನೊಬ್ಬರ ಕುರಿತೇ ಹೆಚ್ಚಾಗಿ ಯೋಚಿಸುತ್ತಾರೆ. ಶಪಿಂಗ್, ಬ್ಯೂಟಿ ಪಾರ್ಲರ್ ಹೀಗೆ ಎಲ್ಲೇ ಹೋದರೆ ಸಹ ಮನೆ, ಮಕ್ಕಳು, ಪತಿ ಹೀಗೆ ಇನ್ನೊಬ್ಬರ ವಿಚಾರವನ್ನೇ ಯೋಚಿಸುತ್ತಾರೆ. ಅವರಿಗೂ ಸ್ವಲ್ಪ ಸಮಯಾವಕಾಶ ಬೇಕು, ಅವರು ಅವರ ಬಗೆಗೆ ಯೋಚಿಸಲು ಕೆಲ ಕ್ಷಣಗಳು ಅಗತ್ಯವಿದೆ ಎಂದು ನಟಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT