ಅಮಿತಾಭ್ ಬಚ್ಚನ್ 
ಬಾಲಿವುಡ್

ಕೆಬಿಸಿ ಛತ್ರಪತಿ ಶಿವಾಜಿ ಮಹಾರಾಜ್ ವಿವಾದ: ಕ್ಷಮೆಯಾಚಿಸಿದ ಬಿಗ್ ಬಿ

ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಮುಂಬೈ: ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಕಳೆದ ನವೆಂಬರ್ 6ರಂದು ಪ್ರಸಾರವಾದ ಕೆಬಿಸಿಯಲ್ಲಿ 'ಈ ನಾಯಕರಲ್ಲಿ ಯಾರು ಮೊಘಲ್ ಸಾಮ್ರಾಟ ಔರಂಗಜೇಬ್​ಗೆ ಸಮಕಾಲೀನರು?' ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಮಹಾರಾಜ ಪ್ರತಾಪ್, ರಾಣಾ ಸಂಗ, ಮಹಾರಾಜ ರಂಜಿತ್ ಸಿಂಗ್, ಶಿವಾಜಿ ಎಂಬ 4 ಆಯ್ಕೆಗಳನ್ನು ಕೊಡಲಾಗಿತ್ತು.

ಈ ಪ್ರಶ್ನೆಯಿಂದ ಮರಾಠಿಗರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಟ್ವಿಟ್ಟರ್​ನಲ್ಲಿ #BoycuttKBC ಎಂಬ ಅಭಿಯಾನ ಶುರುವಾಗಿತ್ತು. ಈ ಪ್ರಶ್ನೆಯ ಸ್ಕ್ರೀನ್​ಶಾಟ್ ಹಾಕಿ ಅನೇಕರು ಖಾಸಗಿ ವಾಹಿನಿ ಮತ್ತು ಅಮಿತಾಭ್ ಬಚ್ಚನ್ ವಿರುದ್ಧ ಟ್ವಿಟ್ಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಮೊಘಲ್ ರಾಜ ಔರಂಗಜೇಬ್​ಗೆ ಸಾಮ್ರಾಟ ಎಂದು ಕರೆದಿರುವ ಆಯೋಜಕರು, ಆಯ್ಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಎಂದು ಬರೆಯುವ ಬದಲು ಕೇವಲ ಶಿವಾಜಿ ಎಂದು ಬರೆಯುವ ಮೂಲಕ ಅವಮಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಇಂದು ಈ ಕುರಿತು ಟ್ವೀಟ್ ಮಾಡಿರುವ ಬಿಗ್ ಬಿ, ಛತ್ರಪತಿ ಶಿವಾಜಿ ಮಹಾರಾಜ್ ಗೆ ಯಾವುದೇ ಕಾರಣಕ್ಕೂ 
ಅಗೌರವ ತೋರುವುದಿಲ್ಲ. ಇದರಿಂದ ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

Iran war: ಬುಶೆಹರ್ ಅಣುಸ್ಥಾವರದ ಮೇಲೆ ಅಮೆರಿಕ-ಇಸ್ರೇಲ್ ಕ್ಷಿಪಣಿ ದಾಳಿ, ಓರ್ವ ಸಾವು

ಜನರು ಗ್ಯಾಸ್‌ಗಾಗಿ ಕ್ಯೂ ನಿಂತರೆ; ರಾಜ್ಯ ಶಾಸಕರು RCB vs CSK ಪಂದ್ಯದ ಉಚಿತ IPL​ ಟಿಕೆಟ್‌ಗಾಗಿ ಸಾಲುಗಟ್ಟಿ ನಿಂತ್ರು: ಎಲ್ಲರಿಗೂ ಸಿಕ್ತು 3 ಟಿಕೆಟ್!

IPL 2026: ಶತಕದ ಅಂಚಿನಲ್ಲಿ ಎಡವಿದ ರಿಜ್ವಿ; ಡೆಲ್ಲಿ ಕ್ಯಾಪಿಟಲ್ಸ್ ಸತತ 2ನೇ ಗೆಲುವು; DC ಮುಂದೆ ಮಂಡಿಯೂರಿದ ಮುಂಬೈ!

ತಮಿಳುನಾಡಿನಲ್ಲಿ ಅಧಿಕಾರ ಯಾರಿಗೆ? ಡಿಎಂಕೆ, ಎನ್‌ಡಿಎ ಅಥವಾ ಟಿವಿಕೆ? ಸಮೀಕ್ಷೆಗಳಲ್ಲಿ ಹೊರಬಿತ್ತು ಅಚ್ಚರಿಯ ಮಾಹಿತಿ!

SCROLL FOR NEXT