ಸಲ್ಮಾನ್ ಖಾನ್ 
ಬಾಲಿವುಡ್

ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ

ಬೈಸಿಕಲ್ ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ: ಬೈಸಿಕಲ್  ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 323 ( ಮಾನಹಾನಿ ) 392 (ದರೋಡೆ ) ಮತ್ತು 506 ( ಅಪರಾಧದ ಉದ್ದೇಶ) ಅಡಿಯಲ್ಲಿ ಅಂದೇರಿಯ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್  ಆರ್ ಆರ್ ಖಾನ್ ಅವರ ಬಳಿ ಪತ್ರಕರ್ತ ಅಶೋಕ್ ಪಾಂಡೆ ಖಾಸಗಿ ದೂರು ದಾಖಲಿಸಿದ್ದಾರೆ. 
ಏಪ್ರಿಲ್ 24 ರಂದು ಮುಂಜಾನೆ ಈ ಘಟನೆ ನಡೆದಿದೆ .ಪತ್ರಕರ್ತ ಪಾಂಡೆ ಕಾರಿನಲ್ಲಿ ಹೋಗುತ್ತಿರಬೇಕಾದರೆ ಅಂಗರಕ್ಷಕರೊಂದಿಗೆ ಬೈಸಿಕಲ್  ನಲ್ಲಿ ಬರುತ್ತಿದ್ದ ಸಲ್ಮಾನ್ ಖಾನ್ ನೋಡಿದ ತಕ್ಷಣ, ಅಂಗರಕ್ಷಕರ ಒಪ್ಪಿಗೆ ಪಡೆದು ವಿಡಿಯೋ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ. ಇದರಿಂದ ಕ್ರೋದಗೊಂಡ ಸಲ್ಮಾನ್ ಖಾನ್ ಹಾಗೂ ಅವರ ಅಂಗರಕ್ಷಕರು ತಮ್ಮ ಕಾರಿನ ಬಳಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪಾಂಡೆ ಆರೋಪಿಸಿದ್ದಾರೆ.
ಸಲ್ಮಾನ್ ಖಾನ್ ತಮ್ಮ ಮೇಲೆ ಹಲ್ಲೆ ನಡೆಸಿದಲ್ಲದೇ ತಮ್ಮ ಬಳಿಯಿದ್ದ ಮೊಬೈಲ್  ಪೋನ್  ಕಿತ್ತುಕೊಂಡು ಹೋಗಿದ್ದಾರೆ. ಮೂವರು ಸೇರಿ ಮನಬಂದಂತೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
ಸಲ್ಮಾನ್ ಖಾನ್ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂಜರಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ಪಾಂಡೆ ತಿಳಿಸಿದ್ದಾರೆ.ಸಲ್ಮಾನ್ ಖಾನ್ ವಿರುದ್ಧ ಎಫ್ ಐಆರ್ ಹಾಗೂ ತನಿಖೆಗೆ ದೂರುದಾರರು ಕೋರಿದ್ದು, ಜುಲೈ 12 ರಂದು ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT