ಸಂಗ್ರಹ ಚಿತ್ರ 
ಬಾಲಿವುಡ್

ಬಾಲಿವುಡ್ ನಲ್ಲಿ ಮತ್ತೆ ಮೀಟೂ ಅಬ್ಬರ, ನಿರ್ದೇಶಕ ರಾಜ್ ಕುಮಾರ್ ಹಿರಾನಿ ವಿರುದ್ಧ ಗಂಭೀರ ಆರೋಪ

3 ಇಡಿಯಟ್ಸ್ ಖ್ಯಾತಿಯ ನಿರ್ದೇಶಕ ರಾಜ್ ಕುಮಾರ್ ಹಿರಾನಿ ತಮ್ಮ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಮುಂಬೈ: ಈ ಹಿಂದೆ ಇಡೀ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಮೀಟೂ ಆರೋಪ ಇದೀಗ ಮತ್ತೆ ಬಾಲಿವುಡ್ ನಲ್ಲಿ ಜೋರು ಸುದ್ದಿಗೆ ಗ್ರಾಸವಾಗಿದ್ದು, 3 ಇಡಿಯಟ್ಸ್ ಖ್ಯಾತಿಯ ನಿರ್ದೇಶಕ ರಾಜ್ ಕುಮಾರ್ ಹಿರಾನಿ ತಮ್ಮ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.
ಮಹಿಳೆಯೇ ಆರೋಪಿಸಿರುವಂತೆ ಕಳೆದ ವರ್ಷ ತೆರೆ ಕಂಡಿದ್ದ ಸಂಜು ಚಿತ್ರ ನಿರ್ಮಾಣದ ವೇಳೆ ತಮ್ಮ ಸಹಾಯಕಿಯಾಗಿದ್ದ ನನ್ನ ಮೇಲೆ ರಾಜ್ ಕುಮಾರ್ ಹಿರಾನಿ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. 2017ರ ಹಿಟ್‌ ಸಿನಿಮಾ 'ಸಂಜು'ದಲ್ಲಿ ಅವರ ಜತೆ 'ಸಹಾಯಕಿ'ಯಾಗಿ ಕೆಲಸ ಮಾಡಿದ್ದ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ಮಾಧ್ಯಮವೊಂದರಲ್ಲಿ ಪ್ರಕಟವಾದ ಲೇಖನದಲ್ಲಿ ಈ ಬಗ್ಗೆ ಮಹಿಳೆ ವಿವರ ನೀಡಿದ್ದು, 2018ರ ಮಾರ್ಚ್‌ನಿಂದ ಸೆಪ್ಟೆಂಬರ್‌ ನಡುವೆ ಒಂದಕ್ಕಿಂತ ಹೆಚ್ಚು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. 
2018ರ ನವೆಂಬರ್‌ 3 ರಂದು ಈ ಮಹಿಳೆ ಸಂಜು ಚಿತ್ರದ ಸಹ ನಿರ್ಮಾಪಕ ವಿಧು ವಿನೋದ್‌ ಚೋಪ್ರಾ ಅವರಿಗೆ ವಿವರವಾದ ಇ-ಮೇಲ್‌ ಮಾಡಿದ್ದು, 2018ರ ಏಪ್ರಿಲ್‌ 9ರಂದು ಹಿರಾನಿ ಅವರು ತಮ್ಮ ಗೃಹ ಕಚೇರಿಯಲ್ಲಿ ತನ್ನನ್ನು ದುರ್ಬಳಕೆ ಮಾಡಿಕೊಂಡರು ಎಂದಿದ್ದಾರೆ. ಹಿರಾನಿ ಅವರನ್ನು ತಂದೆಯ ಸ್ಥಾನದಲ್ಲಿಟ್ಟು ನೋಡುತ್ತಿದ್ದುದಾಗಿ ಹೇಳಿರುವ ಆಕೆ ಅಂದೇ ಪ್ರತಿಭಟನೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಜತೆಗೆ ಹಿರಾನಿ ಅವರಿಗೆ ಅಂದೇ ಇ ಮೇಲ್‌ ಮಾಡಿದ್ದಾಗಿಯೂ ವಿವರಿಸಿದ್ದಾರೆ. 
'ಏಪ್ರಿಲ್‌ 9ರ ರಾತ್ರಿ ನನ್ನ ಮನಸು, ದೇಹ ಮತ್ತು ಹೃದಯವನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು. ಈ ದುರ್ಬಳಕೆ ಮುಂದಿನ ಆರು ತಿಂಗಳುಗಳ ಕಾಲ ಮುಂದುವರಿಯಿತು. ಚೋಪ್ರಾ ಅವರು ಬೆದರಿಸಿ ನನ್ನನ್ನು ಬಳಸಿಕೊಂಡರು,' ಎಂದು ಲೇಖನದಲ್ಲಿ ವಿವರಿಸಲಾಗಿದೆ. ತಂದೆಯ ಗಂಭೀರ ಅನಾರೋಗ್ಯ ಮತ್ತು ಉದ್ಯೋಗದ ಅನಿವಾರ್ಯತೆಯಿಂದಾಗಿ ತಾನು ಹಿರಾನಿ ಅವರ ದುರ್ವರ್ತನೆಯನ್ನು ಸಹಿಸಿಕೊಂಡಿದ್ದಾಗಿ ಮಹಿಳೆ ಹೇಳಿದ್ದರು. 
ಆದರೆ, ಹಿರಾನಿ ಅವರ ವಕೀಲ ಆನಂದ್‌ ದೇಸಾಯಿ ಅವರು ಈ ಆರೋಪಗಳನ್ನು ಸುಳ್ಳು, ದುರುದ್ದೇಶಪ್ರೇರಿತ ಮತ್ತು ಮಾನಹಾನಿಕರ ಎಂದು ತಳ್ಳಿಹಾಕಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT