ಸೈಫ್ ಅಲಿಖಾನ್, ಹೃತ್ತಿಕ್ ರೋಷನ್ 
ಬಾಲಿವುಡ್

ಪೌರತ್ವ ತಿದ್ದುಪಡಿ ಕಾಯ್ದೆ: ಮೌನ ಮುರಿದ ಬಾಲಿವುಡ್, ಸೈಫ್ ಅಲಿಖಾನ್ ಏನಂದ್ರು ಗೊತ್ತಾ?

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಬಾಲಿವುಡ್ ಕೊನೆಗೂ ಮೌನ ಮುರಿದಿದ್ದು, ನಟ ಸೈಫ್ ಅಲಿಖಾನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. 

ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಬಾಲಿವುಡ್ ಕೊನೆಗೂ ಮೌನ ಮುರಿದಿದ್ದು, ನಟ ಸೈಫ್ ಅಲಿಖಾನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. 

ದೇಶದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆ ಹೇಗೆ ಅಂತ್ಯಗೊಳ್ಳುತ್ತವೆ ಎಂಬ ಬಗ್ಗೆ ಆಶ್ಚರ್ಯದಿಂದ ನೋಡುತ್ತಿದ್ದೇವೆ. ಕಳವಳದ ಬಗ್ಗೆ ಅನೇಕ ಸಂಗತಿಗಳು ನಮಗೆ ಎಚ್ಚರಿಕೆ ನೀಡಿವೆ ಎಂದಿದ್ದಾರೆ. 

ಫರ್ಹಾನ್ ಅಖ್ತಾರ್, ಪರಿಣಿತಿ ಚೋಪ್ರಾ, ರಿಚಾ ಚಾದಾ, ಅನುರಾಗ್ ಕಶ್ಯಪ್, ಶಬಾನಾ ಅಜ್ಮಿ, ಜಾವೇದ್ ಅಖ್ತರ್, ಹೃತಿಕ್ ರೋಷನ್, ಸ್ವರಾ ಭಾಸ್ಕರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅಸಮಾಧಾನದ ಮಾತುಗಳನ್ನಾಡಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಚಿತ್ರೋದ್ಯಮದ ಮೌನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಲಾಗುತಿತ್ತು. ಆದರೆ, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು 49 ವರ್ಷದ ಸೈಫ್ ಅಲಿಖಾನ್ ಹೇಳಿದ್ದಾರೆ.

ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಇನ್ನೂ ಸರಿಯಾಗಿ ತಿಳಿದಿಲ್ಲ. ಪ್ರತಿಭಟನೆ ಮಾಡಲು ಹೋಗಬೇಕಾದರೆ ಹೆಚ್ಚಿನ ರೀತಿಯಲ್ಲಿ ಚಿಂತಿಸಬೇಕಾದ ಅಗತ್ಯವಿದೆ. ಪತ್ರಿಕೆಯಲ್ಲಿ ಬಂದಂತಹ ಅನೇಕ ಸಂಗತಿಗಳು ಕಳವಳಕಾರಿಯಾಗಿವೆ. ಎಂತಹ ಪರಿಸ್ಥಿತಿಯಲ್ಲಿ ನಾವು ಬದುಕುತ್ತಿದ್ದೇವೆ ಎಂಬುದರ ಬಗ್ಗೆ ಅರಿಯಬೇಕಾಗಿದೆ  ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT