ಪ್ರಭಾತ್, ಅಕ್ಷಯ್ ಕುಮಾರ್ 
ಬಾಲಿವುಡ್

900 ಕಿ. ಮೀ ದೂರ ನಡೆದು ಅಕ್ಷಯ್ ಕುಮಾರ್ ಭೇಟಿ ಮಾಡಿದ ಅಭಿಮಾನಿ! ಹುಚ್ಚು ಅಭಿಮಾನಕ್ಕೆ ಬಾಲಿವುಡ್ ಕಿಲಾಡಿ ಏನಂದ್ರು

ಪ್ರತಿಯೊಬ್ಬ ಅಭಿಮಾನಿಯೂ ತಮ್ಮ ನೆಚ್ಚಿನ ನಟನಿಗೆ ವಿಭಿನ್ನ ರೀತಿಯಲ್ಲಿ  ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಗೊಳಿಸುತ್ತಾರೆ. ಇತ್ತೀಚಿಗೆ ಅಭಿಯಾನಿಯೊಬ್ಬ 900 ಕಿ. ಮೀ. ನಡೆದು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

ಮುಂಬೈ: ಪ್ರತಿಯೊಬ್ಬ ಅಭಿಮಾನಿಯೂ ತಮ್ಮ ನೆಚ್ಚಿನ ನಟನಿಗೆ ವಿಭಿನ್ನ ರೀತಿಯಲ್ಲಿ  ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಗೊಳಿಸುತ್ತಾರೆ. ಇತ್ತೀಚಿಗೆ ಅಭಿಯಾನಿಯೊಬ್ಬ 900 ಕಿ. ಮೀ. ನಡೆದು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

ತಮಾಷೆಯಲ್ಲ, ಈತನ ಹೆಸರು ಪ್ರಭಾತ್ . ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಲೆಂದೆ ದ್ವಾರಕದಿಂದ ಮುಂಬೈಯವರೆಗೂ ನಡೆದು ಬಂದಿದ್ದಾರೆ. ಇದಕ್ಕಾಗಿ 18 ದಿನಗಳನ್ನು ತೆಗೆದುಕೊಂಡಿದ್ದು, ಕೊನೆಗೂ ತನ್ನ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಅಭಿಮಾನಿಯ ಇಂತಹ ಅಭಿಮಾನದಿಂದ ಪ್ರಭಾವಿತರಾಗಿರುವ ಅಕ್ಷಯ್ ಕುಮಾರ್,  ಆ ಅಭಿಮಾನಿ ಜೊತೆಗಿರುವ ಪೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ದ್ವಾರಕದಿಂದ 900 ಕಿ. ಮೀ. ದೂರ ನಡೆದು ಬಂದಿದ್ದ ಪ್ರಭಾತ್ ನನ್ನು ಇಂದು ಭೇಟಿ ಮಾಡಿದೆ. ನನ್ನನ್ನು ಸಂಪರ್ಕಿಸಲು 18 ದಿನಗಳನ್ನು ತೆಗೆದುಕೊಂಡಿದ್ದಾನೆ. ನಮ್ಮ ಯುವಕರು ತಮ್ಮ ಗುರಿಗಳನ್ನು ಸಾಧಿಸಲು ಈ ರೀತಿಯ ಯೋಜನೆ ಹಾಗೂ ದೃಢ ನಿರ್ಧಾರ ತೆಗೆದುಕೊಂಡರೆ ನಂತರ ನಮ್ಮನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಪ್ರಭಾತ್ ವಿಡಿಯೋವನ್ನು ಅಕ್ಷಯ್ ಕುಮಾರ್ ಕೂಡಾ ಶೇರ್ ಮಾಡಿದ್ದಾರೆ.  ಅಷ್ಟು ದೂರ ನಡೆಯಲು ಕಾರಣವೇನು ಎಂಬುದನ್ನು  ಅಭಿಮಾನಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ನಡಿಗೆಯ ಬಗ್ಗೆ ಸಂದೇಶ ಸಾರಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ. ಎಲ್ಲರೂ ನಡೆಯಬೇಕೆಂದು ಅವರು ಹೇಳಿದ್ದಾರೆ. 

ಅಭಿಯಾನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ಯಾಡ್ ಮನ್, ಇಂತಹ ಹುಚ್ಚು ಅಭಿಮಾನವನ್ನು ತಡೆಗಟ್ಟುವಂತೆ ಇತರ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಎಲ್ಲರ ಪ್ರೀತಿಗೆ ಕೃತಜ್ಞನಾಗಿರುತ್ತೇನೆ ಆದರೆ, ಇಂತಹ ಕೆಲಸ ಮಾಡಬೇಡಿ. ನಿಮ್ಮ ಉತ್ತಮ ಜೀವನಕ್ಕಾಗಿ ಶಕ್ತಿ, ಸಮಯ, ಸಂಪನ್ಮೂಲದ ಕಡೆಗೆ ಗಮನ ನೀಡಿ, ಅದು ನನ್ನಗೆ ಸಂತೋಷವನ್ನುಂಟುಮಾಡುತ್ತದೆ ಎಂದು ಅಕ್ಷಯ್ ಕುಮಾರ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT