'ಕಂಗನಾ ಸುಶಾಂತ್ ಸ್ನೇಹಿತೆ, ಪ್ರತಿನಿಧಿಯಲ್ಲ' 
ಬಾಲಿವುಡ್

"ಕಂಗನಾ ಸುಶಾಂತ್ ಸ್ನೇಹಿತೆ, ಪ್ರತಿನಿಧಿಯಲ್ಲ"

ಕಂಗನಾ ರಣಾವತ್ ಬಾಲಿವುಡ್ ನಲ್ಲಿರುವ ಸ್ವಜನ ಪಕ್ಷಪಾತದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದ ಬೆನ್ನಲ್ಲೂ ಆಕೆ ಬಾಲಿವುಡ್ ನ ಸ್ವಜನ ಪಕ್ಷಪಾತದ ಬಗ್ಗೆ ಮಾತನಾಡಿದ್ದರು. 

ನವದೆಹಲಿ: ಕಂಗನಾ ರಣಾವತ್ ಬಾಲಿವುಡ್ ನಲ್ಲಿರುವ ಸ್ವಜನ ಪಕ್ಷಪಾತದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದಾರೆ. ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ಪ್ರಕರಣದ ಬೆನ್ನಲ್ಲೂ ಆಕೆ ಬಾಲಿವುಡ್ ನ ಸ್ವಜನ ಪಕ್ಷಪಾತದ ಬಗ್ಗೆ ಮಾತನಾಡಿದ್ದರು. 

ಈ ಬಗ್ಗೆ ಸುಶಾಂತ್ ಸಿಂಗ್ ರಜ್ಪೂತ್ ಅವರ ಸಾವಿನ ಪ್ರಕರಣದಲ್ಲಿ ಆತನ ಕುಟುಂಬ ಸದಸ್ಯರನ್ನು ಪ್ರತಿನಿಧಿಸುತ್ತಿರುವ ವಕೀಲ ವಿಕಾಸ್ ಸಿಂಗ್ ಪ್ರತಿಕ್ರಿಯೆ ನೀಡಿದ್ದು,  ಕಂಗನಾ ರಣಾವತ್ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತೆಯೂ ಅಲ್ಲ, ಪ್ರತಿನಿಧಿಯೂ ಅಲ್ಲ ಎಂದು ಹೇಳಿದ್ದಾರೆ. 

ಬಾಲಿವುಡ್ ನಲ್ಲಿ ಅಸ್ತಿತ್ವದಲ್ಲಿರುವ ಸ್ವಜನ ಪಕ್ಷಪಾತದ ಬಗ್ಗೆ ಕಂಗನಾ ಸಮಾನ್ಯವಾಗಿ ಮಾತನಾಡಿದ್ದಾರಷ್ಟೇ, ಅವರು ಪ್ರಶ್ನಿಸುತ್ತಿರುವ ಸಂಗತಿಗಳು ಸರಿಯಾಗಿದೆ ಆದರೆ ಆಕೆ ಸುಶಾಂತ್ ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೂ ಅಲ್ಲ. ಸಿನಿಮಾ ಕ್ಷೇತ್ರದಲ್ಲಿರುವ ಸಾಮಾನ್ಯ ಸಮಸ್ಯೆಗಳನ್ನಷ್ಟೇ ಅವರು ಹೇಳಿದ್ದಾರೆಂದು ವಕೀಲರು ತಿಳಿಸಿದ್ದಾರೆ. 

ಜೂ.14 ರಂದು ಸುಶಾಂತ್ ಸಿಂಗ್ ಸಾವನ್ನಪ್ಪಿದ್ದಾಗ ವಿಡಿಯೋ ಅಪ್ ಲೋಡ್ ಮಾಡಿದ್ದ ನಟಿ ಕಂಗನಾ, ಮೂವಿ ಮಾಫಿಯಾ, ನೆಪೋ-ಕಿಡ್ಸ್ ಬಗ್ಗೆ ಮಾತನಾಡಿದ್ದರು. ಈ ಮೂಲಕ ಮತ್ತೆ ನೆಪೋಟಿಸಮ್ ಚರ್ಚೆ ಮುನ್ನೆಲೆಗೆ ಬಂದಿತ್ತು. ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿದಾಗಲೂ ಕಂಗನಾ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT