ಸುಶಾಂತ್ ಸಿಂಗ್ ಸಾವಿನ ತನಿಖೆ: 'ಆಸ್ಪತ್ರೆಯಲ್ಲಿ ರಿಯಾ ಚಕ್ರವರ್ತಿ ತಪ್ಪಿತಸ್ಥರಂತೆ ವರ್ತಿಸುತ್ತಿದ್ದರು' 
ಬಾಲಿವುಡ್

ಸುಶಾಂತ್ ಸಿಂಗ್ ಸಾವಿನ ತನಿಖೆ: "ಆಸ್ಪತ್ರೆಯಲ್ಲಿ ರಿಯಾ ಚಕ್ರವರ್ತಿ ತಪ್ಪಿತಸ್ಥರಂತೆ ವರ್ತಿಸುತ್ತಿದ್ದರು" 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡ ಬೆನ್ನಲ್ಲೆ ಪ್ರಮುಖ ವ್ಯಕ್ತಿಯೊಬ್ಬರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. 

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜ್ಪೂತ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡ ಬೆನ್ನಲ್ಲೆ ಪ್ರಮುಖ ವ್ಯಕ್ತಿಯೊಬ್ಬರು ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ. 

ಮೃತ ಬಾಲಿವುಡ್ ನಟನ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ತರಲಾಗಿತ್ತು. ಈ ವೇಳೆಯಲ್ಲಿ ಸುಶಾಂತ್ ಸಿಂಗ್ ರಜ್ಪೂತ್ ಅವರ ಗೆಳತಿ ರಿಯಾ ಚಕ್ರವರ್ತಿ ಅಪರಾಧಿಯಂತೆ ವರ್ತಿಸುತ್ತಿದ್ದರು, ಸುಶಾಂತ್ ಪಾರ್ಥಿವ ಶರೀರದ ಮೇಲೆ ಕೈಯ್ಯಿಟ್ಟು ಕ್ಷಮೆ ಕೇಳುತ್ತಿದ್ದರು ಎಂದು ಆಸ್ಪತ್ರೆಯಲ್ಲೇ ಇದ್ದ ಕರಣಿ ಸೇನಾದ ಸದಸ್ಯನೋರ್ವ ಹೇಳಿಕೆ ನೀಡಿದ್ದಾರೆ. 

ಮರಣೋತ್ತರ ಪರೀಕ್ಷೆ ನಡೆದ ಬಳಿಕ ರಿಯಾ ಚಕ್ರವರ್ತಿ ಪಾರ್ಥಿವ ಶರೀರವನ್ನು ನೋಡಲು ಮನವಿ ಮಾಡಿದ್ದರು, ನಾನೇ ಆಸ್ಪತ್ರೆ ಸಿಬ್ಬಂದಿಗಳಿಗೆ ಮನವಿ ಮಾಡಿ ಪಾರ್ಥಿವ ಶರೀರವನ್ನು ನೋಡಲು ಅವಕಾಶ ಸಿಗುವಂತೆ ಮಾಡಿದೆ. ಪಾರ್ಥಿವ ಶರೀರವನ್ನು ನೋಡುತ್ತಿದ್ದಂತೆಯೇ ರಿಯಾ ಚಕ್ರವರ್ತಿ ಆತನ ಎದೆಯ ಮೇಲೆ ಕೈಯ್ಯಿಟ್ಟು ಕ್ಷಮಿಸು ಬಾಬು ಎಂದು ಹೇಳುತ್ತಿದ್ದರು. ಅಪರಾಧಿಯಂತೆ ವರ್ತಿಸುತ್ತಿದ್ದರು ಎಂದು ಸುರ್ಜೀತ್ ಸಿಂಗ್ ರಾಥೋಡ್ ಹೇಳಿದ್ದಾರೆ. 

ಸಿಬಿಐ ತಮ್ಮನ್ನು ತನಿಖೆಗೆ ಹಾಜರಾಗುವಂತೆ ಕೇಳಿದೆ. ಸಂತೋಷದಿಂದ ವಿಚಾರಣೆಗೆ ಹಾಜರಾಗುತ್ತೇನೆ ಎಂದು ರಾಥೋಡ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT