ರಣದೀರ್ ಕಪೂರ್ 
ಬಾಲಿವುಡ್

ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗುತ್ತೇನೋ? ಗದ್ಗದಿತರಾದ ನಟ ರಣದೀರ್ ಕಪೂರ್!

ಬಾಲಿವುಡ್ ನ ಹಿರಿಯ ನಟ ರಣದೀರ್ ಕಪೂರ್ ಗಣೇಶ ಚತುರ್ಥಿಯನ್ನು ಆರ್ ಕೆ ಸ್ಟುಡಿಯೋದಲ್ಲಿ ಆಚರಿಸಿದ್ದು ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗಲಿದೆ ಎಂದು ಅವರು ಗದ್ಗದಿತರಾಗಿದ್ದಾರೆ...

ಬಾಲಿವುಡ್ ನ ಹಿರಿಯ ನಟ ರಣದೀರ್ ಕಪೂರ್ ಗಣೇಶ ಚತುರ್ಥಿಯನ್ನು ಆರ್ ಕೆ ಸ್ಟುಡಿಯೋದಲ್ಲಿ ಆಚರಿಸಿದ್ದು ಇದು ನನ್ನ ಕೊನೆಯ ಗಣೇಶ ಚತುರ್ಥಿ ಆಚರಣೆ ಆಗಲಿದೆ ಎಂದು ಅವರು ಗದ್ಗದಿತರಾಗಿದ್ದಾರೆ. 
ಬಾಲಿವುಡ್ ದಿಗ್ಗಜ ರಾಜ್ ಕಪೂರ್ ಅವರು ನಿರ್ಮಿಸಿದ್ದ ಆರ್ ಕೆ ಸ್ಟುಡಿಯೋ ಬಾಲಿವುಡ್ ನ ಪ್ರಖ್ಯಾತ ಸ್ಟುಡಿಯೋಗಳಲ್ಲಿ ಒಂದಾಗಿದ್ದು ಕಳೆದ 70 ವರ್ಷಗಳ ಇತಿಹಾಸ ಹೊಂದಿದೆ. ಇಂತಹ ಆರ್ ಕೆ ಸ್ಟುಡಿಯೋವನ್ನು ಮಾರಲು ತೀರ್ಮಾನಿಸಿದ್ದು ನಮ್ಮ ಕುಟುಂಬ ತೆಗೆದುಕೊಂಡ ಕಠಿಣ ನಿರ್ಣಯಗಳಲ್ಲಿ ಒಂದಾಗಿದೆ ಎಂದು ರಣದೀರ್ ಕಪೂರ್ ಹೇಳಿದ್ದಾರೆ. 
ಕಪೂರ್ ಕುಟುಂಬ ಆರ್ ಕೆ ಸ್ಟುಡಿಯೋದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರು. ಇನ್ನು ಗಣೇಶನಿಗೆ ಆರತಿ ಮಾಡುವಾಗ ರಣದೀರ್ ಕಪೂರ್ ಗದ್ಗದಿತರಾದರು. ಆರ್ ಕೆ ಸ್ಟುಡಿಯೋದಲ್ಲಿ ಇದು ನಮ್ಮ ಕೊನೆಯ ಗಣೇಶ ಚತುರ್ಥಿ ಆಗಲಿದೆ ಎಂದು ಹೇಳಿದ್ದಾರೆ. 
ಕಳೆದ ವರ್ಷ ಆರ್ ಕೆ ಸ್ಟುಡಿಯೋದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆ ನಂತರ ಕಪೂರ್ ಕುಟುಂಬದ ಸದಸ್ಯರಾದ ರಣದೀರ್ ಕಪೂರ್, ರಿಶಿ ಕಪೂರ್, ರಾಜೀವ್ ಕಪೂರ್ ಸ್ಟುಡಿಯೋವನ್ನು ಮಾರುವ ತೀರ್ಮಾನ ಕೈಗೊಂಡಿದ್ದರು. 
ಇನ್ನು ಸ್ಟುಡಿಯೋವನ್ನು ಮಾರುತ್ತಿರುವ ಬಗ್ಗೆ ಮಾತನಾಡಿದ ರಣದೀರ್ ಕಪೂರ್ ಕಳೆದ ವರ್ಷ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಆಸ್ತಿ ನಷ್ಟವಾಗಿತ್ತು. ಇನ್ನು ಸ್ಟುಡಿಯೋವನ್ನು ಪುನರ್ ನಿರ್ಮಿಸುವ ಕೆಲಸ ನಮ್ಮ ಕೈಯಲ್ಲಿ ಆಗುವುದಿಲ್ಲ ಹೀಗಾಗಿ ನಾವು ಸ್ಟುಡಿಯೋವನ್ನು ಮಾರುವ ತೀರ್ಮಾನಕ್ಕೆ ಬರಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT