ಗಾಯಕಿಯೊಂದಿಗೆ ಹಿಮೇಶ್ 
ಬಾಲಿವುಡ್

ಬಡ ಮಹಿಳೆಯ ಕಂಚಿನ ಕಂಠಕ್ಕೆ ಮನಸೋತ ಹಿಮೇಶ್ ರೇಶಮಿಯಾ: ಚಿತ್ರದಲ್ಲಿ ಹಾಡಲು ಅವಕಾಶ

ಹೊಟ್ಟೆ ಪಾಡಿಗಾಗಿ ಪಶ್ಚಿಮ ಬಂಗಾಳದಲ್ಲಿ ಹಾಡು ಹೇಳಿ ಭಿಕ್ಷೆ ಬೇಡಿ ಬದುಕುತ್ತಿದ್ದ ರಾನು ಮಂಡಲ್  ರಾತ್ರೋ ರಾತ್ರಿ ದೇಶಾದ್ಯಂತ ಮನೆಮಾತಾಗಿದ್ದಾರೆ. 

ಮುಂಬೈ: ಹೊಟ್ಟೆ ಪಾಡಿಗಾಗಿ ಪಶ್ಚಿಮ ಬಂಗಾಳದಲ್ಲಿ ಹಾಡು ಹೇಳಿ ಭಿಕ್ಷೆ ಬೇಡಿ ಬದುಕುತ್ತಿದ್ದ ರಾನು ಮಂಡಲ್  ರಾತ್ರೋ ರಾತ್ರಿ ದೇಶಾದ್ಯಂತ ಮನೆಮಾತಾಗಿದ್ದಾರೆ. 

ಲತಾ ಮಂಗೇಶ್ಕರ್ ಅವರ 'ಎಕ್ ಪ್ಯಾರ್ ಕಾ ನಗ್ಮಾ ಹೈ'  ಹಾಡನ್ನು ರಾನು ಮಂಡಲ್  ರೈಲ್ವೆ ನಿಲ್ದಾಣವೊಂದರಲ್ಲಿ  ಹಾಡುತ್ತಿದ್ದಾಗ ಯಾರೂ ಒಬ್ಬರು ಚಿತ್ರಿಸಿ ವೈರಲ್ ಮಾಡಿದರು. ಇದಾದ  ಬಳಿಕ  ಮಂಡಲ್ ಅವರನ್ನು ಬಾಲಿವುಡ್ ಸಂಗೀತ ನಿರ್ದೇಶಕ ಹಿಮೇಶ್ ರೇಶಮಿಯಾ ಅವರು ಕರೆದು ತಮ್ಮ ಮುಂದಿನ ಚಿತ್ರಕ್ಕೆ ಹಾಡು ಹಾಡಿಸಿದ್ದಾರೆ.

ಕೃಷ್ಣನಗರದಲ್ಲಿ ಜನಿಸಿ ಬಾಲ್ಯವನ್ನು ಅಲ್ಲಿಯೇ ಕಳೆದಿರುವ ಇವರು ನಂತರ ಸಂಪಾದನೆಗಾಗಿ ಮುಂಬೈಗೆ ಬಂದಿದ್ದಾರೆ. ಆದರೆ, ಮಾನಸಿಕ ಖಿನ್ನತೆಗೊಳಗಾಗಿ ಮತ್ತೆ ರಣಘಾತ್ ಗೆ ಹಿಂತಿರುಗಿದ್ದಾರೆ. ಇತ್ತೀಚಿಗೆ ರಾನು ಅವರನ್ನು ಟಿವಿ ರಿಯಾಲಿಟಿ  ಶೋವೊಂದಕ್ಕೆ ಆಹ್ವಾನಿಸಲಾಗಿತ್ತು. ಈ ಶೋನಲ್ಲಿ ರಾನು ಅವರ ಗಾಯನಕ್ಕೆ ಪಿಧಾ ಆದ ಜಡ್ಜ್  ಹಿಮೇಶ್ ರೇಶಮಿಯಾ, ಅವರ ಮುಂದಿನ ಚಿತ್ರದಲ್ಲಿ ಹಾಡೊಂದನ್ನು ಹಾಡಲು ಅವಕಾಶ ನೀಡಿದ್ದಾರೆ. 

ಹಿಮೇಶ್ ರೇಶಮಿಯಾ ಅವರ ಮುಂದಿನ 'ಹ್ಯಾಪಿ ಹಾರ್ಡಿ ಮತ್ತು ಹೀರ್ " ಚಿತ್ರದಲ್ಲಿ ರಾನು ಮಂಡಲ್ ಹಾಡಿರುವ 'ತೇರಿ ಮೇರಿ ಕಹಾನಿ' ಗೀತೆಯನ್ನು  ಹಿಮೇಶ್ ರೇಶಮಿಯಾ ತಮ್ಮ ಇನ್ಸಾಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ರಾನು ಮಂಡಲ್ ಟಿವಿ ಶೋವೊಂದಕ್ಕೆ ಬರುವ ಮುಂಚೆ ಸಲೊನ್ ವೊಂದನ್ನು ನಡೆಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಹಿಮೇಶ್ ಅವರ ಕಾರ್ಯಕ್ಕೆ ಪ್ರಶಂಸೆಯ ಮಹಾಪೂರವೇ ಹರಿದುಬರುತ್ತಿದೆ. ಪ್ರತಿಭಾವಂತರನ್ನು ಕಂಡರೆ ನೆರವು ನೀಡುವಂತೆ ತಮ್ಮಗೆ ಸಲ್ಮಾನ್ ಖಾನ್ ತಂದೆ ಸಲಹೆ ನೀಡಿದ್ದರು  ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT