ಬೋನಿ ಕಪೂರ್-ಊರ್ವಶಿ ರೌಟೇಲಾ 
ಬಾಲಿವುಡ್

ತಮ್ಮ ಹಿಂಭಾಗ ಮುಟ್ಟಿದ್ದ ಬೋನಿ ಕಪೂರ್ ವಿಡಿಯೋ ವೈರಲ್, ಜಾಲತಾಣಗಳ ವಿರುದ್ಧ 'ಐರಾವತ'ನ ಬೆಡಗಿ ಊರ್ವಶಿ ಗರಂ, ವಿಡಿಯೋ!

ಮದುವೆ ಸಮಾರಂಭದ ವೇಳೆ ಬಾಲಿವುಡ್ ನ ಹಿರಿಯ ನಿರ್ಮಾಪಕ ಬೋನಿ ಕಪೂರ್ ತಮ್ಮ ಹಿಂಭಾಗ ಮುಟ್ಟಿದ್ದರು. ಈ ವಿಡಿಯೋ ವೈರಲ್ ಮಾಡಿದ್ದ ಸಾಮಾಜಿಕ ಜಾಲತಾಣಗಳ ವಿರುದ್ಧ ಐದು ತಿಂಗಳ ಬಳಿಕ ಇದೀಗ ಐರಾವತ ಬೆಡಗಿ ಊರ್ವಶಿ ರೌಟೇಲಾ ಗರಂ ಆಗಿದ್ದಾರೆ.

ಮುಂಬೈ: ಮದುವೆ ಸಮಾರಂಭದ ವೇಳೆ ಬಾಲಿವುಡ್ ನ ಹಿರಿಯ ನಿರ್ಮಾಪಕ ಬೋನಿ ಕಪೂರ್ ತಮ್ಮ ಹಿಂಭಾಗ ಮುಟ್ಟಿದ್ದರು. ಈ ವಿಡಿಯೋ ವೈರಲ್ ಮಾಡಿದ್ದ ಸಾಮಾಜಿಕ ಜಾಲತಾಣಗಳ ವಿರುದ್ಧ ಐದು ತಿಂಗಳ ಬಳಿಕ ಇದೀಗ ಐರಾವತ ಬೆಡಗಿ ಊರ್ವಶಿ ರೌಟೇಲಾ ಗರಂ ಆಗಿದ್ದಾರೆ.

ಕಳೆದ ಏಪ್ರಿಲ್ ನಲ್ಲಿ ಮದುವೆ ಸಮಾರಂಭಕ್ಕೆ ಬಾಲಿವುಡ್ ಗಣ್ಯರು ಆಗಮಿಸಿದ್ದರು. ಈ ವೇಳೆ ಫೋಟೋ ತೆಗೆಸಿಕೊಳ್ಳುತ್ತಿದ್ದ ವೇಳೆ ಬೋನಿ ಕಪೂರ್ ಅವರು ಊರ್ವಶಿ ರೌಟೇಲಾ ಅವರ ಹಿಂಭಾಗವನ್ನು ಮುಟ್ಟಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಆದರೆ ಅಂದು ಇದಕ್ಕೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಐದು ತಿಂಗಳ ಬಳಿಕ ಇದೀಗ ಬೇಸರ ವ್ಯಕ್ತಪಡಿಸಿದ್ದಾರೆ.

ಮದುವೆ ಕಾರ್ಯಕ್ರಮವ ವೇಳೆ ಬೋನಿ ಕಪೂರ್ ಅವರ ಕೈ ನನ್ನ ಹಿಂಭಾಗಕ್ಕೆ ಟಚ್ ಆಗಿತ್ತು. ಇದಕ್ಕೆ ನಾನು ಬೇರೆ ಅರ್ಥ ಕಲ್ಪಿಸಿರಲಿಲ್ಲ. ಆದರೆ ಬೆಳಗಾಗುವಷ್ಟರಲ್ಲಿ ವಿಡಿಯೋ ವೈರಲ್ ಆಗಿತ್ತು. ಇದರಿಂದ ನನಗೆ ತುಂಬಾ ಮುಜುಗರವಾಗಿತ್ತು. ಸತತ ಒಂದು ವಾರ ಇದೇ ವಿಚಾರವಾಗಿ ಪತ್ರಿಕೆ, ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿತ್ತು.

ಈ ವಿಚಾರವಾಗಿ ನಾನು ಬೋನಿ ಕಪೂರ್ ಅವರನ್ನು ವಿಚಾರಿಸಿದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡದೆ, ವಿಡಿಯೋವನ್ನು ಕೆಟ್ಟದಾಗಿ ಬಿಂಬಿಸಿದವರ ವಿರುದ್ಧ ಬೇಸರ ಹೊರಹಾಕಿದ್ದರು. ಬೋನಿ ಅವರ ಮೇಲೆ ನನಗೆ ಅಪಾರ ಗೌರವವಿದೆ. ಆದರೆ ಸಾಮಾಜಿಕ ಜಾಲತಾಣಗಳು ಮಾತ್ರ ಈ ವಿಡಿಯೋವನ್ನು ವೈರಲ್ ಮಾಡಿದ್ದಕ್ಕೆ ಊರ್ವಶಿ ಗರಂ ಆಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ