ಸಂದೀಪ್ ಸಿಂಗ್ ಮತ್ತು ಸುಶಾಂತ್ ಸಿಂಗ್ ರಜಪೂತ್(ಸಂಗ್ರಹ ಚಿತ್ರ) 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಸ್ನೇಹಿತ ಸಂದೀಪ್ ಸಿಂಗ್ ಬಿಜೆಪಿ ಕಚೇರಿಗೆ 53 ಸಲ ಕರೆ ಮಾಡಿದ್ದಾರೆ:ಕಾಂಗ್ರೆಸ್ 

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೀವನ ಚರಿತ್ರೆ ಸಿನೆಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ಸಂದೀಪ್ ಎಸ್ ಸಿಂಗ್ ಅವರ ಹೆಸರು ಡ್ರಗ್ ಕೇಸಿನಲ್ಲಿ ಕೇಳಿಬರುತ್ತಿದ್ದು ಅವರು ಬಿಜೆಪಿ ಜೊತೆ ಹೊಂದಿರುವ ಸಂಬಂಧವನ್ನು ತನಿಖೆ ಮಾಡಬೇಕೆಂದು ಕಾಂಗ್ರೆಸ್ ನಿನ್ನೆ ಒತ್ತಾಯಿಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಬಿಜೆಪಿಯಲ್ಲಿರುವವರು ಯಾರು ಸಂದೀಪ್ ಸಿಂಗ್ ನ್ನು ರಕ್ಷಿಸಲು ನೋಡುತ್ತಿದ್ದಾರೆ, ಸುಶಾಂತ್ ಸಿಂಗ್ ರಜಪೂತ್ ಅವರ ನಿಕಟವರ್ತಿಯಾಗಿದ್ದ ಸಂದೀಪ್ ಸಿಂಗ್ ಕಳೆದ ಕೆಲ ತಿಂಗಳಿನಿಂದ ಮಹಾರಾಷ್ಟ್ರ ಬಿಜೆಪಿ ಕಚೇರಿಗೆ 53 ಸಲ ಕರೆ ಮಾಡಿದ್ದಾರೆ. ತಮ್ಮನ್ನು ಡ್ರಗ್ ಕೇಸಿನಿಂದ ರಕ್ಷಿಸಿಕೊಳ್ಳಲು ಅವರು ನೋಡುತ್ತಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಬಾಲಿವುಡ್ ವಿಷಯಗಳಿಗೆ ರಾಜಕೀಯ ಪಕ್ಷಗಳು ತಲೆ ಹಾಕುವುದಿಲ್ಲ. ಆದರೆ ಶಂಕಿತ ವ್ಯಕ್ತಿ ಆಡಳಿತ ಪಕ್ಷದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಗೊತ್ತಾದರೆ ಜನರು ಆತ ಯಾರ ಜೊತೆ ಸಂಪರ್ಕ ಹೊಂದಿದ್ದಾನೆ, ಬಿಜೆಪಿಯಲ್ಲಿ ಯಾರು ಸಂದೀಪ್ ಸಿಂಗ್ ನ್ನು ರಕ್ಷಿಸಲು ನೋಡುತ್ತಿದ್ದಾರೆ ಎಂದು ತಿಳಿಯಬೇಕಾಗಿದೆ, ಸುಶಾಂತ್ ಸಿಂಗ್ ಕೇಸನ್ನು ಸಿಬಿಐಗೆ ವಹಿಸಲು ಸಂದೀಪ್ ಸಿಂಗ್ ಕಾರಣವೇ, ಇಂತಹ ಜನರೇಕೆ ಬಿಜೆಪಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಅಭಿಷೇಕ್ ಸಿಂಘ್ವಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ