ಗಾಯಕಿಯೊಂದಿಗೆ ಹಿಮೇಶ್ 
ಬಾಲಿವುಡ್

ಬಡ ಮಹಿಳೆಯ ಕಂಚಿನ ಕಂಠಕ್ಕೆ ಮನಸೋತ ಹಿಮೇಶ್ ರೇಶಮಿಯಾ: ಚಿತ್ರದಲ್ಲಿ ಹಾಡಲು ಅವಕಾಶ

ಹೊಟ್ಟೆ ಪಾಡಿಗಾಗಿ ಪಶ್ಚಿಮ ಬಂಗಾಳದಲ್ಲಿ ಹಾಡು ಹೇಳಿ ಭಿಕ್ಷೆ ಬೇಡಿ ಬದುಕುತ್ತಿದ್ದ ರಾನು ಮಂಡಲ್  ರಾತ್ರೋ ರಾತ್ರಿ ದೇಶಾದ್ಯಂತ ಮನೆಮಾತಾಗಿದ್ದಾರೆ. 

ಮುಂಬೈ: ಹೊಟ್ಟೆ ಪಾಡಿಗಾಗಿ ಪಶ್ಚಿಮ ಬಂಗಾಳದಲ್ಲಿ ಹಾಡು ಹೇಳಿ ಭಿಕ್ಷೆ ಬೇಡಿ ಬದುಕುತ್ತಿದ್ದ ರಾನು ಮಂಡಲ್  ರಾತ್ರೋ ರಾತ್ರಿ ದೇಶಾದ್ಯಂತ ಮನೆಮಾತಾಗಿದ್ದಾರೆ. 

ಲತಾ ಮಂಗೇಶ್ಕರ್ ಅವರ 'ಎಕ್ ಪ್ಯಾರ್ ಕಾ ನಗ್ಮಾ ಹೈ'  ಹಾಡನ್ನು ರಾನು ಮಂಡಲ್  ರೈಲ್ವೆ ನಿಲ್ದಾಣವೊಂದರಲ್ಲಿ  ಹಾಡುತ್ತಿದ್ದಾಗ ಯಾರೂ ಒಬ್ಬರು ಚಿತ್ರಿಸಿ ವೈರಲ್ ಮಾಡಿದರು. ಇದಾದ  ಬಳಿಕ  ಮಂಡಲ್ ಅವರನ್ನು ಬಾಲಿವುಡ್ ಸಂಗೀತ ನಿರ್ದೇಶಕ ಹಿಮೇಶ್ ರೇಶಮಿಯಾ ಅವರು ಕರೆದು ತಮ್ಮ ಮುಂದಿನ ಚಿತ್ರಕ್ಕೆ ಹಾಡು ಹಾಡಿಸಿದ್ದಾರೆ.

ಕೃಷ್ಣನಗರದಲ್ಲಿ ಜನಿಸಿ ಬಾಲ್ಯವನ್ನು ಅಲ್ಲಿಯೇ ಕಳೆದಿರುವ ಇವರು ನಂತರ ಸಂಪಾದನೆಗಾಗಿ ಮುಂಬೈಗೆ ಬಂದಿದ್ದಾರೆ. ಆದರೆ, ಮಾನಸಿಕ ಖಿನ್ನತೆಗೊಳಗಾಗಿ ಮತ್ತೆ ರಣಘಾತ್ ಗೆ ಹಿಂತಿರುಗಿದ್ದಾರೆ. ಇತ್ತೀಚಿಗೆ ರಾನು ಅವರನ್ನು ಟಿವಿ ರಿಯಾಲಿಟಿ  ಶೋವೊಂದಕ್ಕೆ ಆಹ್ವಾನಿಸಲಾಗಿತ್ತು. ಈ ಶೋನಲ್ಲಿ ರಾನು ಅವರ ಗಾಯನಕ್ಕೆ ಪಿಧಾ ಆದ ಜಡ್ಜ್  ಹಿಮೇಶ್ ರೇಶಮಿಯಾ, ಅವರ ಮುಂದಿನ ಚಿತ್ರದಲ್ಲಿ ಹಾಡೊಂದನ್ನು ಹಾಡಲು ಅವಕಾಶ ನೀಡಿದ್ದಾರೆ. 

ಹಿಮೇಶ್ ರೇಶಮಿಯಾ ಅವರ ಮುಂದಿನ 'ಹ್ಯಾಪಿ ಹಾರ್ಡಿ ಮತ್ತು ಹೀರ್ " ಚಿತ್ರದಲ್ಲಿ ರಾನು ಮಂಡಲ್ ಹಾಡಿರುವ 'ತೇರಿ ಮೇರಿ ಕಹಾನಿ' ಗೀತೆಯನ್ನು  ಹಿಮೇಶ್ ರೇಶಮಿಯಾ ತಮ್ಮ ಇನ್ಸಾಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ರಾನು ಮಂಡಲ್ ಟಿವಿ ಶೋವೊಂದಕ್ಕೆ ಬರುವ ಮುಂಚೆ ಸಲೊನ್ ವೊಂದನ್ನು ನಡೆಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಹಿಮೇಶ್ ಅವರ ಕಾರ್ಯಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ಪ್ರತಿಭಾವಂತರನ್ನು ಕಂಡರೆ ನೆರವು ನೀಡುವಂತೆ ತಮ್ಮಗೆ ಸಲ್ಮಾನ್ ಖಾನ್ ತಂದೆ ಸಲಹೆ ನೀಡಿದ್ದರು  ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT