ಅಮಿತಾಭ್ ಬಚ್ಚನ್ 
ಬಾಲಿವುಡ್

ಕೆಬಿಸಿ ಛತ್ರಪತಿ ಶಿವಾಜಿ ಮಹಾರಾಜ್ ವಿವಾದ: ಕ್ಷಮೆಯಾಚಿಸಿದ ಬಿಗ್ ಬಿ

ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಮುಂಬೈ: ಕೌನ್ ಬನೇಗಾ ಕರೋಡ್​ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಕಳೆದ ನವೆಂಬರ್ 6ರಂದು ಪ್ರಸಾರವಾದ ಕೆಬಿಸಿಯಲ್ಲಿ 'ಈ ನಾಯಕರಲ್ಲಿ ಯಾರು ಮೊಘಲ್ ಸಾಮ್ರಾಟ ಔರಂಗಜೇಬ್​ಗೆ ಸಮಕಾಲೀನರು?' ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು. ಅದಕ್ಕೆ ಮಹಾರಾಜ ಪ್ರತಾಪ್, ರಾಣಾ ಸಂಗ, ಮಹಾರಾಜ ರಂಜಿತ್ ಸಿಂಗ್, ಶಿವಾಜಿ ಎಂಬ 4 ಆಯ್ಕೆಗಳನ್ನು ಕೊಡಲಾಗಿತ್ತು.

ಈ ಪ್ರಶ್ನೆಯಿಂದ ಮರಾಠಿಗರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಟ್ವಿಟ್ಟರ್​ನಲ್ಲಿ #BoycuttKBC ಎಂಬ ಅಭಿಯಾನ ಶುರುವಾಗಿತ್ತು. ಈ ಪ್ರಶ್ನೆಯ ಸ್ಕ್ರೀನ್​ಶಾಟ್ ಹಾಕಿ ಅನೇಕರು ಖಾಸಗಿ ವಾಹಿನಿ ಮತ್ತು ಅಮಿತಾಭ್ ಬಚ್ಚನ್ ವಿರುದ್ಧ ಟ್ವಿಟ್ಟರ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಮೊಘಲ್ ರಾಜ ಔರಂಗಜೇಬ್​ಗೆ ಸಾಮ್ರಾಟ ಎಂದು ಕರೆದಿರುವ ಆಯೋಜಕರು, ಆಯ್ಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಎಂದು ಬರೆಯುವ ಬದಲು ಕೇವಲ ಶಿವಾಜಿ ಎಂದು ಬರೆಯುವ ಮೂಲಕ ಅವಮಾನಿಸಲಾಗಿದೆ ಎಂದು ಟ್ವೀಟ್ ಮಾಡಿದ್ದರು.

ಇಂದು ಈ ಕುರಿತು ಟ್ವೀಟ್ ಮಾಡಿರುವ ಬಿಗ್ ಬಿ, ಛತ್ರಪತಿ ಶಿವಾಜಿ ಮಹಾರಾಜ್ ಗೆ ಯಾವುದೇ ಕಾರಣಕ್ಕೂ 
ಅಗೌರವ ತೋರುವುದಿಲ್ಲ. ಇದರಿಂದ ನಿಮ್ಮ ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಯಾರೂ ಅಧಿಕಾರ ಹಂಚಿಕೆ ಬಗ್ಗೆ ಮಾತನಾಡಬೇಡಿ, ಅದರಿಂದ ಪಕ್ಷಕ್ಕೆ ಡ್ಯಾಮೇಜ್: ಡಿ ಕೆ ಶಿವಕುಮಾರ್

1st Test: Mohammed Siraj ದಾಳಿಗೆ ಪತರುಗುಟ್ಟಿದ West Indies, ಭೋಜನ ವಿರಾಮದ ವೇಳೆಗೆ 90/5

SCROLL FOR NEXT