ಅಭಿನಂದನ್ - ವಿವೇಕ್ ಒಬೆರಾಯ್ 
ಬಾಲಿವುಡ್

ಬಾಲಕೋಟ್ ಏರ್ ಸ್ಟ್ರೈಕ್ ಕುರಿತು ಬಾಲಿವುಡ್ ಸಿನಿಮಾ, ವಿವೇಕ್ ಒಬೆರಾಯ್ ನಾಯಕ

ಉರಿ ಚಿತ್ರದ ನಂತರ ಈಗ ಬಾಲಿವುಡ್ ನಲ್ಲಿ "ಬಾಲಾಕೋಟ್" ಎಂಬ ಹೆಸರಿನ ಚಿತ್ರ ನಿರ್ಮಾಣವಾಗುತ್ತಿದ್ದು, ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಮಿಂಚಿದ್ದ ನಟ ವಿವೇಕ್ ಒಬೆರಾಯ್ ಅವರು

ಬೆಂಗಳೂರು: ಉರಿ ಚಿತ್ರದ ನಂತರ ಈಗ ಬಾಲಿವುಡ್ ನಲ್ಲಿ "ಬಾಲಾಕೋಟ್" ಎಂಬ ಹೆಸರಿನ ಚಿತ್ರ ನಿರ್ಮಾಣವಾಗುತ್ತಿದ್ದು, ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಮಿಂಚಿದ್ದ ನಟ ವಿವೇಕ್ ಒಬೆರಾಯ್ ಅವರು ಈಗ ಭಾರತೀಯ ವಾಯುಪಡೆ ಅಧಿಕಾರಿಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಪಾಕಿಸ್ತಾನದ ಬಾಲಕೋಟ್‌ ನ ಉಗ್ರರ ತಾಣಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಕುರಿತು ಮತ್ತು ಅಭಿನಂದನ್ ವರ್ಧಮಾನ್ ಬಂಧನ ಮತ್ತು ಬಿಡುಗಡೆ ಕುರಿತು ಸಿನಿಮಾ ಮಾಡಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರ, ದೆಹಲಿ ಹಾಗೂ ಆಗ್ರಾದಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ.

ಹಿಂದಿ, ತಮಿಳು ಮತ್ತು ತೆಲಗು ಭಾಷೆಯಲ್ಲಿ ಚಿತ್ರ ನಿರ್ಮಾಣವಾಗಲಿದ್ದು, ವಿವೇಕ್ ಒಬೆರಾಯ್ ಚಿತ್ರದಲ್ಲಿ ನಟಿಸಲು ವಾಯುಪಡೆಯ ಅನುಮತಿ ಪಡೆದುಕೊಂಡಿದ್ದಾರೆ. ಮೂರು ಭಾಷೆಯಗಳ ಖ್ಯಾತ ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ.

ಈ ಚಿತ್ರ ಹಿಂದಿ, ತಮಿಳು ಮತ್ತು ತೆಲಗು ಮೂರು ಭಾಷೆಯಲ್ಲಿ ನಿರ್ಮಾಣವಾಗಲಿದ್ದು, ವಿವೇಕ್ ಒಬೆರಾಯ್ ಚಿತ್ರದಲ್ಲಿ ನಟಿಸಲು ವಾಯುಪಡೆಯ ಅನುಮತಿ ಪಡೆದುಕೊಂಡಿದ್ದಾರೆ.

ಮೂರು ಭಾಷೆಗಳ ಖ್ಯಾತ ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ. ಭಾರತೀಯನಾಗಿ ಇಂತಹ ಚಿತ್ರದಲ್ಲಿ ನಟಿಸಲು ನನಗೆ ಹೆಮ್ಮೆ ಇದೆ. ನಮ್ಮ ರಕ್ಷಣಾ ಪಡೆಗಳು ಮಾಡಿದ ಸಾಹಸವನ್ನು ಚಿತ್ರದ ಮೂಲಕ ಜನರಿಗೆ ತೋರಿಸುವುದು ನನ್ನ ಕರ್ತವ್ಯವಾಗಿದೆ. ಜನರನ್ನು ತಲುಪಲು ಸಿನಿಮಾ ಪ್ರಭಾವಿ ಮಾಧ್ಯಮವಾಗಿದೆ" ಎಂದು ವಿವೇಕ್ ಒಬೆರಾಯ್ ಹೇಳಿದ್ದಾರೆ.

ಭಾರತೀಯ ವಾಯುಪಡೆ "ಬಾಲಕೋಟ್ ಮೇಲೆ ನಡೆಸಿದ ದಾಳಿ ಪ್ರಮುಖವಾದದ್ದು. ಮಾಧ್ಯಮಗಳ ಮೂಲಕ ಎಲ್ಲವನ್ನು ಗಮನಿಸಿದ್ದೇನೆ. ನಡೆದ ಎಲ್ಲಾ ಘಟನೆಗಳಿಗೆ ಚಿತ್ರದಲ್ಲಿಯೂ ನ್ಯಾಯ ಒದಗಿಸುವ ಭರವಸೆ ಇದೆ ಎಂದು ವಿವೇಕ್ ಒಬೆರಾಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT