ಪ್ರಭಾತ್, ಅಕ್ಷಯ್ ಕುಮಾರ್ 
ಬಾಲಿವುಡ್

900 ಕಿ. ಮೀ ದೂರ ನಡೆದು ಅಕ್ಷಯ್ ಕುಮಾರ್ ಭೇಟಿ ಮಾಡಿದ ಅಭಿಮಾನಿ! ಹುಚ್ಚು ಅಭಿಮಾನಕ್ಕೆ ಬಾಲಿವುಡ್ ಕಿಲಾಡಿ ಏನಂದ್ರು

ಪ್ರತಿಯೊಬ್ಬ ಅಭಿಮಾನಿಯೂ ತಮ್ಮ ನೆಚ್ಚಿನ ನಟನಿಗೆ ವಿಭಿನ್ನ ರೀತಿಯಲ್ಲಿ  ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಗೊಳಿಸುತ್ತಾರೆ. ಇತ್ತೀಚಿಗೆ ಅಭಿಯಾನಿಯೊಬ್ಬ 900 ಕಿ. ಮೀ. ನಡೆದು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

ಮುಂಬೈ: ಪ್ರತಿಯೊಬ್ಬ ಅಭಿಮಾನಿಯೂ ತಮ್ಮ ನೆಚ್ಚಿನ ನಟನಿಗೆ ವಿಭಿನ್ನ ರೀತಿಯಲ್ಲಿ  ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಗೊಳಿಸುತ್ತಾರೆ. ಇತ್ತೀಚಿಗೆ ಅಭಿಯಾನಿಯೊಬ್ಬ 900 ಕಿ. ಮೀ. ನಡೆದು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಿರುವ ಘಟನೆ ನಡೆದಿದೆ.

ತಮಾಷೆಯಲ್ಲ, ಈತನ ಹೆಸರು ಪ್ರಭಾತ್ . ಅಕ್ಷಯ್ ಕುಮಾರ್ ಅವರನ್ನು ಭೇಟಿಯಾಗಲೆಂದೆ ದ್ವಾರಕದಿಂದ ಮುಂಬೈಯವರೆಗೂ ನಡೆದು ಬಂದಿದ್ದಾರೆ. ಇದಕ್ಕಾಗಿ 18 ದಿನಗಳನ್ನು ತೆಗೆದುಕೊಂಡಿದ್ದು, ಕೊನೆಗೂ ತನ್ನ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಅಭಿಮಾನಿಯ ಇಂತಹ ಅಭಿಮಾನದಿಂದ ಪ್ರಭಾವಿತರಾಗಿರುವ ಅಕ್ಷಯ್ ಕುಮಾರ್,  ಆ ಅಭಿಮಾನಿ ಜೊತೆಗಿರುವ ಪೋಟೋವೊಂದನ್ನು ಟ್ವೀಟ್ ಮಾಡಿದ್ದಾರೆ. ದ್ವಾರಕದಿಂದ 900 ಕಿ. ಮೀ. ದೂರ ನಡೆದು ಬಂದಿದ್ದ ಪ್ರಭಾತ್ ನನ್ನು ಇಂದು ಭೇಟಿ ಮಾಡಿದೆ. ನನ್ನನ್ನು ಸಂಪರ್ಕಿಸಲು 18 ದಿನಗಳನ್ನು ತೆಗೆದುಕೊಂಡಿದ್ದಾನೆ. ನಮ್ಮ ಯುವಕರು ತಮ್ಮ ಗುರಿಗಳನ್ನು ಸಾಧಿಸಲು ಈ ರೀತಿಯ ಯೋಜನೆ ಹಾಗೂ ದೃಢ ನಿರ್ಧಾರ ತೆಗೆದುಕೊಂಡರೆ ನಂತರ ನಮ್ಮನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ.

ಪ್ರಭಾತ್ ವಿಡಿಯೋವನ್ನು ಅಕ್ಷಯ್ ಕುಮಾರ್ ಕೂಡಾ ಶೇರ್ ಮಾಡಿದ್ದಾರೆ.  ಅಷ್ಟು ದೂರ ನಡೆಯಲು ಕಾರಣವೇನು ಎಂಬುದನ್ನು  ಅಭಿಮಾನಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾನೆ. ನಡಿಗೆಯ ಬಗ್ಗೆ ಸಂದೇಶ ಸಾರಲು ಈ ರೀತಿ ಮಾಡಿದ್ದಾಗಿ ತಿಳಿಸಿದ್ದಾರೆ. ಎಲ್ಲರೂ ನಡೆಯಬೇಕೆಂದು ಅವರು ಹೇಳಿದ್ದಾರೆ. 

ಅಭಿಯಾನಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಪ್ಯಾಡ್ ಮನ್, ಇಂತಹ ಹುಚ್ಚು ಅಭಿಮಾನವನ್ನು ತಡೆಗಟ್ಟುವಂತೆ ಇತರ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಎಲ್ಲರ ಪ್ರೀತಿಗೆ ಕೃತಜ್ಞನಾಗಿರುತ್ತೇನೆ ಆದರೆ, ಇಂತಹ ಕೆಲಸ ಮಾಡಬೇಡಿ. ನಿಮ್ಮ ಉತ್ತಮ ಜೀವನಕ್ಕಾಗಿ ಶಕ್ತಿ, ಸಮಯ, ಸಂಪನ್ಮೂಲದ ಕಡೆಗೆ ಗಮನ ನೀಡಿ, ಅದು ನನ್ನಗೆ ಸಂತೋಷವನ್ನುಂಟುಮಾಡುತ್ತದೆ ಎಂದು ಅಕ್ಷಯ್ ಕುಮಾರ್ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT