ಅಕ್ಷಯ್ ಕುಮಾರ್ 
ಬಾಲಿವುಡ್

ಫೋನಿ ಪೀಡಿತ ಒಡಿಶಾಗೆ 1 ಕೋಟಿ ನೀಡಿದ ನಟ ಅಕ್ಷಯ್​ ಕುಮಾರ್

ಒಡಿಶಾಕ್ಕೆ ಅಪ್ಪಳಿಸಿದ ಫೋನಿಚಂಡಮಾರುತ ನೂರಾರು ಜನರ ಬದುಕನ್ನು ನಾಶಪಡಿಸಿದೆ. ಫೋನಿ ಪೀಡಿತ ಒಡಿಶಾ ರಾಜ್ಯಕ್ಕೆ ಕೇಂದ್ರ ಸರ್ಕಾರ 1 ಸಾವಿರ ಕೋಟಿ ಬಿಡುಗಡೆ ಮಾಡಿದ್ದರೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಒಂದು ಕೋಟಿ ರೂ, ಪರಿಹಾರವನ್ನು ನೀಡಿದ್ದಾರೆ.

ಮುಂಬೈ: ಒಡಿಶಾಕ್ಕೆ ಅಪ್ಪಳಿಸಿದ ಫೋನಿ ಚಂಡಮಾರುತ ನೂರಾರು ಜನರ  ಬದುಕನ್ನು ನಾಶಪಡಿಸಿದೆ. ಫೋನಿ ಪೀಡಿತ ಒಡಿಶಾ ರಾಜ್ಯಕ್ಕೆ ಕೇಂದ್ರ ಸರ್ಕಾರ 1 ಸಾವಿರ ಕೋಟಿ ಬಿಡುಗಡೆ ಮಾಡಿದ್ದರೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಹ ಒಂದು ಕೋಟಿ ರೂ, ಪರಿಹಾರವನ್ನು ನೀಡಿದ್ದಾರೆ.
 ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪರಿಹಾರ ನಿಧಿಗೆ ಅಕ್ಷಯ್ ಕುಮಾರ್ ಈ ಹಣವನ್ನು ನೀಡುವ ಮೂಲಕ ಉದಾರತೆ ಮೆರೆದಿದ್ದಾರೆ.
ಇನ್ನು ನಟ ಅಕ್ಷಯ್ ಕುಮಾರ್ ಈ ಬಗೆಯಲ್ಲಿ ನೆರವು ನೀಡುತ್ತಿರುವುದು ಇದೇನೂ ಹೊಸದಲ್ಲ. ಹಿಂದೆ ಕೇರಳ, ಚೆನ್ನೈ ಪ್ರವಾಹಗಳಾದಾಗಲೂ ಅವರು ಆರ್ಥಿಕ ನೆರವು ನೀಡಿದ್ದರು.
ಅಲ್ಲದೆ ಭಾರತೀಯ ಸೈನಿಕರ ಕುಟುಂಬಕ್ಕೆ ನೆರವಾಗುವ ಸಲುವಾಗಿ ಕೇಂದ್ರ ಗೃಹಸಚಿವಾಲಯ ತೆರೆದಿರುವ ಭಾರತ್​ ಕೆ ವೀರ್​ ವೆಬ್​ಸೈಟ್​ ಮೂಲಕ ನೆರವಾಗುತ್ತಿದ್ದಾರೆ.
ಫೋನಿ ಚಂಡಮಾರುತದಿಂದಾಗಿ ಒಡಿಶಾದಲ್ಲಿ  ಅಂದಾಜು 34 ಜನ ಸಾವನ್ನಪ್ಪಿದ್ದು ನೂರಾರು ಮಂಂದಿ ನಿರಾಶ್ರಿತರಾಗಿದ್ದಾರೆ. ಸಾವಿರಾರು ಕೋಟಿ ರು. ಆಸ್ತಿಪಾಸ್ತಿ ಹಾನಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT