ಇರ್ಫಾನ್ ಖಾನ್ 
ಬಾಲಿವುಡ್

ಅಪರೂಪದ ಕ್ಯಾನ್ಸರ್ ಚಿಕಿತ್ಸೆ ಪಡೆದು ವರ್ಷದ ಬಳಿಕ ಮುಂಬೈಗೆ ಆಗಮಿಸಿದ ಇರ್ಫಾನ್ ಖಾನ್

ಅನಾರೋಗ್ಯದ ಕಾರಣ ಸುಮಾರು ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ನಟ ಇರ್ಫಾನ್ ಖಾನ್ ಈಗ ತಾನು ಚೇತರಿಸಿಕೊಂಡಿರುವುದಾಗಿ ಹೇಳಿದ್ದಾರೆ. ನ್ಯೂರೋಎಂಡೋಕ್ರೈನ್ ಗೆಡ್ಡೆಯಾಗಿದ್ದು ಇದಕ್ಕಾಗಿ....

ಮುಂಬೈ: ಅನಾರೋಗ್ಯದ ಕಾರಣ ಸುಮಾರು ಒಂದು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ನಟ ಇರ್ಫಾನ್ ಖಾನ್ ಈಗ ತಾನು ಚೇತರಿಸಿಕೊಂಡಿರುವುದಾಗಿ ಹೇಳಿದ್ದಾರೆ. ನ್ಯೂರೋಎಂಡೋಕ್ರೈನ್ ಗೆಡ್ಡೆಯಾಗಿದ್ದು ಇದಕ್ಕಾಗಿ ಚಿಕಿತ್ಸೆ ಪಡೆದುಕೊಂಡಿದ್ದ ನಟ ತನ್ನ ಅನಾರೋಗ್ಯದ ದಿನಗಳಲ್ಲಿ ಬೆಂಬಲಕ್ಕೆ ನಿಂತ ಅಭಿಮಾನಿ ಬಳಗಕ್ಕೆ ಕೃತಜ್ಞತೆ ಹೇಳಿದ್ದಾರೆ.ಒಂದು ದಿನದ ಹಿಂದೆ ಮುಂಬಯಿ ವಿಮಾನ ನಿಲ್ದಾಣದಲ್ಲಿ ತಾವು ಭಾವಚಿತ್ರ ತೆಗೆಸಿಕೊಂಡಿರುವ ನಟ ತಾವು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದಾಗಿ ಟ್ವಿಟ್ಟರ್ ಮೂಲಕ ದೃಢಪಡಿಸಿದ್ದಾರೆ.
"ಗೆಲುವಿನ ಅನ್ವೇಷಣೆಯ ನಡುವೆ ನಮ್ಮ ಆರೋಗ್ಯ, ದೌರ್ಬಲ್ಯಗಳನ್ನೇಲ್ಲಾ ನಾವು ಮರೆತುಬಿಡುತ್ತೇವೆ ಎನಿಸುತ್ತಿದೆ, ನನ್ನ ಜೀವನದಲ್ಲಿ ಮ್ಮ ಅಪಾರ ಪ್ರೀತಿ ಮತ್ತು ಬೆಂಬಲವನ್ನು ನೀಡಿದ್ದಾಗಿ  ನಾನು ಕೃತಜ್ಞರಾಗಿರಲು ಬಯಸುತ್ತೇನೆ, ನನ್ನ ಚಿಕಿತ್ಸೆ ಪ್ರಕ್ರಿಯೆಯಲ್ಲಿ ನನ್ನನ್ನು ಬೆಂಬಲಿಸಿದ ನಿಮಗೆ ನನ್ನ ಹೃದಯಪೂರ್ವಕ ಧನ್ಯವಾದಗಳು." ನಟ ಹೇಳಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ  ನಟ ಮೊದಲ ಬಾರಿಗೆ ತನ್ನ ಆರೋಗ್ಯದ ಕುರಿತು ಮಾರ್ಚ್ 5, 2018 ರಂದು ಮಾತನಾಡಿ ತಾನು ಅಪರೂಪದ ರೋಗ" ದಿಂದ ಬಳಲುತ್ತಿರುವುದಾಗಿ ಬಹಿರಂಗಪಡಿಸಿದ್ದರು. ಆದರೆ ಆಗ ತಮಗೆ ಯಾವ ಖಾಯಿಲೆ ಇದೆ ಎನ್ನುವುದನ್ನು ಅವರು ಹೇಳಿರಲಿಲ್ಲ. ಆ ಮುಂದಿನ ದಿನಗಳಲ್ಲಿ ನ್ಯೂರೋಎಂಡೋಕ್ರೈನ್ ಗೆಡ್ಡೆ (ಅಪರೂಪದ ಕ್ಯಾನ್ಸರ್ ರೋಗ) ದಿಂದ ನಟ ಬಳಲುತ್ತಿದ್ದಾರೆ ಎನುವುದು ಖಾತರಿಯಾಗಿತ್ತು. 
ಕ್ಯಾನ್ಸರ್ ಚಿಕಿತ್ಸೆಗಾಗಿ ನಟ ವಿದೇಶಕ್ಕೆ ಸಹ ತೆರಳಿದ್ದರು. ದೀಪಾವಳಿ ನಂತರದಲ್ಲಿ ನಟ ಚಿಕಿತ್ಸೆ ಪಡೆದು ಸ್ವದೇಶಕ್ಕೆ ಹಿಂದಿರುಗುತ್ತಾರೆ ಎಂದು ಅವರ ವಕ್ತಾರರೊಬ್ಬರು ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT